AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗೀಶ್ ಗೌಡ ಹತ್ಯೆ ಪ್ರಕರಣ: ಚಂದ್ರಶೇಖರ ಇಂಡಿ ಶಕುನಿ ಎಂದ ಬಸವರಾಜ ಮುತ್ತಗಿ

ನಾನು ಮತ್ತು ವಿನಯ್ ಕುಲಕರ್ಣಿ ಒಟ್ಟಾಗಿ ಊಟ ಮಾಡಿದ್ದೇವೆ. ಅವರು ಊಟದಲ್ಲಿ ವಿಷವನ್ನು ಹಾಕಿದ್ದರೂ ನಾನು ತಿನ್ನುತ್ತಿದ್ದೆ ಎಂದು ತಮ್ಮ ಮತ್ತು ವಿನಯ್ ಕುಲಕರ್ಣಿ ನಡುವಿನ ಸಂಬಂಧದ ಬಗ್ಗೆ ವಿವರಣೆ ನೀಡಿದ್ದಾರೆ.

ಯೋಗೀಶ್ ಗೌಡ ಹತ್ಯೆ ಪ್ರಕರಣ: ಚಂದ್ರಶೇಖರ ಇಂಡಿ ಶಕುನಿ ಎಂದ ಬಸವರಾಜ ಮುತ್ತಗಿ
ವಿನಯ್​ ಕುಲಕರ್ಣಿ(ಎಡ); ಬಸವರಾಜ್ ಮುತ್ತಗಿ (ಬಲ)
TV9 Web
| Edited By: |

Updated on:Apr 07, 2022 | 10:39 AM

Share

ಧಾರವಾಡ: ವಿನಯ್ ಕುಲಕರ್ಣಿ ಸೋದರಮಾವ ಚಂದ್ರಶೇಖರ ಇಂಡಿ ವಿರುದ್ಧ ಯೋಗೀಶ್ ಗೌಡ ಹತ್ಯೆ ಪ್ರಕರಣದ ಆರೋಪಿ ಬಸವರಾಜ ಮುತ್ತಗಿ ಕಿಡಿಕಾರಿದ್ದಾರೆ. ಚಂದ್ರಶೇಖರ ಇಂಡಿ ಶಕುನಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ಮತ್ತು ವಿನಯ್ ಕುಲಕರ್ಣಿ ಒಟ್ಟಾಗಿ ಊಟ ಮಾಡಿದ್ದೇವೆ. ಅವರು ಊಟದಲ್ಲಿ ವಿಷವನ್ನು ಹಾಕಿದ್ದರೂ ನಾನು ತಿನ್ನುತ್ತಿದ್ದೆ ಎಂದು ತಮ್ಮ ಮತ್ತು ವಿನಯ್ ಕುಲಕರ್ಣಿ ನಡುವಿನ ಸಂಬಂಧದ ಬಗ್ಗೆ ವಿವರಣೆ ನೀಡಿದ್ದಾರೆ.

ಅಂದಿನ ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ CBI ತನಿಖೆ ನಡೆಯುತ್ತಿದೆ. ಪ್ರಕರಣದ ಆರೋಪಿಯಾದ ಬಸವರಾಜ ಮುತ್ತಗಿ ಹತ್ಯೆಗೆ ಸುಪಾರಿ ನೀಡಿರುವ ಬಗ್ಗೆ ಇಂದು ವಿಚಾರಣೆ ನಡೆದಿದೆ.

ನಾವು ಭಾವನೆಗಳ ಜೊತೆ ಜೀವನ ಮಾಡುವಂತಹವರು. ಆದ್ರೆ ಚಂದ್ರಶೇಖರ ಇಂಡಿ ಮಹಾಭಾರತದ ಶಕುನಿ ಇದ್ದಂತೆ. ಅವರ ಬಗ್ಗೆ ಇದಕ್ಕಿಂತ ಹೆಚ್ಚಾಗಿ ನಾನು ಏನೂ ಹೇಳುವುದಿಲ್ಲ ಎಂದು ಇಂಡಿ ವಿರುದ್ಧ ಗರಂ ಆಗಿದ್ದಾರೆ. ನನ್ನ ಕೊಲೆಗೆ ಸುಪಾರಿ ನೀಡಿರುವ ವಿಷಯವನ್ನು ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಈ ಬಗ್ಗೆ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದ್ದಾರೆ.

ಸಾಕ್ಷಿ ಮುಚ್ಚಿ ಹಾಕುವುದಕ್ಕೆ ಮುತ್ತಗಿಯ ಕೊಲೆಗೆ ಸ್ಕೆಚ್ ನಡೆಸಲಾಗಿತ್ತು ಎಂಬ ಮಾಹಿತಿ ಈ ಹಿಂದೆ ತಿಳಿದುಬಂದಿತ್ತು. ಪ್ರಕರಣದ ಪ್ರಮುಖ ಆರೋಪಿ ಬಸವರಾಜ್ ಮುತ್ತಗಿ, ಯೋಗೀಶ್ ಗೌಡ ಹತ್ಯೆಯ ಸುಪಾರಿ ಬಗ್ಗೆ ಮಾಹಿತಿ ಹೊಂದಿದ್ದಾರೆ ಎಂದು ಹೇಳಲಾಗಿತ್ತು. ಹಾಗಾಗಿ, ಮುತ್ತಗಿ ಹತ್ಯೆಯಾದ್ರೆ ಕೇಸ್ ಮುಚ್ಚಿಹಾಕಬಹುದೆಂಬ ಪ್ಲಾನ್ ನಡೆದಿತ್ತು ಎಂದು ಹೇಳಲಾಗಿದೆ.

ಯೋಗೀಶ್ ಹತ್ಯೆ: ಪ್ರಕರಣದಲ್ಲಿ ಇನ್ಸ್​ಪೆಕ್ಟರ್​ ಟಿಂಗರಿಕರ್ ಪಾತ್ರವೇನು? ರೋಚಕ ಕತೆ ಇಲ್ಲಿದೆ

Published On - 7:04 pm, Wed, 16 December 20

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?