AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂರು ರೂ ವಿಚಾರಕ್ಕೆ ಕೊಲೆ: ತಾಂತ್ರಿಕವಾಗಿ ಅಪಘಾತ ಪ್ರಕರಣದ ರಹಸ್ಯ ಭೇದಿಸಿದ ಯಶವಂತಪುರ ಸಂಚಾರ ಪೊಲೀಸರು

Yeshwanthpur traffic police: ಮೂರು ತಿಂಗಳ ಬಳಿಕ ಅಪಘಾತ ಪ್ರಕರಣ ಕೊಲೆ ಪ್ರಕರಣವಾಗಿ ಟ್ವಿಸ್ಟ್ ಪಡೆದುಕೊಂಡಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಕೊಲೆ ಪ್ರಕರಣ ದಾಖಲಾಗಿತ್ತು. ಈ ಮಧ್ಯೆ, ಯಶವಂತಪುರ ಸಂಚಾರ ಪೊಲೀಸರು CDR , CCTV ಪ್ರಯೋಜನದಿಂದ ತಾಂತ್ರಿಕವಾಗಿ ಅಪಘಾತ ಪ್ರಕರಣದ ರಹಸ್ಯ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನೂರು ರೂ ವಿಚಾರಕ್ಕೆ ಕೊಲೆ: ತಾಂತ್ರಿಕವಾಗಿ ಅಪಘಾತ ಪ್ರಕರಣದ ರಹಸ್ಯ ಭೇದಿಸಿದ ಯಶವಂತಪುರ ಸಂಚಾರ ಪೊಲೀಸರು
ಸಾಂಕೇತಿಕ ಚಿತ್ರ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Dec 17, 2021 | 12:31 PM

ಬೆಂಗಳೂರು: ಬೆಂಗಳೂರಿನಲ್ಲಿ 100 ರೂಪಾಯಿ ವಿಚಾರಕ್ಕೆ ಕೊಲೆಯಲ್ಲಿ ಅಂತ್ಯವಾಗಿದ್ದು, ಮೂರು ತಿಂಗಳ ಬಳಿಕ ಅಪಘಾತ ಪ್ರಕರಣ ಕೊಲೆ ಪ್ರಕರಣವಾಗಿ ಟ್ವಿಸ್ಟ್ ಪಡೆದುಕೊಂಡಿದೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಕೊಲೆ ಪ್ರಕರಣ ದಾಖಲಾಗಿತ್ತು. ಈ ಮಧ್ಯೆ, ಯಶವಂತಪುರ ಸಂಚಾರ ಪೊಲೀಸರು CDR , CCTV ಪ್ರಯೋಜನದಿಂದ ತಾಂತ್ರಿಕವಾಗಿ ಅಪಘಾತ ಪ್ರಕರಣದ ರಹಸ್ಯ ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ಟೋಬರ್ 17 ರಂದು ಪತ್ರೀಕ್ ಮತ್ತು ಸಮಿಷ್ ಎಂಬಿಬ್ಬರ ನಡುವೆ ಗಲಾಟೆ ನಡೆದಿತ್ತು. ಅದರಲ್ಲಿ 31 ವರ್ಷದ ಪತ್ರೀಕ್ ಯಾದವ್ ಎಂಬ ವ್ಯಕ್ತಿ ಮೃತಪಟ್ಟಿದ್ದ. ಮತ್ತಿಕೆರೆ ಬಳಿ ತೂಕ ಹಾಕುವ ತಕ್ಕಡಿಯ ಬಟ್ ನಿಂದ ಪತ್ರೀಕ್ ಯಾದವ್ ತಲೆಗೆ ಸಮಿಷ್ ಹಲ್ಲೆ ಮಾಡಿದ್ದ. ಹಲ್ಲೆ ಬಳಿಕ ವಾಪಸ್ಸು ಮನೆಗೆ ಬಂದ ಪತ್ರೀಕ್ ಗೆ ತ್ರೀವವಾಗಿ ತಲೆ ನೋವು ಕಾಣಿಸಿಕೊಂಡಾಗ ನಿಮಾನ್ಸ್ ಆಸ್ಪತ್ರೆ ಬಳಿಕ, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಮನೆಯವರು ಕೇಳಿದ್ದಕ್ಕೆ ಮತ್ತಿಕೆರೆ ಬಳಿ ಸೆಲ್ಫ್​​ ಆಕ್ಸಿಡೆಂಟ್ ಆಗಿತ್ತು ಎಂದಿದ್ದ ಪತ್ರೀಕ್ ಯಾದವ್. ಅದರೊಂದಿಗೆ, ಸ್ನೇಹಿತರ ಜತೆ ಗಲಾಟೆ ಆಗಿರುವುದನ್ನು ಪತ್ರೀಕ್ ಯಾದವ್ ತನ್ನ ಮನೆಯವರ ಬಳಿ ಮುಚ್ಚಿಟ್ಟಿದ್ದ.

ಆದರೆ ಅಕ್ಟೋಬರ್ 20 ರಂದು ಖಾಸಗಿ ಆಸ್ಪತ್ರೆಯಲ್ಲಿ ಪ್ರತೀಕ್ ಯಾದವ್ ಕೊನೆಯುಸಿರೆಳೆದಿದ್ದ. ಆಸ್ಪತ್ರೆಯ ವತಿಯಿಂದ ಯಶವಂತಪುರ ಸಂಚಾರ ಪೊಲೀಸರಿಗೆ ‌ಅಪಘಾತವಾದ ಬಗ್ಗೆ ಮಾಹಿತಿ ರವಾನೆಯಾಗಿತ್ತು. ಯಶವಂತಪುರ ಸಂಚಾರ ಪೊಲೀಸರು ಹೆಚ್ಚಿನ ತನಿಖೆಗಾಗಿ ಆಸ್ಪತ್ರೆಗೆ ತೆರಳಿ ಮಾಹಿತಿ ಪಡೆದು ಪ್ರಕರಣ ದಾಖಲಿಸಿಕೊಂಡರು. ಬಳಿಕ ಅಪಘಾತ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಸಿಸಿಟಿವಿ ಮತ್ತು ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಿಕೊಂಡರು. ಅದರೆ ಮೃತಪಟ್ಟ ಪತ್ರೀಕ್ ಯಾದವ್ ಹೇಳಿದ್ದಂತೆ ಆ ಸ್ಥಳದಲ್ಲಿ ಅಕ್ಟೋಬರ್ 17 ರಂದು ಯಾವುದೇ ಅಪಘಾತ ನಡೆದಿಲ್ಲ. ಇತ್ತ‌ ಮರಣೋತ್ತರ ಪರೀಕ್ಷೆ ನಡೆಸುವಾಗ ಸಹ ವೈದ್ಯರು ಅನುಮಾನ ವ್ಯಕ್ತಪಡಿಸಿದ್ದರು. ತ್ರೀವವಾಗಿ, ಬಲವಾದ ವಸ್ತುವಿನಿಂದ ಹಲ್ಲೆಯಾಗಿ ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಲ್ಲಿ ದೃಢಪಟ್ಟಿತ್ತು.

ಈ ಹಿನ್ನೆಲೆಯಲ್ಲಿ‌ ಪಶ್ಚಿಮ ಸಂಚಾರಿ ವಿಭಾಗ ಡಿಸಿಪಿ ಕುಲದೀಪ್ ಜೈನ್ ಅವರು ತನಿಖೆಗೆ ಆದೇಶ ಮಾಡಿದ್ದರು. ಎರಡು ದಿನಗಳ ಹಿಂದೆ ಪೊಲೀಸರ ಕೈ ಸೇರಿದ ಪೋಸ್ಟ್ ಮಟರ್ಮ್ ವರದಿಯಲ್ಲಿ ಕೊಲೆ ಎಂಬುದು ದೃಢಪಟ್ಟಿತ್ತು. ಅದರಂತೆ ಯಶವಂತಪುರ ಪೊಲೀಸರು ಕೊಲೆ ಪ್ರಕರಣವನ್ನು ಕೊಡಿಗೆಹಳ್ಳಿ ಪೊಲೀಸರಿಗೆ ವರ್ಗಾವಣೆ ಮಾಡಿದ್ದಾರೆ. ಇದೀಗ, ಕೋಡಿಗೇಹಳ್ಳಿ ಪೊಲೀಸರಿಂದ ಆರೋಪಿ ಸಮೀಷ್ ಬಂಧನವಾಗಿದೆ. ಅದು ಮಟನ್ ಅಂಗಡಿಯಲ್ಲಿ ನಡೆದಿದ್ದ ಗಲಾಟೆಯಾಗಿದ್ದು, ನೂರು ರೂಪಾಯಿ ವಿಚಾರಕ್ಕೆ ಹಲ್ಲೆ ನಡೆಸಿದ್ದ ಎಂದು ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದೆ.

Published On - 12:09 pm, Fri, 17 December 21

ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಸೇನೆ ಹೇಳುವುದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ: ರಾಮಲಿಂಗಾರೆಡ್ಡಿ
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಗುರುವಿನ ಮನೆಯಲ್ಲೇ ಶನಿ; ಹೇಗಿರಿದೆ ಈ ವರ್ಷ ಮೀನ ರಾಶಿಯವರ ಭವಿಷ್ಯ?
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಕುಂಭ ರಾಶಿಗೆ ಗುರುವಿನ ನೇರ ದೃಷ್ಟಿ; ಈ ವರ್ಷ ಅದೃಷ್ಟವೋ ಅದೃಷ್ಟ!
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಬಾಗಲಕೋಟೆ: ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ವರ ಹೃದಯಾಘಾತದಿಂದ ಸಾವು
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಗುರು ಸಂಚಾರದ ಪ್ರಭಾವ ಹೇಗಿರಲಿದೆ?
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ಸಂತೋಷ್ ಲಾಡ್​ಗೆ ತಮ್ಮ ಇಲಾಖೆಯಲ್ಲಿ ಏನು ನಡೆದಿದೆಯಂತ ಗೊತ್ತಿಲ್ಲ: ಪ್ರತಾಪ್
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ರಾಕೇಶ್ ಪೂಜಾರಿ ಸಾವಿನ ಬಗ್ಗೆ ಸಾಕಷ್ಟು ವದಂತಿ; ರೂಮ್​ಮೇಟ್ ಹೇಳಿದ್ದೇನು?
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ವಿಜಯೇಂದ್ರ
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಪಕ್ಷದ ಮುಖಂಡರ ಒತ್ತಾಯಕ್ಕೆ ಮಣಿದು ಸ್ಪರ್ಧೆ: ಡಿಕೆ ಸುರೇಶ್
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ
ಗುರು ಸಂಚಾರ; ಧನು ರಾಶಿಯವರಿಗೆ ಅದೃಷ್ಟ,ಐಶ್ವರ್ಯ ಕೂಡಿ ಬರಲಿದೆ