AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಮಾ ನದಿ ಬ್ಯಾರೇಜ್ ದಾಟುವ ವೇಳೆ ಬೈಕ್ ಸಮೇತ ಯುವಕ ನೀರುಪಾಲು

ವಿಜಯಪುರ: ಭೀಮಾ ನದಿಯಲ್ಲಿ ತುಂಬಿ ಹರಿಯುತ್ತಿದ್ದ ಬ್ಯಾರೇಜ್ ದಾಟುತ್ತಿದ್ದ ಯುವಕ ಬೈಕ್ ಸಮೇತ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಉಮರಾಣಿ ಬಳಿಯ ಉಮರಾಣಿ-ಲವಗಿ ಬ್ಯಾರೇಜ್ ಬಳಿ ನಡೆದಿದೆ. ಹತ್ತಳ್ಳಿ ಗ್ರಾಮದ ಯುವಕ ರಮೇಶ ದುಂಡಪ್ಪ ಬಸರಗಿ (25) ನದಿಯ ಪಾಲಾದ ಯುವಕನಾಗಿದ್ದು, ನೆರೆಯ ಮಹಾರಾಷ್ಟ್ರದಿಂದ ವಾಪಸ್ ಆಗಮಿಸುವ ವೇಳೆ ಈ ಅವಘಡ ಸಂಭವಿಸಿದೆ. ನದಿಯಲ್ಲಿ ಕೊಚ್ಚಿ ಹೋಗಿರುವ ಯುವಕನ‌ ಶವಕ್ಕಾಗಿ ಶೋಧ ಕಾರ್ಯ ಆರಂಭವಾಗಿದ್ದು, ಯುವಕನ ಶವ ಇನ್ನೂ ಪತ್ತೆಯಾಗಿಲ್ಲ. ಚಡಚಣ […]

ಭೀಮಾ ನದಿ ಬ್ಯಾರೇಜ್ ದಾಟುವ ವೇಳೆ ಬೈಕ್ ಸಮೇತ ಯುವಕ ನೀರುಪಾಲು
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:Sep 08, 2023 | 2:49 PM

Share

ವಿಜಯಪುರ: ಭೀಮಾ ನದಿಯಲ್ಲಿ ತುಂಬಿ ಹರಿಯುತ್ತಿದ್ದ ಬ್ಯಾರೇಜ್ ದಾಟುತ್ತಿದ್ದ ಯುವಕ ಬೈಕ್ ಸಮೇತ ನದಿಯಲ್ಲಿ ಕೊಚ್ಚಿ ಹೋಗಿರುವ ಘಟನೆ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಉಮರಾಣಿ ಬಳಿಯ ಉಮರಾಣಿ-ಲವಗಿ ಬ್ಯಾರೇಜ್ ಬಳಿ ನಡೆದಿದೆ.

ಹತ್ತಳ್ಳಿ ಗ್ರಾಮದ ಯುವಕ ರಮೇಶ ದುಂಡಪ್ಪ ಬಸರಗಿ (25) ನದಿಯ ಪಾಲಾದ ಯುವಕನಾಗಿದ್ದು, ನೆರೆಯ ಮಹಾರಾಷ್ಟ್ರದಿಂದ ವಾಪಸ್ ಆಗಮಿಸುವ ವೇಳೆ ಈ ಅವಘಡ ಸಂಭವಿಸಿದೆ. ನದಿಯಲ್ಲಿ ಕೊಚ್ಚಿ ಹೋಗಿರುವ ಯುವಕನ‌ ಶವಕ್ಕಾಗಿ ಶೋಧ ಕಾರ್ಯ ಆರಂಭವಾಗಿದ್ದು, ಯುವಕನ ಶವ ಇನ್ನೂ ಪತ್ತೆಯಾಗಿಲ್ಲ.

ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಚಡಚಣ ತಹಸೀಲ್ದಾರ ಆರ್ ಎಸ್ ರೇವಡಿಗಾರ, ಹಾಗೂ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Published On - 9:22 am, Sat, 12 September 20

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು