‘ನಮ್ಮ ಗ್ರಾಮ ಸ್ಥಳಾಂತರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ತೇವೆ’

ಯಾದಗಿರಿ: ನಮ್ಮ ಗ್ರಾಮ ಸ್ಥಳಾಂತರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ತೇವೆ ಎಂದು ಶಿವನೂರ ಗ್ರಾಮದ ಸಂತ್ರಸ್ತರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ವಡಗೇರ ತಾಲೂಕಿನ ಶಿವನೂರ ಗ್ರಾಮದಲ್ಲಿ ಭೀಮಾ ನದಿ ನೀರು ನುಗ್ಗಿ ಗ್ರಾಮಸ್ಥರು ಪರದಾಡುವಂತ ಪರಿಸ್ಥಿತಿ ಬಂದಿದೆ. ಹೀಗಾಗಿ ಮನನೊಂದ ಸಂತ್ರಸ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಗ್ರಾಮ ಸ್ಥಳಾಂತರಿಸಲು 30 ವರ್ಷಗಳಿಂದ ಕೇಳಿಕೊಳ್ಳುತ್ತಿದ್ದೇವೆ. ಈಗ ಮತ್ತೆ ಭೀಮಾ ನದಿ ನೀರು ನುಗ್ಗಿ ಗ್ರಾಮ ಜಲಾವೃತವಾಗಿದೆ. ಹೀಗಾಗಿ ನಾವು ಪರಿಹಾರ ಕೇಂದ್ರಕ್ಕೆ ಬರಬೇಕಾದ ಸ್ಥಿತಿ ಬಂದಿದೆ. ಈಗ ನೀವು […]

ನಮ್ಮ ಗ್ರಾಮ ಸ್ಥಳಾಂತರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ತೇವೆ
ಆಯೇಷಾ ಬಾನು

Updated on: Oct 17, 2020 | 12:53 PM

ಯಾದಗಿರಿ: ನಮ್ಮ ಗ್ರಾಮ ಸ್ಥಳಾಂತರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ತೇವೆ ಎಂದು ಶಿವನೂರ ಗ್ರಾಮದ ಸಂತ್ರಸ್ತರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ವಡಗೇರ ತಾಲೂಕಿನ ಶಿವನೂರ ಗ್ರಾಮದಲ್ಲಿ ಭೀಮಾ ನದಿ ನೀರು ನುಗ್ಗಿ ಗ್ರಾಮಸ್ಥರು ಪರದಾಡುವಂತ ಪರಿಸ್ಥಿತಿ ಬಂದಿದೆ. ಹೀಗಾಗಿ ಮನನೊಂದ ಸಂತ್ರಸ್ತರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಗ್ರಾಮ ಸ್ಥಳಾಂತರಿಸಲು 30 ವರ್ಷಗಳಿಂದ ಕೇಳಿಕೊಳ್ಳುತ್ತಿದ್ದೇವೆ. ಈಗ ಮತ್ತೆ ಭೀಮಾ ನದಿ ನೀರು ನುಗ್ಗಿ ಗ್ರಾಮ ಜಲಾವೃತವಾಗಿದೆ. ಹೀಗಾಗಿ ನಾವು ಪರಿಹಾರ ಕೇಂದ್ರಕ್ಕೆ ಬರಬೇಕಾದ ಸ್ಥಿತಿ ಬಂದಿದೆ. ಈಗ ನೀವು ನಮ್ಮ ಗ್ರಾಮ ಸ್ಥಳಾಂತರಿಸದಿದ್ದರೆ ಇಲ್ಲೇ ಇರ್ತೇವೆ. ಸಾವಾಗಲಿ, ಬದುಕಾಗಲಿ ಪರಿಹಾರ ಕೇಂದ್ರದಲ್ಲೇ ಇರುತ್ತೇವೆ. ಕೇಂದ್ರವನ್ನು ಮಾತ್ರ ನಾವು ಬಿಟ್ಟು ಹೋಗುವುದಿಲ್ಲ. ಶಾಸಕರಿಗೆ ಚುನಾವಣೆ ಇದ್ದಾಗ ಮಾತ್ರ ನಮ್ಮೂರು ನೆನಪಾಗುತ್ತೆ. ಉಳಿದಂತೆ ಯಾವತ್ತೂ ಶಾಸಕರಿಗೆ ನಮ್ಮೂರು ನೆನಪಾಗಲ್ಲ ಎಂದು ಬೆಂಡೆಬೆಂಬಳಿ ಪರಿಹಾರ ಕೇಂದ್ರದಲ್ಲಿರುವ ಸಂತ್ರಸ್ತರು ತಮ್ಮ ಅಳಲು ತೋಡಿಕೊಂಡಿದ್ದಾರೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us