ಮಾಸ್ಕ್‌ ಧರಿಸಿ ಅಂಗಡಿಯೊಳಗೆ ಬರಲು ಸೂಚಿಸಿದಕ್ಕೆ ಹಿಂಗಾ ಮಾಡೋದು!

ಮಂಗಳೂರು: ಮಾಸ್ಕ್‌ ಧರಿಸಿ ಅಂಗಡಿಯೊಳಗೆ ಬರಲು ಸೂಚಿಸಿದಕ್ಕೆ ಅಂಗಡಿ ಸಿಬ್ಬಂದಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಿನ್ನೆ ನಡೆದಿದೆ. ಪುತ್ತೂರಿನ ರಿಲಯನ್ಸ್ ಮಾರ್ಟ್​ಗೆ ಮಾಸ್ಕ್ ಇಲ್ಲದೆ ಅಂಗಡಿ ಪ್ರವೇಶಿಸಲು ಯತ್ನಿಸಿದ ಯುವಕರ ತಂಡಕ್ಕೆ ಮಾಸ್ಕ್ ಧರಿಸಿ ಬರುವಂತೆ ಸೆಕ್ಯುರಿಟಿ ಗಾರ್ಡ್ ತಿಳಿಸಿದ್ದಾನೆ. ಅದಕ್ಕೆ ರೊಚ್ಚಿಗೆದ್ದ ಯುವಕರ ತಂಡ ಸೆಕ್ಯುರಿಟಿ ಗಾರ್ಡ್ ಜೊತೆ ಘರ್ಷಣೆಗಿಳಿದಿದ್ದಾರೆ. ಈ ವೇಳೆ ರಿಲಯನ್ಸ್ ಮಾರ್ಟ್ ಸಿಬ್ಬಂದಿಗೆ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ್ದಾರೆ. ಮಾಸ್ಕ್ ವಿಚಾರಕ್ಕೆ ಸಿಬ್ಬಂದಿ […]

ಮಾಸ್ಕ್‌ ಧರಿಸಿ ಅಂಗಡಿಯೊಳಗೆ ಬರಲು ಸೂಚಿಸಿದಕ್ಕೆ ಹಿಂಗಾ ಮಾಡೋದು!
ಆಯೇಷಾ ಬಾನು

Updated on: May 27, 2020 | 2:09 PM

ಮಂಗಳೂರು: ಮಾಸ್ಕ್‌ ಧರಿಸಿ ಅಂಗಡಿಯೊಳಗೆ ಬರಲು ಸೂಚಿಸಿದಕ್ಕೆ ಅಂಗಡಿ ಸಿಬ್ಬಂದಿಯ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನಲ್ಲಿ ನಿನ್ನೆ ನಡೆದಿದೆ.

ಪುತ್ತೂರಿನ ರಿಲಯನ್ಸ್ ಮಾರ್ಟ್​ಗೆ ಮಾಸ್ಕ್ ಇಲ್ಲದೆ ಅಂಗಡಿ ಪ್ರವೇಶಿಸಲು ಯತ್ನಿಸಿದ ಯುವಕರ ತಂಡಕ್ಕೆ ಮಾಸ್ಕ್ ಧರಿಸಿ ಬರುವಂತೆ ಸೆಕ್ಯುರಿಟಿ ಗಾರ್ಡ್ ತಿಳಿಸಿದ್ದಾನೆ. ಅದಕ್ಕೆ ರೊಚ್ಚಿಗೆದ್ದ ಯುವಕರ ತಂಡ ಸೆಕ್ಯುರಿಟಿ ಗಾರ್ಡ್ ಜೊತೆ ಘರ್ಷಣೆಗಿಳಿದಿದ್ದಾರೆ.

ಈ ವೇಳೆ ರಿಲಯನ್ಸ್ ಮಾರ್ಟ್ ಸಿಬ್ಬಂದಿಗೆ ಹೆಲ್ಮೆಟ್ ನಿಂದ ಹಲ್ಲೆ ಮಾಡಿದ್ದಾರೆ. ಮಾಸ್ಕ್ ವಿಚಾರಕ್ಕೆ ಸಿಬ್ಬಂದಿ ಮತ್ತು ಯುವಕರ ನಡುವೆ ಮಾರಾಮಾರಿಯಾಗಿದೆ. ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 10:56 am, Wed, 27 May 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us