AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ಕಣ್ಣಿಗೆ ಖಾರದಪುಡಿ ಎರಚಿ ಬರ್ಬರವಾಗಿ ಕೊಲೆಗೈದರು..

ಮೈಸೂರು: ವೀಲಿಂಗ್ ಮಾಡ್ಬೇಡಿ ಅಂತಾ ಬುದ್ಧಿ ಹೇಳಿದಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ T.ನರಸೀಪುರ ತಾಲ್ಲೂಕಿನ ಕೇತುಪುರ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಗ್ರಾಮದ ನಿವಾಸಿ ಸಿದ್ದರಾಜು (26) ಹತ್ಯೆಯಾದ ಯುವಕ. ಗ್ರಾಮದಲ್ಲಿ ಕಿರಿದಾದ ರಸ್ತೆ ಇದೆ. ಮಕ್ಕಳು ಓಡಾಡುತ್ತಿರುತ್ತಾರೆ. ಹಾಗಾಗಿ, ಇಲ್ಲಿ ವೀಲಿಂಗ್ ಮಾಡಬೇಡಿ ಎಂದು ಸಿದ್ದರಾಜು ಬುದ್ಧಿ ಹೇಳಿದ್ದಾನೆ. ಇದೇ ವಿಚಾರಕ್ಕೆ ಎರಡು ದಿನದ ಹಿಂದೆ ಗಲಾಟೆ ಸಹ ನಡೆದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ನೀಡಿದ ಹಿನ್ನಲೆಯಲ್ಲಿ […]

ವೀಲಿಂಗ್ ಮಾಡಬೇಡಿ ಎಂದಿದ್ದಕ್ಕೆ ಕಣ್ಣಿಗೆ ಖಾರದಪುಡಿ ಎರಚಿ ಬರ್ಬರವಾಗಿ ಕೊಲೆಗೈದರು..
ಸಾಧು ಶ್ರೀನಾಥ್​
| Updated By: KUSHAL V|

Updated on: Sep 13, 2020 | 1:01 PM

Share

ಮೈಸೂರು: ವೀಲಿಂಗ್ ಮಾಡ್ಬೇಡಿ ಅಂತಾ ಬುದ್ಧಿ ಹೇಳಿದಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ T.ನರಸೀಪುರ ತಾಲ್ಲೂಕಿನ ಕೇತುಪುರ ಗ್ರಾಮದಲ್ಲಿ ನಡೆದಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಗ್ರಾಮದ ನಿವಾಸಿ ಸಿದ್ದರಾಜು (26) ಹತ್ಯೆಯಾದ ಯುವಕ.

ಗ್ರಾಮದಲ್ಲಿ ಕಿರಿದಾದ ರಸ್ತೆ ಇದೆ. ಮಕ್ಕಳು ಓಡಾಡುತ್ತಿರುತ್ತಾರೆ. ಹಾಗಾಗಿ, ಇಲ್ಲಿ ವೀಲಿಂಗ್ ಮಾಡಬೇಡಿ ಎಂದು ಸಿದ್ದರಾಜು ಬುದ್ಧಿ ಹೇಳಿದ್ದಾನೆ. ಇದೇ ವಿಚಾರಕ್ಕೆ ಎರಡು ದಿನದ ಹಿಂದೆ ಗಲಾಟೆ ಸಹ ನಡೆದು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ದೂರು ನೀಡಿದ ಹಿನ್ನಲೆಯಲ್ಲಿ ನಿನ್ನೆ ರಾತ್ರಿ ಗುಂಪು ಕಟ್ಟಿಕೊಂಡು ಬಂದ ಯುವಕರು ಸಿದ್ದರಾಜು ಮೇಲೆ ಏಕಾಏಕಿ ದಾಳಿ ನಡೆಸಿದ್ದಾರೆ. ಆತನ ಕಣ್ಣಿಗೆ ಖಾರದಪುಡಿ ಎರಚಿ ಮಚ್ಚಿನಿಂದ ಹಲ್ಲೆ ಮಾಡಿದ್ದಾರೆ. ಹಲ್ಲೆಯಲ್ಲಿ ಗಂಭೀರವಾಗಿ ಗಾಯಗೊಂಡ ಸಿದ್ದರಾಜು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ.

ಇನ್ನು ಗಲಾಟೆ ತಡೆಯಲು ಹೋದ ಮೃತ ಯುವಕನ ಚಿಕ್ಕಪ್ಪನ ಮೇಲೂ ಸಹ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಘಟನೆ ನಂತರ ಯುವಕರ ಗುಂಪು ಪರಾರಿಯಾಗಿದೆ. ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
7 ರನ್​ಗಳ ಅವಶ್ಯಕತೆ: ಪಂದ್ಯದ ಫಲಿತಾಂಶ ಬದಲಿಸಿದ 2 ಅದ್ಭುತ ಕ್ಯಾಚ್​ಗಳು
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಗೂಗಲ್ ಮ್ಯಾಪ್ ನಂಬಿ ಹೋದ ಕಾರು ಸೇತುವೆ ಮೇಲಿಂದ ಬಿತ್ತು, ಮುಂದೇನಾಯ್ತು?
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ, ಆರು ಮಂದಿ ಸಾವು
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಮನೆ ಕೌಂಪೌಂಡ್ ಹಾರಿ ಬಂದು ನಾಯಿ ಹೊತ್ತೊಯ್ದ ಚಿರತೆ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ
ಟೇಕ್ ಆಫ್ ಆಗುವಾಗ ಅಮೆರಿಕನ್ ಏರ್​​ಲೈನ್ಸ್ ವಿಮಾನದಲ್ಲಿ ಬೆಂಕಿ