AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೀಟನಾಶಕ ಬದಲು ಕಳೆನಾಶಕ ಸಿಂಪಡಣೆ, ಕಾಫಿ ತೋಟ ಭಸ್ಮ: ಬೇಸತ್ತು ವಿಷ ಸೇವಿಸಿದ ರೈಟರ್

ಕಾಫಿ ತೋಟಕ್ಕೆ ಕೀಟನಾಶಕದ ಬದಲು ಕಳೆನಾಶಕ ಸಿಂಪಡಿಸಿ ಗಿಡಗಳು ನಾಶವಾದ ಪರಿಣಾಮ ತೋಟದ ರೈಟರ್ ವಿಷ ಸೇವಿಸಿದ ಘಟನೆ ಚಿಕ್ಕಮಗಳೂರಿನ ಮಾಕೋಡಿನಲ್ಲಿ ನಡೆದಿದೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಾಕೋಡಿನ ಕಲ್ಲೇಗೌಡ ಎಂಬುವವರಿಗೆ ಸೇರಿದ 12 ಎಕರೆ ಕಾಫಿತೋಟದಲ್ಲಿ ಕಾಂಟಾಪ್ ಔಷಧಿ ಸಿಂಪಡಿಸುವ ಬದಲು ರೌಂಡಪ್ ಕಳೆನಾಶಕ ಹೊಡೆದಿದ್ದರಿಂದ ಇಡೀ 12 ಎಕರೆಯಲ್ಲಿನ ಕಾಫಿಗಿಡ ಹಾಗೂ ಕರಿಮೆಣಸಿನ ಬಳ್ಳಿ ಸಂಪೂರ್ಣ ನಾಶವಾಗಿದೆ. ಕಲ್ಲೇಗೌಡ ಅವರ ಪುತ್ರ ಅಶೋಕ್​ ಗೌಡ ಕೆಲಸದ ನಿಮಿತ್ತ ಶಿವಮೊಗ್ಗದ ಬಳಿ ನೆಲೆಸಿದ್ದು ವೀರಭದ್ರ […]

ಕೀಟನಾಶಕ ಬದಲು ಕಳೆನಾಶಕ ಸಿಂಪಡಣೆ, ಕಾಫಿ ತೋಟ ಭಸ್ಮ: ಬೇಸತ್ತು ವಿಷ ಸೇವಿಸಿದ ರೈಟರ್
ಸಾಧು ಶ್ರೀನಾಥ್​
| Edited By: |

Updated on:Nov 20, 2020 | 12:22 PM

Share

ಕಾಫಿ ತೋಟಕ್ಕೆ ಕೀಟನಾಶಕದ ಬದಲು ಕಳೆನಾಶಕ ಸಿಂಪಡಿಸಿ ಗಿಡಗಳು ನಾಶವಾದ ಪರಿಣಾಮ ತೋಟದ ರೈಟರ್ ವಿಷ ಸೇವಿಸಿದ ಘಟನೆ ಚಿಕ್ಕಮಗಳೂರಿನ ಮಾಕೋಡಿನಲ್ಲಿ ನಡೆದಿದೆ. ಮಲ್ಲಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಮಾಕೋಡಿನ ಕಲ್ಲೇಗೌಡ ಎಂಬುವವರಿಗೆ ಸೇರಿದ 12 ಎಕರೆ ಕಾಫಿತೋಟದಲ್ಲಿ ಕಾಂಟಾಪ್ ಔಷಧಿ ಸಿಂಪಡಿಸುವ ಬದಲು ರೌಂಡಪ್ ಕಳೆನಾಶಕ ಹೊಡೆದಿದ್ದರಿಂದ ಇಡೀ 12 ಎಕರೆಯಲ್ಲಿನ ಕಾಫಿಗಿಡ ಹಾಗೂ ಕರಿಮೆಣಸಿನ ಬಳ್ಳಿ ಸಂಪೂರ್ಣ ನಾಶವಾಗಿದೆ.

ಕಲ್ಲೇಗೌಡ ಅವರ ಪುತ್ರ ಅಶೋಕ್​ ಗೌಡ ಕೆಲಸದ ನಿಮಿತ್ತ ಶಿವಮೊಗ್ಗದ ಬಳಿ ನೆಲೆಸಿದ್ದು ವೀರಭದ್ರ ಎಂಬುವವರನ್ನು ಕಾಫಿತೋಟದ ರೈಟರನ್ನಾಗಿ ನೇಮಿಸಿದ್ದರು. ವೀರಭದ್ರ ಅವರೇ ತೋಟದ ಉಸ್ತುವಾರಿ ನೋಡಿಕೊಳ್ಳುತ್ತಿದ್ದು ಕಳೆದ ವಾರ ಕಾಫಿ ಗಿಡಗಳಿಗೆ ಔಷಧಿ ಹೊಡೆಸಲು ಕಾರ್ಮಿಕರನ್ನು ಕರೆಸಿದ್ದಾರೆ.

ಆದರೆ, ಗಡಿಬಿಡಿಯಲ್ಲಿ ಕಾಫಿಗೆ ಸಿಂಪಡಿಸಬೇಕಿದ್ದ ಕಾಂಟಾಪ್ ಔಷಧಿಯ ಬದಲು ರೌಂಡಪ್ ಕಳೆನಾಶಕವನ್ನು ಕಾರ್ಮಿಕರಿಗೆ ನೀಡಿದ್ದಾರೆ. ಕಳೆನಾಶಕ ಸಿಂಪಡಿಸಿದ ಎರಡು ಮೂರು ದಿನಗಳ ನಂತರ ಫಸಲು ಹೊತ್ತು ನಳನಳಿಸುತ್ತಿದ್ದ ಗಿಡಗಳು ಏಕಾಏಕಿ ಬಾಡಲು ಶುರುವಾದಾಗ ಆದ ಅನಾಹುತ ಅರಿವಿಗೆ ಬಂದಿದೆ. ಇದರಿಂದ ಭಯಗೊಂಡ ವೀರಭದ್ರ ಅದೇ ಕಳೆನಾಶಕವನ್ನು ಕುಡಿದಿದ್ದು ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಳೆದ ತಿಂಗಳು ಶಿರಸಿ ಸಮೀಪದ ರೈತನೊಬ್ಬ ಎರಡೂವರೆ ಎಕರೆ ಪ್ರದೇಶದ ಭತ್ತದ ಹೊಲಕ್ಕೆ ಇದೇ ರೀತಿ ಕಣ್ತಪ್ಪಿನಿಂದ ಕಳೆನಾಶಕ ಹೊಡೆದು ಇಡೀ ಹೊಲವೇ ನಾಶವಾದ ಘಟನೆಯನ್ನು ಇಲ್ಲಿ ಸ್ಮರಿಸಬಹುದು.

ವೀರಭದ್ರ ಅವರು ನೀಡಿದ ಹೇಳಿಕೆಯ ಪ್ರಕಾರ ಇದು ಅಚಾತುರ್ಯದಿಂದ ಆದ ಘಟನೆ. ಆದರೆ, ತನ್ನ ತಪ್ಪಿನಿಂದ ಯಜಮಾನರ ತೋಟ ನಾಶವಾಯಿತು. ಅವರಿಗೆ ಮುಖ ತೋರಿಸುವುದು ಹೇಗೆ? ಎಂದು ಬೇಸತ್ತು ತೋಟಕ್ಕೆ ಸಿಂಪಡಿಸಿದ್ದ ರೌಂಡಪ್ ಕಳೆನಾಶಕವನ್ನು ಸೇವಿಸಿದ್ದಾರೆ. ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ ಪರಿಣಾಮ ಈಗ ನಿಧಾನವಾಗಿ ಚೇತರಿಸಿಕೊಳ್ತಾ ಇದ್ದು ಮಾಲೀಕ ಅಶೋಕ್ ಗೌಡ ಅವರೇ ಚಿಕಿತ್ಸೆ ಕೊಡಿಸ್ತಾ ಇದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿದ್ದೇವೆ. -ನಂದಿನಿ ಶೆಟ್ಟಿ, ಪಿಎಸ್​ಐ ಮಲ್ಲಂದೂರು ಪೊಲೀಸ್​ ಸ್ಟೇಶನ್

Published On - 12:19 pm, Fri, 20 November 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?