AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲಿದೆ ಕನಿಷ್ಠ ಬೆಂಬಲ ಬೆಲೆ ಎಂದು ಅಂಕಿ-ಅಂಶಗಳ ಜತೆಗೆ ಸರ್ಕಾರದ ವಿರುದ್ಧ ಯೋಗೇಂದ್ರ ಯಾದವ್ ಕಿಡಿ

Minimum Support Price (MSP): ರೈತರಿಗೆ ಕನಿಷ್ಠ ಬೆಂಬಲ ಸಿಗುತ್ತಿದೆಯೇ ಎಂದು ಪ್ರತ್ಯಕ್ಷವಾಗಿ ಪರಾಂಬರಿಸಿ ಅದರ ಫಲಿತಾಂಶವನ್ನು ಬೆಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿ ಅಂಕಿ- ಅಂಶಗಳ ಸಹಿತ ತೆರೆದಿಟ್ಟರು ಯೋಗೇಂದ್ರ ಯಾದವ್.

ಎಲ್ಲಿದೆ ಕನಿಷ್ಠ ಬೆಂಬಲ ಬೆಲೆ ಎಂದು ಅಂಕಿ-ಅಂಶಗಳ ಜತೆಗೆ ಸರ್ಕಾರದ ವಿರುದ್ಧ ಯೋಗೇಂದ್ರ ಯಾದವ್ ಕಿಡಿ
ಸಾಂದರ್ಭಿಕ ಚಿತ್ರ
Srinivas Mata
| Edited By: |

Updated on: Mar 07, 2021 | 9:44 PM

Share

ಬೆಂಗಳೂರು: ದೇಶದ ರೈತರು ಕನಿಷ್ಠ ಬೆಂಬಲ ಬೆಲೆಯನ್ನು ಎಲ್ಲೂ ಸಂಪೂರ್ಣವಾಗಿ ಪಡೆದುಕೊಳ್ಳುತ್ತಿಲ್ಲ ಎಂಬುದನ್ನು ಮಾರುಕಟ್ಟೆಯಲ್ಲೇ ಸಾಕ್ಷಾತ್ ತೋರಿಸುವ ಮೂಲಕ ಸಾಬೀತುಪಡಿಸುವ ಆಂದೋಲನಕ್ಕೆ ಕಲಬುರ್ಗಿಯಿಂದ ಚಾಲನೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾದ ಸಂಚಾಲನಾ ಸಮಿತಿಯ ಯೋಗೇಂದ್ರ ಯಾದವ್, ‘ಎಂಎಸ್‍ಪಿ (ಕನಿಷ್ಠ ಬೆಂಬಲ ಬೆಲೆ) ಎಲ್ಲಿದೆ ತೋರಿಸಿ, ಎಂಎಸ್‍ಪಿ ಕೊಡಿಸಿ’ ಎಂದು ಸರ್ಕಾರವನ್ನು ಇಂದು ಕೇಳಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಕರ್ನಾಟಕ ಮಾರುಕಟ್ಟೆಗಳಲ್ಲಿ ತಮಗೆ ಕಂಡಿದ್ದನ್ನು ತಿಳಿಸಿದರು.

ಕಲಬುರ್ಗಿ ಹಾಗೂ ಬಳ್ಳಾರಿಯ ಎಪಿಎಂಸಿಗಳಲ್ಲಿ ಮಾರ್ಚ್ 5, 6ರಂದು ಸ್ವತಃ ಯಾದವ್ ಭೇಟಿ ನೀಡಿದ್ದರು. ಈ ವೇಳೆ ಸಂಯುಕ್ತ ಹೋರಾಟ ಕರ್ನಾಟಕದ ಇತರ ಮುಖಂಡರೂ ಇದ್ದರು. ಸರ್ಕಾರವು ಅಧಿಕೃತವಾಗಿ ಘೋಷಿಸಿದ ಕನಿಷ್ಠ ಬೆಂಬಲ ಬೆಲೆಯನ್ನು ಈ ಮಾರುಕಟ್ಟೆಗಳಲ್ಲಿ ರೈತರು ಪಡೆದುಕೊಂಡ ಬೆಲೆಗೆ ಹೋಲಿಸಿ, ಅಂಕಿ-ಅಂಶಗಳನ್ನು ಮುಂದಿಟ್ಟರು.

ಎಲ್ಲಿದೆ ಕನಿಷ್ಠ ಬೆಂಬಲ ಬೆಲೆ? ಎಂಎಸ್​ಪಿ ಇತ್ತು, ಇದೆ ಮತ್ತು ಮುಂದೆಯೂ ಇರುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಹೇಳಿದ್ದರು. ಆದರೆ ಅದನ್ನು ವಾಸ್ತವದಲ್ಲಿ ಸಾಬೀತು ಮಾಡುವ ಸಲುವಾಗಿಯೇ ಈ ಅಭಿಯಾನ ಕೈಗೊಳ್ಳಲಾಗಿದೆ ಎಂದು ಯೋಗೇಂದ್ರ ಯಾದವ್ ತಿಳಿಸಿದರು. ಬಳ್ಳಾರಿ ಎಪಿಎಂಸಿಯಲ್ಲಿ ಮೆಕ್ಕೆಜೋಳ, ಜೋಳ, ಹೆಸರುಕಾಳು, ತೊಗರಿ ಸೇರಿದಂತೆ ಯಾವುದಕ್ಕೂ ಕನಿಷ್ಠ ಬೆಂಬಲ ಬೆಲೆ ಸಿಕ್ಕಿಲ್ಲ. ಕಲಬುರ್ಗಿಯಲ್ಲಿ ಸದ್ಯಕ್ಕೆ ತೊಗರಿ ಕಾಳಿಗೆ ಸ್ವಲ್ಪ ಹೆಚ್ಚಿನ ಬೆಲೆ ಸಿಗುತ್ತಿದೆ ಎನ್ನುವುದನ್ನು ಬಿಟ್ಟರೆ ಉಳಿದಂತೆ ಯಾವುದೇ ಬೆಳೆಗೂ ಸರ್ಕಾರ ಘೋಷಿಸಿದ ಕನಿಷ್ಠ ಬೆಂಬಲ ಬೆಲೆ ದಕ್ಕಿಲ್ಲ ಎಂದು ಅವರು ಹೇಳಿದರು.

ಇದು ಕೇವಲ ಕರ್ನಾಟಕದ ಸ್ಥಿತಿಯಲ್ಲ, ಇಡೀ ದೇಶದಲ್ಲಿ ರೈತರಿಗೆ ಕನಿಷ್ಠ ಬೆಂಬಲ ಬೆಲೆ ದಕ್ಕಿಲ್ಲ ಎಂದು ಆರೋಪಿಸಿದ ಅವರು, ಪರಿಸ್ಥಿತಿ ಹೀಗಿದೆ. ಕನಿಷ್ಠ ಬೆಂಬಲ ಬೆಲೆ ಇದೆ, ಮುಂದೆಯೂ ಇರುತ್ತದೆ ಎಂಬ ಮಾತನ್ನು ಹೇಗೆ ನಂಬುವುದು? ಹಾಗಾಗಿಯೇ ಕನಿಷ್ಠ ಬೆಂಬಲ ಬೆಲೆಯು ಕಾನೂನಾಗಬೇಕು ಎಂದು ನಾವು ಒತ್ತಾಯಿಸುತ್ತಿದ್ದೇವೆ ಎಂದರು.

ಸರ್ಕಾರದ ಹೇಳಿಕೆ ಪೊಳ್ಳಾಗಿದೆ ಇನ್ನು ಕೃಷಿ ಆರ್ಥಿಕ ತಜ್ಞ ಪ್ರಕಾಶ್ ಕಮ್ಮರಡಿ, ಕಳೆದ ಮೇ ತಿಂಗಳಿನಿಂದ ಇಲ್ಲಿಯವರೆಗೆ ರಾಜ್ಯದ ಎಪಿಎಂಸಿಗಳಲ್ಲಿ ಕೃಷಿ ಉತ್ಪನ್ನಗಳ ವಹಿವಾಟು ಹೇಗೆ ಕಡಿಮೆಯಾಗಿದೆ ಎಂಬ ಅಂಕಿ-ಅಂಶಗಳನ್ನು ತೆರೆದಿಟ್ಟರು. ಎಪಿಎಂಸಿ ಬೈಪಾಸ್ ಕಾಯ್ದೆಯಿಂದ ಎಪಿಎಂಸಿಗಳಿಗೆ ಏನೂ ತೊಂದರೆ ಆಗುವುದಿಲ್ಲ ಎಂಬ ಸರ್ಕಾರದ ಹೇಳಿಕೆ ಪೊಳ್ಳಾಗಿದೆ ಎಂದು ಆರೋಪಿಸಿದರು. ನಿಯಂತ್ರಣ ಹೊಂದಿರುವ ಮಾರುಕಟ್ಟೆಯಾದ ಎಪಿಎಂಸಿಗಳು ಮುಚ್ಚಿಹೋದರೆ ಇನ್ನು ಯಾವ ನಿಯಂತ್ರಣವೂ ಇಲ್ಲದ ಖಾಸಗಿ ಮಾರುಕಟ್ಟೆ ಮಾತ್ರ ಉಳಿದಾಗ ಯಾವ ಸ್ಥಿತಿ ಏರ್ಪಡಬಹುದು ಎಂಬುದನ್ನು ಊಹಿಸಬಹುದು ಎಂದು ಹೇಳಿದರು.

ಸರ್ಕಾರವು ಬೆಂಬಲ ಬೆಲೆ ಘೋಷಿಸಿರುವ ಬೆಳೆಗಳ ಪೈಕಿ 13 ಬೆಳೆಗಳು ಕರ್ನಾಟಕದಲ್ಲಿ ಇದ್ದು, ಆ ಬೆಲೆಯನ್ನು ಕರ್ನಾಟಕದ ರೈತರು ಎಪಿಎಂಸಿಗಳಲ್ಲಿ ಅಧಿಕೃತವಾಗಿ ಪಡೆದುಕೊಂಡಿರುವುದಕ್ಕೆ ಹೋಲಿಸಿದರೆ 3000 ಕೋಟಿ ರೂಪಾಯಿಗೂ ಹೆಚ್ಚು ನಷ್ಟವನ್ನು ಅನುಭವಿಸಿದ್ದಾರೆ. ಸ್ವಾಮಿನಾಥನ್ ಆಯೋಗದಲ್ಲಿ ಶಿಫಾರಸು ಮಾಡಿರುವುದಕ್ಕೂ ಬಿಜೆಪಿಯು ತನ್ನ ಪ್ರಣಾಳಿಕೆಯಲ್ಲಿ ಹೇಳಿದ್ದ ಕನಿಷ್ಠ ಬೆಂಬಲ ಬೆಲೆಗೆ ಹೋಲಿಸಿದರೆ ರೈತರು ಇಪ್ಪತ್ತು ಸಾವಿರ ರೂಪಾಯಿಗೂ ಹೆಚ್ಚು ನಷ್ಟವನ್ನು ಹೊರಬೇಕಾಗಿ ಬಂದಿದೆ ಎಂದು ಅಂಕಿ- ಅಂಶಗಳನ್ನು ಪತ್ರಿಕಾಗೋಷ್ಠಿಯಲ್ಲಿ ಇಡಲಾಯಿತು.

ಇನ್ನು ಈ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಕರ್ನಾಟಕ ರಾಜ್ಯ ರೈತಸಂಘ ಹಸಿರುಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿದರು. ಪಂಜಾಬ್​ನ ಪ್ರಜಾತಾಂತ್ರಿಕ ರೈತ ಸಂಘದ ಸತ್ನಾಮ್ ಸಿಂಗ್, ಹರಿಯಾಣದ ಜೈಕಿಸಾನ್ ಆಂದೋಲನದ ದೀಪಕ್ ಲಂಬಾ, ರೈತನಾಯಕ ಚಾಮರಸ ಪಾಟೀಲ್, ಜನಾಂದೋಲನಗಳ ಮಹಾಮೈತ್ರಿಯ ಎಸ್.ಆರ್.ಹಿರೇಮಠ ಮತ್ತಿತರರಿದ್ದರು.

ಇದನ್ನೂ ಓದಿ: ಕರ್ನಾಟಕ ಬಜೆಟ್ 2021ರಲ್ಲಿ ಕೃಷಿ ಕ್ಷೇತ್ರದ ನಿರೀಕ್ಷೆ ಬಗ್ಗೆ ಪ್ರಕಾಶ್ ಕಮ್ಮರಡಿ ಹೇಳೋದೇನು?

ಇದನ್ನೂ ಓದಿ: ಕರ್ನಾಟಕ ಬಜೆಟ್ 2021: ಗ್ರಾಹಕರು ಖರೀದಿಸುವ ಮೊತ್ತದ ಶೇ 90ರಷ್ಟು ಹಣ ರೈತರ ಕೈ ಸೇರಲಿ- RS ದೇಶಪಾಂಡೆ

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ