AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

World No Tobacco Day 2022: ಧೂಮಪಾನ-ತಂಬಾಕು ಬಿಟ್ಟು ನೋಡಿ, ನಿಮ್ಮ ಶ್ವಾಸಕೋಶವೇ ನಿಮಗೆ ಥ್ಯಾಂಕ್ಸ್​ ಹೇಳುತ್ತೆ

World No Tobacco Day: ತಂಬಾಕು, ಧೂಮಪಾನ ಸೇವನೆಯಿಂದ ವ್ಯಕ್ತಿ ತನ್ನ ಬದುಕನ್ನೇ ಅವನತಿಯತ್ತ ಕೊಂಡೊಯ್ಯುತ್ತಾನೆ. ಒಮ್ಮೆ ಈ ಎಲ್ಲಾ ದುರಭ್ಯಾಸಗಳನ್ನು ಬಿಟ್ಟು ನೋಡಿ ನಿಮ್ಮ ಶ್ವಾಸಕೋಶವೇ ನಿಮಗೆ ಧನ್ಯವಾದ ಹೇಳುತ್ತೆ.

World No Tobacco Day 2022: ಧೂಮಪಾನ-ತಂಬಾಕು ಬಿಟ್ಟು ನೋಡಿ, ನಿಮ್ಮ ಶ್ವಾಸಕೋಶವೇ ನಿಮಗೆ ಥ್ಯಾಂಕ್ಸ್​ ಹೇಳುತ್ತೆ
World No Tobacco Day 2022
TV9 Web
| Updated By: ನಯನಾ ರಾಜೀವ್|

Updated on: May 31, 2022 | 7:30 AM

Share

ತಂಬಾಕು, ಧೂಮಪಾನ ಸೇವನೆಯಿಂದ ವ್ಯಕ್ತಿ ತನ್ನ ಬದುಕನ್ನೇ ಅವನತಿಯತ್ತ ಕೊಂಡೊಯ್ಯುತ್ತಾನೆ. ಒಮ್ಮೆ ಈ ಎಲ್ಲಾ ದುರಭ್ಯಾಸಗಳನ್ನು ಬಿಟ್ಟು ನೋಡಿ ನಿಮ್ಮ ಶ್ವಾಸಕೋಶವೇ ನಿಮಗೆ ಧನ್ಯವಾದ ಹೇಳುತ್ತೆ.

ಆರೊಗ್ಯಕ್ಕೆ ದುಷ್ಪರಿಣಾಮ ಬೀರುವ ತಂಬಾಕು ಮತ್ತು ಸಿಗರೇಟ್ ಸೇವನೆಯ ಕುರಿತಾಗಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವ ತಂಬಾಕು ರಹಿತ ದಿನವನ್ನು ಪ್ರತೀ ವರ್ಷ ಮೇ 31ರಂದು ಆಚರಿಸಲಾಗುತ್ತದೆ. ಈ ದಿನದ ಉದ್ದೇಶವು ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಇವುಗಳ ಬಳಕೆಯನ್ನು ಕಡಿಮೆ ಮಾಡುವುದಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯ ವರದಿ ಪ್ರಕಾರ ಪ್ರತಿ ವರ್ಷ 1 ಮಿಲಿಯನ್​ಗಿಂತಲೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ. ಧೂಮಪಾನವನ್ನು ತ್ಯಜಿಸುವುದರ ಮೂಲಕ ನಿಮ್ಮ ಜೀವ ಹಾಗೂ ನಿಮ್ಮವರ ಸುರಕ್ಷತೆಯನ್ನು ಕಾಣವಹುದು. ಧೂಮಪಾನ ಹೊಗೆಯು ಶಿಶುಮರಣ, ನ್ಯುಮೋನಿಯಾ, ಅಸ್ತಮಾ, ಕೆಮ್ಮು ಸೇರಿ ಅನೇಕ ಹೃದಯ ಸಂಬಂಧಿ ಸಮಸ್ಯೆಗಳಿಗೆ ಕಾರಣವಾಗಬಹುದು.

ಧೂಮಪಾನ ಅಥವಾ ತಂಬಾಕು ತ್ಯಜಿಸುವುದರಿಂದ ಏನೇನು ಲಾಭ?

ಹಣ ಉಳಿತಾಯವಾಗುವುದು ಅಧ್ಯಯನವೊಂದರ ಪ್ರಕಾರ ಧೂಮಪಾನ ವ್ಯಸನಿಯು ನಿತ್ಯ ಕನಿಷ್ಠ 10 ಸಿಗರೇಟ್ ಅಥವಾ ಬೀಡಿಯನ್ನು ಸೇದುತ್ತಾನೆ. ಅವನು ಬಳಸುವ ಸಿಗರೇಟ್​ನ ಸಂಸ್ಥೆ ಹೇಳಿರುವಷ್ಟು ಹಣವನ್ನು ನೀಡಿ ಖರೀದಿಸುತ್ತಾನೆ. ಹಣದ ಜತೆಜತೆಗೆ ಆರೋಗ್ಯವನ್ನು ಕೂಡ ಹಾಳು ಮಾಡಿಕೊಳ್ಳುತ್ತಾನೆ. ಒಂದೊಮ್ಮೆ ಧೂಮಪಾನವನ್ನು ಬಿಟ್ಟರೆ ಹಣ ಉಳಿತಾಯವಾಗಿ ನಿಮ್ಮ ಬೇರೆ ಖರ್ಚುಗಳನ್ನು ಪೂರೈಸಲು ಸಹಾಯವಾಗುತ್ತದೆ.

ಪರಿಸರವೂ ಧನ್ಯವಾದ ಹೇಳುತ್ತೆ? ತಂಬಾಕಿನ ಹೊಗೆಯು ವಾಯುಮಾಲಿನ್ಯವನ್ನು ಉಂಟು ಮಾಡುತ್ತದೆ. ಜತೆ ಜತೆಗೆ ನಮ್ಮಂತೆಯೇ ಗಿಡ ಮರಗಳಿಗೂ ಕೂಡ ಜೀವ ಇದೆ ಎಂಬುದನ್ನು ನಾವು ಮರೆಯಬಾರದು. ಧೂಮಪಾನ ತ್ಯಜಿಸುವುದರಿಂದ ಮಾಲಿನ್ಯವನ್ನು ಕಡಿಮೆ ಮಾಡಿ, ಆರೋಗ್ಯಕರ ಗಾಳಿಯನ್ನು ಸೇವನೆ ಮಾಡುವಂತಾಗುತ್ತದೆ.

ಕರ್ನಾಟಕದಲ್ಲಿರುವ ಕ್ಯಾನ್ಸರ್ ಪ್ರಕರಣಗಳೆಷ್ಟು? ಕರ್ನಾಟಕದಲ್ಲಿ ಪ್ರತಿ ವರ್ಷ ಅಂದಾಜು 20,935 (ಒಟ್ಟಾರೆ ಕ್ಯಾನ್ಸರ್‌ ಪ್ರಕರಣಗಳ ಪೈಕಿಲ್ಲಿ ಶೇ.24ರಷ್ಟು) ತಂಬಾಕು ಸಂಬಂಧಿತ ಕ್ಯಾನ್ಸರ್ ಆಗಿದೆ. ನಿಗದಿತ ಯಾವುದೇ ಸಮಯದಲ್ಲಿ 56,524 ರೋಗಿಗಳು ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಬೆಂಗಳೂರಿನಲ್ಲಿ ತಂಬಾಕು ಸಂಬಂಧಿತ ಕ್ಯಾನ್ಸರ್ ಪ್ರಕರಣಗಳನ್ನು ಗಮನಿಸಲಾಗಿದೆ.

ವಿಶ್ವ ತಂಬಾಕು ರಹಿತ ದಿನದ ಇತಿಹಾಸ ಕನಿಷ್ಟ 24 ಗಂಟೆಗಳ ಕಾಲವಾದರೂ ತಂಬಾಕು ಸೇವನೆಯನ್ನು ತಡೆಯಲು ವಿಶ್ವ ಸಂಸ್ಥೆ ಮೇ 1988 ರಂದು ವಿಶ್ವ ತಂಬಾಕು ರಹಿತ ದಿನವನ್ನು ಜಾರಿಗೆ ತಂದಿತು. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆ 2008ರಲ್ಲಿ ತಂಬಾಕಿನ ಕುರಿತಾದ ಜಾಹಿರಾತುಗಳನ್ನು ನಿಷೇಧಿಸಿತು.‌ ಬಹುಶಃ ಜಾಹಿರಾತುಗಳು ಯುವಕರನ್ನು ಧೂಮಪಾನದತ್ತ ಅಥವಾ ತಂಬಾಕು ಸೇವನೆಯತ್ತ ಸೆಳೆಯಲು ಸಹಾಯ ಮಾಡುತ್ತವೆ ಎಂದು ಭಾವಿಸಿ, ಜಾಹಿರಾತುಗಳಿಗೆ ನಿಷೇಧ ಹೇರಿತ್ತು.

ಆರೋಗ್ಯ ಸಂಬಂಧಿ ಸಮಸ್ಯೆಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ