AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಜಾರಕಿಹೊಳಿ ರಾಜೀನಾಮೆಗೆ ‘ಕೈ’​ ಕಾರ್ಯಕರ್ತರ ಪಟ್ಟು; ರಾಸಲೀಲೆ ವಿಡಿಯೋ ಹೈಕಮಾಂಡ್​ಗೆ ರವಾನೆ

ತಕ್ಷಣ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು. ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಿಎಂ, ಸಚಿವರು, ಸಂಸದರ ಮನೆಗಳಿಗೆ ಮುತ್ತಿಗೆ ಹಾಕುವುದಾಗಿ ಹೆಚ್.ಪಿ.ಗಿರೀಶ್​ ಎಚ್ಚರಿಕೆ ಕೊಟ್ಟಿದ್ದಾರೆ.

ರಮೇಶ್​ ಜಾರಕಿಹೊಳಿ ರಾಜೀನಾಮೆಗೆ ‘ಕೈ’​ ಕಾರ್ಯಕರ್ತರ ಪಟ್ಟು; ರಾಸಲೀಲೆ ವಿಡಿಯೋ ಹೈಕಮಾಂಡ್​ಗೆ ರವಾನೆ
ರಮೇಶ್​ ಜಾರಕಿಹೊಳಿ ರಾಜೀನಾಮೆಗೆ ‘ಕೈ’​ ಕಾರ್ಯಕರ್ತರ ಪಟ್ಟು
KUSHAL V
|

Updated on:Mar 02, 2021 | 8:08 PM

Share

ಬೆಂಗಳೂರು: ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಬಯಲಾಗುತ್ತಿದ್ದಂತೆ ಸಂಪುಟದಿಂದ ರಮೇಶ್​ರನ್ನು ವಜಾಗೊಳಿಸುವಂತೆ ಆಗ್ರಹಿಸಿ ನಗರದಲ್ಲಿ ಯೂತ್​ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಯಿತು. ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಧರಣಿ ನಡೆಸಿದರು. ಇತ್ತ, ಶಿವಮೊಗ್ಗದ ಗೋಪಿ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್​ನಿಂದ ಧರಣಿ ನಡೆಯಿತು. ‘ಕೈ’ ಕಾರ್ಯಕರ್ತರ ಧರಣಿ ಹಿನ್ನೆಲೆಯಲ್ಲಿ ಸಂಚಾರ ವ್ಯತ್ಯಯ ಉಂಟಾಯಿತು.

ರಮೇಶ್ ಜಾರಕಿಹೊಳಿಯನ್ನು ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಶಿವಮೊಗ್ಗ ಜಿಲ್ಲಾ ಯುವ ಘಟಕದ ಅಧ್ಯಕ್ಷ ಹೆಚ್.ಪಿ.ಗಿರೀಶ್​ ಆಗ್ರಹಿಸಿದ್ದಾರೆ. ತಕ್ಷಣ ರಮೇಶ್ ಜಾರಕಿಹೊಳಿ ರಾಜೀನಾಮೆ ಪಡೆಯಬೇಕು. ಸಚಿವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಸಿಎಂ, ಸಚಿವರು, ಸಂಸದರ ಮನೆಗಳಿಗೆ ಮುತ್ತಿಗೆ ಹಾಕುವುದಾಗಿ ಹೆಚ್.ಪಿ.ಗಿರೀಶ್​ ಎಚ್ಚರಿಕೆ ಕೊಟ್ಟಿದ್ದಾರೆ.

ಅತ್ತ, ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಯಲಾಗುತ್ತಿದ್ದಂತೆ ಸಚಿವರ ರಾಸಲೀಲೆ ವಿಡಿಯೋ ಬಗ್ಗೆ ಟ್ವೀಟ್ ಮಾಡಿ ಕರ್ನಾಟಕ ಕಾಂಗ್ರೆಸ್​ ಘಟಕ ಪ್ರಶ್ನೆ ಹಾಕಿದೆ. ಡಿಯರ್ @BJP4Karnataka ನಿಮ್ಮವರೇ ನಿಮಗೆ #BlackmailJanataParty ಹೆಸರು ಕೊಟ್ಟಿದ್ದು ಇದಕ್ಕೇನಾ? ಎಂದು ಕರ್ನಾಟಕ ಕಾಂಗ್ರೆಸ್​ ಘಟಕ ಟ್ವೀಟ್​ ಮಾಡಿ ಪ್ರಶ್ನಿಸಿದೆ.

ಈ ನಡುವೆ, ರಮೇಶ್ ರಾಸಲೀಲೆ ವಿಡಿಯೋ ಬಗ್ಗೆ ಮಾಹಿತಿ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿವರ ಪಡೆದ ಬಳಿಕ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದ್ದಾರೆ. ಸಿಡಿ ಬಗ್ಗೆ ಕಚೇರಿಯಲ್ಲಿ ಮಾಹಿತಿ ಪಡೆದ ಡಿ.ಕೆ.ಶಿವಕುಮಾರ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಇತ್ತ, ಸಿದ್ದರಾಮಯ್ಯ ನಿವಾಸಕ್ಕೆ ಆಗಮಿಸಿದ ಎಂ.ಬಿ.ಪಾಟೀಲ್ ಸಹ ಆಗಮಿಸಿದ್ದಾರೆ.

​ಪ್ರಭಾವಿ ಸಚಿವರೊಬ್ಬರ ಮೂಲಕ ದೆಹಲಿಗೆ ರಮೇಶ್​ ರಾಸಲೀಲೆ ಸಿಡಿ ರವಾನೆ ರಮೇಶ್ ಜಾರಕಿಹೊಳಿ ರಾಸಲೀಲೆ ವಿಡಿಯೋ ಬಯಲಾಗಕ್ಕೂ ಮೊದಲೇ ಹೈಕಮಾಂಡ್​ಗೆ ತಲುಪಿದೆ. ರಮೇಶ್ ಜಾರಕಿಹೊಳಿ‌ ರಾಸಲೀಲೆ ಸಿಡಿ ಹೈಕಮಾಂಡ್​ ಕೈ ಸೇರಿದೆ. ಪ್ರಭಾವಿ ಸಚಿವರೊಬ್ಬರ ಮೂಲಕ ದೆಹಲಿಗೆ ಸಿಡಿ ರವಾನೆಯಾಗಿದೆ.

‘ಸಚಿವ ರಮೇಶ್ ರಾಸಲೀಲೆ‌ ಸಿಡಿ ಬಗ್ಗೆ ನನಗೇನೂ ಗೊತ್ತಿಲ್ಲ’ ಸಚಿವ ರಮೇಶ್ ರಾಸಲೀಲೆ‌ ಸಿಡಿ ಬಗ್ಗೆ ನನಗೇನೂ ಗೊತ್ತಿಲ್ಲ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ. ಈ ಬಗ್ಗೆ ನಂತರ ಪ್ರತಿಕ್ರಿಯೆ ನೀಡ್ತೇನೆಂದ ಸಚಿವ ಸುಧಾಕರ್ ಸುಮ್ಮನಾದರು.

ಮಾಹಿತಿ ಪಡೆದ ಸಿಎಂ ಬಿಎಸ್​ವೈ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್​​ ವಿಡಿಯೋ ಮಾಧ್ಯಮದಲ್ಲಿ ಪ್ರಸಾರವಾಗುತ್ತಿದ್ದಂತೆ ಸುದ್ದಿ ಮತ್ತು ಪೊಲೀಸ್ ಕಮಿಷನರ್​ಗೆ ನೀಡಿದ ದೂರಿನ ಬಗ್ಗೆ ಸಿಎಂ ಬಿಎಸ್​ವೈ ಮಾಹಿತಿ ಪಡೆದಿದ್ದಾರೆ. ಇದಲ್ಲದೆ, ರಾಜೀನಾಮೆ ನೀಡುವಂತೆ ಸಿಎಂ BSY ಸೂಚಿಸುವ ಸಾಧ್ಯತೆ ಹೆಚ್ಚಾಗಿದೆ. ಹೈಕಮಾಂಡ್​ ಮಾಹಿತಿ ಪಡೆದು ಯಡಿಯೂರಪ್ಪ ಕ್ರಮಕ್ಕೆ ಸೂಚಿಸುವ ಸಾಧ್ಯತೆಯಿದೆ.

ಪೊಲೀಸರಿಂದ ದೂರುದಾರ ದಿನೇಶ್ ಕಲ್ಲಹಳ್ಳಿ ವಿಚಾರಣೆ ಅತ್ತ, ದಿನೇಶ್ ಕಲ್ಲಹಳ್ಳಿಯಿಂದ ಕಬ್ಬನ್ ಪಾರ್ಕ್ ಪೊಲೀಸರು ದೂರು ಸ್ವೀಕರಿಸಿದ್ದಾರೆ. ದೂರು ಸ್ವೀಕರಿಸಿದ ಬಳಿಕ ಇನ್​ಸ್ಪೆಕ್ಟರ್​ ಮಾರುತಿ ಹಾಗೂ ಎಸಿಪಿ ಯತಿರಾಜ್ ದಿನೇಶ್​ರಿಂದ ಪ್ರಾಥಮಿಕ ಮಾಹಿತಿ ಪಡೆದರು

ಯುವತಿ ನಿಮಗೆ ಹೇಗೆ ಪರಿಚಯ? ನಿಮಗ್ಯಾಕೆ ಹೇಳಿದ್ರು? ಪೊಲೀಸರಿಂದ ದೂರುದಾರ ದಿನೇಶ್ ಕಲ್ಲಹಳ್ಳಿ ವಿಚಾರಣೆ ನಡೆದಿದೆ. ನೀವು ದೂರು ನೀಡಲು ಕಾರಣ ಏನು ಅಂತಾ ವಿಚಾರಣೆ ನಡೆದಿದೆ. ಸಂತ್ರಸ್ತ ಯುವತಿ ದೂರು ಕೊಡಬಹುದಾ ಅಂತಾ ದಿನೇಶ್​ ಪ್ರಶ್ನೆಗೆ ನಿಮಗೆ ಎಷ್ಟು ವರ್ಷದಿಂದ ಯುವತಿ ಗೊತ್ತೆಂದು ಪೊಲೀಸರು ಪ್ರಶ್ನೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇನ್ನು ಸಚಿವರ ಕುಟುಂಬಸ್ಥರು ಗೋಕಾಕ್‌ಗೆ ತೆರಳಿರುವ ಮಾಹಿತಿ ಲಭ್ಯವಾಗಿದೆ. ನಾಲ್ಕು ದಿನಗಳ ಹಿಂದೆ ಕುಟುಂಬಸ್ಥರು ಗೋಕಾಕ್‌ಗೆ ತೆರಳಿದ್ದಾರೆ.

ಇದನ್ನೂ ಓದಿ: ರಾಜ್ಯ ರಾಜಕೀಯದಲ್ಲಿ ‘ಸಿಡಿ’ದ ರಾಸಲೀಲೆ ಕರ್ಮಕಾಂಡ: ರಮೇಶ್ ಜಾರಕಿಹೊಳಿ ಹಸಿಬಿಸಿ ದೃಶ್ಯ ರಿಲೀಸ್​

ಇದನ್ನೂ ಓದಿ: ಸಿಡಿ ಬಾಂಬ್ ಸಿಡಿಯುತ್ತಿದ್ದಂತೆ ‘ಸಾಹುಕಾರ್​’ ನಾಪತ್ತೆ.. ರಮೇಶ್ ಜಾರಕಿಹೊಳಿ ಸ್ವಕ್ಷೇತ್ರದಲ್ಲಿ ಪವರ್​ ಕಟ್​

Published On - 7:49 pm, Tue, 2 March 21

ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್