AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸ್​​ನಲ್ಲೇ ರಣ ಚಂಡಿ ಅವತಾರ: ಕೀಟಲೆ ಕೊಟ್ಟ ಯುವಕನ ಗ್ರಹಚಾರ ಬಿಡಿಸಿದ ಯುವತಿ

ತನ್ನ ಮೇಲೆ ಕೈ ಹಾಕಿದ ಯುವಕನಿಗೆ ಯುವತಿ ಧರ್ಮದೇಟು ನೀಡಿರುವ ಘಟನೆ ಮಂಡ್ಯದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬಸ್​​ನಲ್ಲೇ ರಣ ಚಂಡಿ ಅವತಾರ: ಕೀಟಲೆ ಕೊಟ್ಟ ಯುವಕನ ಗ್ರಹಚಾರ ಬಿಡಿಸಿದ ಯುವತಿ
ಯುವಕನಿಗೆ ಥಳಿಸಿದ ಯುವತಿ
ವಿವೇಕ ಬಿರಾದಾರ
|

Updated on:Jun 05, 2023 | 10:32 AM

Share

ಮಂಡ್ಯ: ಬಸ್​ಗಳಲ್ಲಿ​ ಕೆಲ ಕಿಡಿಗೇಡಿಗಳು ಮಹಿಳೆಯರಿಗೆ ತೊಂದರೆ ಕೊಡುತ್ತಿರುತ್ತಾರೆ. ಇದರಿಂದ ಕೆಲವು ಮಹಿಳೆಯರು ಸಿಟ್ಟಿಗೆದ್ದು ಸರಿಯಾಗಿ ಬಾರಿಸಿರುತ್ತಾರೆ. ಇನ್ನು ಕೆಲವರು ಅಸಹಾಯಕರಾಗಿ ಸುಮ್ಮನಾಗಿ ಬಿಡುತ್ತಾರೆ. ಆದರೆ ಇಲ್ಲಿ ಓರ್ವ ಯುವತಿ ಕಚೇಷ್ಟೆ ನೀಡಿದ ವ್ಯಕ್ತಿಗೆ ತಕ್ಕ ಶಾಸ್ತಿ ಮಾಡಿದ್ದಾಳೆ. ಹೌದು ತನ್ನ ಮೇಲೆ ಕೈ ಹಾಕಿದ ಯುವಕನಿಗೆ (Teen Boy) ಯುವತಿ (Teen Girl) ಧರ್ಮದೇಟು ನೀಡಿರುವ ಘಟನೆ ಮಂಡ್ಯದ (Mandya) ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಂಡ್ಯದಿಂದ ಪಾಂಡವಪುರಕ್ಕೆ (Pandavapura) ತೆರಳುವ ಬಸ್​ನಲ್ಲಿ ಯುವತಿ ಒಬ್ಬಳೆ ಕುಳಿತಿದ್ದಳು. ಯುವತಿ ಕುಳಿತಿದ್ದನ್ನು ಗಮನಿಸಿ ಹಿಂದಿನ ಸೀಟಿನಲ್ಲಿ ಬಂದು ಕುಳಿತ ಯುವಕ, ಮುಂದಿನ ಸೀಟಿನಲ್ಲಿ ಕುಳಿತಿದ್ದ ಯುವತಿಗೆ ಹಿಂದಿನಿಂದ ಕೀಟಲೆ ಕೊಡಲು ಶುರು ಮಾಡಿದ್ದಾನೆ. ಯುವತಿಗೆ ಕದ್ದು ಮುಚ್ಚಿ ಮುಟ್ಟುತ್ತ ಕುಚೇಷ್ಟೆ ಮಾಡಿದ್ದಾನೆ.

ಇದನ್ನೂ ಓದಿ: Viral Video: ರಾಮ್ತಾ ಜೋಗಿ ಹಾಡಿಗೆ ಸಕತ್ ಆಗಿ ಸ್ಟೆಪ್ಸ್ ಹಾಕಿದ ಕಾಲೇಜು ಯುವತಿಯರು

ಯುವಕನ ಕುಚೇಷ್ಟೆಗೆ ರೊಚ್ಚಿಗೆದ್ದ ಯುವತಿ ಬಸ್​ನಲ್ಲಿ ಎಲ್ಲರೆದುರು ಮುಖಕ್ಕೆ ಪಂಚ್ ಮಾಡಿದ್ದಾಳೆ. ನಂತರ ಯುವಕನ ಟೀ ಶರ್ಟ್ ಹಿಡಿದು ಹಿಗ್ಗಾ ಮುಗ್ಗ ಕೆನ್ನೆಗೆ ಬಾರಿಸಿದ್ದಾಳೆ. ಇನ್ನು ಯುವತಿ ನೀಡಿದ ಧರ್ಮಧೇಟು ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಯುವತಿ ಕೈಯಲ್ಲಿ ಏಟು ತಿಂದ ಯುವಕ ಬಸ್​​​ನಿಂದ ಪರಾರಿಯಾಗಿದ್ದಾನೆ.

ಮಹಿಳೆಯ ಜಡೆಗೆ ಕೈ ಹಾಕಿದ ಅನ್ಯಕೋಮಿನ ವ್ಯಕ್ತಿ; ವಿಡಿಯೋ ವೈರಲ್​

ಮಂಗಳೂರು: ಅನ್ಯಕೋಮಿನ ವ್ಯಕ್ತಿ ಮಹಿಳೆಯ ಜಡೆಗೆ ಕೈ ಹಾಕಿರುವ ಘಟನೆ ಮಂಗಳೂರು-ಧರ್ಮಸ್ಥಳ ಮಾರ್ಗವಾಗಿ ಸಂಚರಿಸುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್​​​​​ನಲ್ಲಿ ನಡೆದಿತ್ತು. ಅನ್ಯಕೋಮಿನ ವ್ಯಕ್ತಿ ಮಹಿಳೆಯ ಜಡೆಯನ್ನು ಸವರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಘಟನೆ ಬಗ್ಗೆ ಹಿಂದೂ ಜಾಗರಣ ವೇದಿಕೆ ಜಿಲ್ಲಾಧ್ಯಕ್ಷ ಬಂಟ್ವಾಳ ನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು. ಇನ್ನು ಜಡೆ ಸವರಿದ ಬಂಟ್ವಾಳ ತಾಲೂಕಿನ ನಾವೂರ ಗ್ರಾಮದ ಆರೋಪಿ ಹಮೀದ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:03 pm, Sat, 3 June 23

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​