AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಮ್ಮ ಐ ಲವ್​ ಯು’ ಸಿನಿಮಾ ನೋಡಿ 48 ದಿನ ಭಿಕ್ಷೆ ಬೇಡಲು ಮುಂದಾದ ಯುವಕ!

ಉಡುಪಿ: ಸುದೀಪ್ ಸಿನಿಮಾ ನೋಡಿ ಹೆಬ್ಬುಲಿ ಕಟ್ಟಿಂಗ್ ಮಾಡಿಸಿಕೊಂಡ ಹುಡುಗರನ್ನು ನೋಡಿದ್ವಿ. ಯಶ್ KGF ಸಿನಿಮಾ ನೋಡಿ ಗಡ್ಡ ಬಿಟ್ಟುಕೊಂಡ ಯುವಕರನ್ನು ನೋಡಿದ್ವಿ. ಪುನೀತ್ ಚಿತ್ರ ನೋಡಿ ಅವರಂತೆಯೇ ಡ್ಯಾನ್ಸ್ ಮಾಡೋರನ್ನ ಸಹ ನೋಡಿದ್ವಿ. ಹೀಗೆ, ಬಹಳಷ್ಟು ಮಂದಿ ಯುವಜನರು ಸಿನಿಮಾಗಳಿಂದ ಪ್ರತಿನಿತ್ಯ ಪ್ರಭಾವಿತರಾಗುತ್ತಾರೆ. ‘ಅಮ್ಮ ಐ ಲವ್ ಯು’ ಸಿನಿಮಾ ನೋಡಿ ಭಿಕ್ಷೆ ಬೇಡಲು ಹೊರಟಿದ್ದ! ಅಂತೆಯೇ, ದಿ. ಚಿರಂಜೀವಿ ಸರ್ಜಾ ಅಭಿನಯದ ‘ಅಮ್ಮ ಐ ಲವ್ ಯು’ ಸಿನಿಮಾ ನೋಡಿ, 48 ದಿನಗಳ ಕಾಲ ಭಿಕ್ಷೆ ಬೇಡಲು ಹೊರಟ 22 ವರ್ಷದ ಯುವಕನೊಬ್ಬನನ್ನು ಸ್ಥಳೀಯರು […]

‘ಅಮ್ಮ ಐ ಲವ್​ ಯು’ ಸಿನಿಮಾ ನೋಡಿ 48 ದಿನ ಭಿಕ್ಷೆ ಬೇಡಲು ಮುಂದಾದ ಯುವಕ!
KUSHAL V
|

Updated on:Nov 16, 2020 | 7:45 PM

Share

ಉಡುಪಿ: ಸುದೀಪ್ ಸಿನಿಮಾ ನೋಡಿ ಹೆಬ್ಬುಲಿ ಕಟ್ಟಿಂಗ್ ಮಾಡಿಸಿಕೊಂಡ ಹುಡುಗರನ್ನು ನೋಡಿದ್ವಿ. ಯಶ್ KGF ಸಿನಿಮಾ ನೋಡಿ ಗಡ್ಡ ಬಿಟ್ಟುಕೊಂಡ ಯುವಕರನ್ನು ನೋಡಿದ್ವಿ. ಪುನೀತ್ ಚಿತ್ರ ನೋಡಿ ಅವರಂತೆಯೇ ಡ್ಯಾನ್ಸ್ ಮಾಡೋರನ್ನ ಸಹ ನೋಡಿದ್ವಿ. ಹೀಗೆ, ಬಹಳಷ್ಟು ಮಂದಿ ಯುವಜನರು ಸಿನಿಮಾಗಳಿಂದ ಪ್ರತಿನಿತ್ಯ ಪ್ರಭಾವಿತರಾಗುತ್ತಾರೆ.

‘ಅಮ್ಮ ಐ ಲವ್ ಯು’ ಸಿನಿಮಾ ನೋಡಿ ಭಿಕ್ಷೆ ಬೇಡಲು ಹೊರಟಿದ್ದ! ಅಂತೆಯೇ, ದಿ. ಚಿರಂಜೀವಿ ಸರ್ಜಾ ಅಭಿನಯದ ‘ಅಮ್ಮ ಐ ಲವ್ ಯು’ ಸಿನಿಮಾ ನೋಡಿ, 48 ದಿನಗಳ ಕಾಲ ಭಿಕ್ಷೆ ಬೇಡಲು ಹೊರಟ 22 ವರ್ಷದ ಯುವಕನೊಬ್ಬನನ್ನು ಸ್ಥಳೀಯರು ರಕ್ಷಿಸಿರುವ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಸಿನಿಮಾದಲ್ಲಿ ತೋರಿಸಿದ್ದೇ ಸತ್ಯ ಎಂದು ತಿಳಿದ ಯುವಕ, ತನ್ನ ಕಷ್ಟಗಳ ಪರಿಹಾರಕ್ಕಾಗಿ ಭಿಕ್ಷಾಟನೆಗೆ ಇಳಿದಿದ್ದ. ಚಿತ್ರದುರ್ಗ ಮೂಲದವನಾದ ಯುವಕ ನಿರುದ್ಯೋಗ ಸಮಸ್ಯೆ ಎದುರಿಸಲಾಗದೆ ಹೀಗೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ನಗರದ ಶ್ರೀಕೃಷ್ಣ ಮಠದ ಸುತ್ತುಮುತ್ತ ಭಿಕ್ಷೆ ಬೇಡುತ್ತಿದ್ದ ಯುವಕನನ್ನು, ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ ಮತ್ತು ತಾರಾನಾಥ್ ಮೇಸ್ತ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದು ನಂತರ ಆತನ ಪೋಷಕರಿಗೆ ಹಸ್ತಾಂತರಿಸಿದ್ದಾರೆ. ಈ ಹಿಂದೆ ಧರ್ಮಸ್ಥಳ ಕ್ಷೇತ್ರದ ಬಳಿಯೂ ಭಿಕ್ಷಾಟನೆಗೆ ಇಳಿದಿದ್ದ ಯುವಕ, ಊರೂರು ತಿರುಗುತ್ತಾ ಬೇಡಿ ತಿನ್ನುತ್ತಿದ್ದ ಎಂದು ತಿಳಿದುಬಂದಿದೆ.

ಜನರು ಸಿನಿಮಾ ನೋಡಿ ಹೆಚ್ಚು ಪ್ರಭಾವಿತರಾಗುತ್ತಾರೆ. ಸಿನಿಮಾದಲ್ಲಿ ಸೈನಿಕನಿಗೆ ಸಿಗುವ ಬೆಂಬಲ ನಿಜವಾದ ಸೈನಿಕನಿಗೆ ಸಿಗುವುದಿಲ್ಲ. ಸಿನಿಮಾದ ರೈತನಿಗೆ ಸಿಗುವ ಪ್ರೋತ್ಸಾಹ ನಿಜವಾದ ರೈತನಿಗೆ ಲಭಿಸುವುದಿಲ್ಲ. ಯುವಜನರು ಕಷ್ಟಗಳನ್ನು ಎದುರಿಸಲು ಕಲಿಯುತ್ತಿಲ್ಲ. ತಕ್ಷಣವೇ ಶ್ರೀಮಂತ ಬದುಕನ್ನು ಬಯಸುತ್ತಾರೆ. ಬದುಕಿನಲ್ಲಿ ಕಷ್ಟಪಟ್ಟು, ಸೋಲನ್ನು ಎದುರಿಸಿ ನಂತರ ಯಶಸ್ವಿಯಾದ ಹಿರಿಯರನ್ನು ನಾವು ಮಾದರಿಯಾಗಿ ಸ್ವೀಕರಿಸಬೇಕು ಎಂದು ಸಮಾಜ ಸೇವಕ ವಿಶು ಶೆಟ್ಟಿ ಹೇಳಿದ್ದಾರೆ.

Published On - 7:42 pm, Mon, 16 November 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ