ದನ ಮೇಯಿಸುತ್ತಿದ್ದ ಮಹಿಳೆ ತಲೆಗೆ ಹೊಡೆದು ಸರಗಳ್ಳತನ

ಹಾಸನ: ದನ ಮೇಯಿಸುತ್ತಿದ್ದ ಮಹಿಳೆ ತಲೆಗೆ ಹೊಡೆದು ಸರಗಳ್ಳತನ ಮಾಡಿರುವ ಘಟನೆ ಹಾಸನ ತಾಲೂಕಿನ ಶಂಕದಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಶಾರದಮ್ಮಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೊದಲು ಮಾಂಗಲ್ಯ ಸರ ಕೀಳಲು ಆರೋಪಿ ಚಿಕ್ಕಕೊಂಡಕೊಳ್ಳ ಗ್ರಾಮದ ಚಂದನ್​ ಯತ್ನಿಸಿದ್ದಾನೆ. ಇದಕ್ಕೆ ಶಾರದಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶಾರದಮ್ಮಗೆ ಮರದ ತುಂಡಿನಿಂದ ಹಲ್ಲೆ ಮಾಡಿ ಸರ ಕಸಿದು ಆರೋಪಿ ಎಸ್ಕೇಪ್ ಆಗಿದ್ದಾನೆ. ಪರಾರಿಯಾಗುವ ಭರದಲ್ಲಿ ಬೈಕನ್ನು ಅಲ್ಲಿಯೇ ಬಿಟ್ಟಿದ್ದಾನೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ […]

ದನ ಮೇಯಿಸುತ್ತಿದ್ದ ಮಹಿಳೆ ತಲೆಗೆ ಹೊಡೆದು ಸರಗಳ್ಳತನ
ಸಾಧು ಶ್ರೀನಾಥ್​ Edited By:

Updated on: Jul 01, 2020 | 8:03 PM

ಹಾಸನ: ದನ ಮೇಯಿಸುತ್ತಿದ್ದ ಮಹಿಳೆ ತಲೆಗೆ ಹೊಡೆದು ಸರಗಳ್ಳತನ ಮಾಡಿರುವ ಘಟನೆ ಹಾಸನ ತಾಲೂಕಿನ ಶಂಕದಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಂಭೀರ ಗಾಯಗೊಂಡಿರುವ ಶಾರದಮ್ಮಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮೊದಲು ಮಾಂಗಲ್ಯ ಸರ ಕೀಳಲು ಆರೋಪಿ ಚಿಕ್ಕಕೊಂಡಕೊಳ್ಳ ಗ್ರಾಮದ ಚಂದನ್​ ಯತ್ನಿಸಿದ್ದಾನೆ. ಇದಕ್ಕೆ ಶಾರದಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶಾರದಮ್ಮಗೆ ಮರದ ತುಂಡಿನಿಂದ ಹಲ್ಲೆ ಮಾಡಿ ಸರ ಕಸಿದು ಆರೋಪಿ ಎಸ್ಕೇಪ್ ಆಗಿದ್ದಾನೆ. ಪರಾರಿಯಾಗುವ ಭರದಲ್ಲಿ ಬೈಕನ್ನು ಅಲ್ಲಿಯೇ ಬಿಟ್ಟಿದ್ದಾನೆ.

ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಆರೋಪಿ ಚಂದನ್​ನನ್ನು ಹಾಸನದ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

Published On - 7:20 pm, Wed, 1 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us