AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಿಳೆಯರ ವಿರುದ್ಧ ಮಾತಾಡಿದ ತಪ್ಪಿಗೆ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಹೊಸ ಸಿನಿಮಾದಿಂದ ಔಟ್

ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಮತ್ತು ನಟರೂ ಆಗಿರುವ ಯೋಗ್​ರಾಜ್ ಸಿಂಗ್​ರನ್ನು ತಮ್ಮ ಚಲನಚಿತ್ರದಿಂದ ಕೈಬಿಟ್ಟಿರುವ ಬಗ್ಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೇಳಿಕೆ ನೀಡಿದ್ದಾರೆ.

ಮಹಿಳೆಯರ ವಿರುದ್ಧ ಮಾತಾಡಿದ ತಪ್ಪಿಗೆ ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಹೊಸ ಸಿನಿಮಾದಿಂದ ಔಟ್
ಯೋಗ್​ರಾಜ್ ಸಿಂಗ್ ಮತ್ತು ವಿವೇಕ್ ಅಗ್ನಿಹೋತ್ರಿ
TV9 Web
| Edited By: |

Updated on:Apr 07, 2022 | 5:29 PM

Share

ಮುಂಬೈ: ರೈತರ ಪ್ರತಿಭಟನೆಯನ್ನು ಉದ್ದೇಶಿಸಿ ನಟ ಯೋಗ್​ರಾಜ್​ ಸಿಂಗ್ ಮಾಡಿದ ಪ್ರಚೋದನಾಕಾರಿ ಭಾಷಣವನ್ನು ಆಕ್ಷೇಪಿಸಿ, ಅವರನ್ನು ಮುಂದಿನ ಚಲನಚಿತ್ರದಿಂದ ಕೈಬಿಡಲಾಗಿದೆ. ಕ್ರಿಕೆಟಿಗ ಯುವರಾಜ್ ಸಿಂಗ್ ತಂದೆ ಮತ್ತು ನಟರೂ ಆಗಿರುವ ಯೋಗ್​ರಾಜ್ ಸಿಂಗ್​ರನ್ನು ತಮ್ಮ ಚಲನಚಿತ್ರದಿಂದ ಕೈಬಿಟ್ಟಿರುವ ಬಗ್ಗೆ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಹೇಳಿಕೆ ನೀಡಿದ್ದಾರೆ.

ದೆಹಲಿ ಗಡಿಪ್ರದೇಶದಲ್ಲಿ ರೈತರು ನಡೆಸುತ್ತಿದ್ದ ಸರ್ಕಾರದ ವಿರುದ್ಧದ ಪ್ರತಿಭಟನೆಯಲ್ಲಿ ಯೋಗ್​ರಾಜ್​ ಸಿಂಗ್ ಭಾಗವಹಿಸಿದ್ದರು. ಅಲ್ಲಿ ಮಾಡಿದ ಭಾಷಣವನ್ನು ವಿರೋಧಿಸಿ, ವಿವೇಕ್ ಅಗ್ನಿಹೋತ್ರಿ ತಮ್ಮ ಮುಂದಿನ ಚಿತ್ರ ‘ದಿ ಕಾಶ್ಮೀರ್ ಫೈಲ್ಸ್’ನಿಂದ ಯೋಗ್​ರಾಜ್ ಸಿಂಗ್​ರನ್ನು ಕೈಬಿಟ್ಟಿದ್ದಾರೆ. ಚಿತ್ರದ ಪ್ರಧಾನ ಪಾತ್ರದಲ್ಲಿ ಅನುಪಮ್ ಖೇರ್ ನಟಿಸುತ್ತಿದ್ದಾರೆ. ಯೋಗ್​ರಾಜ್ ಸಿಂಗ್ ಕೂಡ ಡಿಜಿಪಿಯಾಗಿ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಬೇಕಿತ್ತು. ಆದರೆ, ಈಗ ಆ ಪಾತ್ರವನ್ನು ಪುನೀತ್ ಇಸ್ಸಾರ್ ನಿರ್ವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಏನು ಹೇಳಿದ್ದಾರೆ? ಈ ಬಗ್ಗೆ ಪ್ರತಿಕ್ರಿಯಿಸಿರುವ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ನಾನು ಸಾಮಾನ್ಯವಾಗಿ ಕಲೆ ಮತ್ತು ಕಲಾವಿದನನ್ನು ಅಂದರೆ ವ್ಯಕ್ತಿ ಹಾಗೂ ಆತನ ರಾಜಕೀಯ ಸಿದ್ಧಾಂತವನ್ನು ಬದಿಗಿರಿಸಿ ನೋಡುತ್ತೇನೆ. ಕಲೆಯೊಂದಿಗೆ ಬದುಕು ಬೆರೆಸುವುದಿಲ್ಲ. ಆದರೆ, ಯೋಗ್​ರಾಜ್ ಸಿಂಗ್ ಮಹಿಳೆಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದಾರೆ. ಅದು ಹಿಂದೂ ಮಹಿಳೆಯರ ಬಗ್ಗೆ ಎಂಬ ಕಾರಣಕ್ಕಲ್ಲ. ಬದಲಾಗಿ ಯಾವ ಧರ್ಮದ ಮಹಿಳೆಯರ ಬಗ್ಗೆ ಹಾಗೆ ಮಾತನಾಡಿದರೂ ನಾನು ಸಹಿಸಿಕೊಳ್ಳುತ್ತಿರಲಿಲ್ಲ ಎಂದಿದ್ದಾರೆ.

ನನ್ನ ಸಿನಿಮಾವು ಕಾಶ್ಮೀರದಲ್ಲಿ ನಡೆದ ಜನಾಂಗೀ ಹತ್ಯೆಯ ಕುರಿತದ್ದಾಗಿದೆ. ದ್ವೇಷದ, ಧರ್ಮ ವಿಭಜಿಸುವ ಮಾತುಗಳನ್ನಾಡಿದ ಯೋಗ್​ರಾಜ್ ಸಿಂಗ್ ಅಂಥವರನ್ನು ಈ ಸಿನಮಾದಲ್ಲಿ ಉಳಿಸಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಪೋಸ್ಟರ್

ಯೋಗ್​ರಾಜ್ ಸಿಂಗ್ ಬಗ್ಗೆ ಆಕ್ಷೇಪ ಯಾಕೆ? ಯೋಗ್​ರಾಜ್ ಸಿಂಗ್ ಹಿಂದೂ ಸ್ತ್ರೀಯರ ಬಗ್ಗೆ ಮಾತನಾಡಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಆ ವೀಡಿಯೋದಲ್ಲಿ, ಅಹ್ಮದ್ ಶಾ ದುರಾನಿಯಂಥವರು ಹಿಂದೂ ಮಹಿಳೆಯರನ್ನು ಅಪಹರಿಸಿ ಮಾರಾಟ ಮಾಡಿದಾಗ, ನಾವು ಸಿಖ್ಖರು ಅವರನ್ನು ರಕ್ಷಿಸಿದ್ದು ಎಂದು ಇತಿಹಾಸವನ್ನು ಉಲ್ಲೇಖಿಸಿ ಹೇಳಿದ್ದರು. ಇದೇ ಸಂದರ್ಭದಲ್ಲಿ #ArrestYograjSingh ಎಂಬ ಹ್ಯಾಷ್​ಟ್ಯಾಗ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್​ ಆಗಿದ್ದು ಯೋಗ್ರಾಜ್ ಸಿಂಗ್ ಹೇಳಿಕೆ ವಿರುದ್ಧ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದರು.

ನಾವು ನಮ್ಮ ನಾಯಕರಿಗೆ ಮತ ನೀಡಿ ಗೆಲ್ಲಿಸಿದ್ದೇವೆ. ಅವರು ನಮ್ಮ ರೈತರ ಬೆನ್ನಿಗೆ ಚೂರಿ ಹಾಕಿದ್ದಾರೆ ಎಂದು ಯೋಗ್​ರಾಜ್ ಸಿಂಗ್ ಹೇಳಿದ್ದರು. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ಯೋಗ್​ರಾಜ್ ಸಿಂಗ್, ತಮ್ಮ ತಾಯಿ, ಮಗಳು, ಸಹೋದರಿಯರ ಮೇಲೆ ಪ್ರಮಾಣ ಮಾಡಿದ್ದರೂ ತಿರುಗಿ ಬೀಳಲು ಹಿಂಜರಿಕೆ ತೋರುವುದಿಲ್ಲ ಎಂದಿದ್ದರು. ಇಲ್ಲಿರುವವರೆಲ್ಲರೂ ಪಂಜಾಬ್ ರಕ್ಷಣೆಗಾಗಿ ನಿಂತಿರುವ ನಾಯಕರು. ನೀವೇ ಮುಂದಾಳುಗಳು ಎಂದು ರೈತರ ಪ್ರತಿಭಟನೆಯನ್ನು ಹುರಿದುಂಬಿಸಿದ್ದರು.

ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈ ಹಿಂದೆ ‘ದಿ ತಾಷ್ಕೆಂಟ್ ಫೈಲ್ಸ್’ ಎಂಬ ಸಿನಿಮಾವನ್ನು ನಿರ್ದೇಶಿಸಿದ್ದರು. ರೈತ ಹೋರಾಟದಲ್ಲಿ ಮೋದಿ ಪರವಹಿಸಿರುವ ಅವರು ಸರ್ಕಾರದ ಪರವಾಗಿ ಹಲವು ಟ್ವೀಟ್​ಗಳನ್ನೂ ಮಾಡಿದ್ದಾರೆ.

Delhi Chalo ಸಿಂಘು ಗಡಿ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳಿಗೆ ಕೊರೊನಾ​ ಸೋಂಕು

Published On - 3:29 pm, Fri, 11 December 20

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್