AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತ ಎಂಬ ಕಾರಣಕ್ಕೆ ಮದುವೆಯಾಗಲು ಎಲ್ಲೂ ಹೆಣ್ಣು ಸಿಗುತಿಲ್ಲ.. ಸಚಿವರಿಗೆ ಕಾಲ್ ಮಾಡಿ ಅಳಲು ತೋಡಿಕೊಂಡ ಯುವಕ

No Brides for Farmers | ರೈತ ಎಂಬ ಕಾರಣಕ್ಕೆ ಎಲ್ಲೂ ಹೆಣ್ಣು ಸಿಗದಿದ್ದಕ್ಕೆ ಅಸಮಾಧಾನಗೊಂಡ ರೈತ ಸಚಿವ ಸಿ.ಪಿ.ಯೋಗೇಶ್ವರ್​ ಬಳಿ ತನ್ನ ಅಳಲು ತೋಡಿಕೊಂಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ.

ರೈತ ಎಂಬ ಕಾರಣಕ್ಕೆ ಮದುವೆಯಾಗಲು ಎಲ್ಲೂ ಹೆಣ್ಣು ಸಿಗುತಿಲ್ಲ.. ಸಚಿವರಿಗೆ ಕಾಲ್ ಮಾಡಿ ಅಳಲು ತೋಡಿಕೊಂಡ ಯುವಕ
ಸಚಿವ ಸಿ.ಪಿ.ಯೋಗೇಶ್ವರ್
ಆಯೇಷಾ ಬಾನು
|

Updated on:Feb 18, 2021 | 1:08 PM

Share

ಮಂಡ್ಯ: ರೈತ ಎಂಬ ಕಾರಣಕ್ಕೆ ಎಲ್ಲೂ ಹೆಣ್ಣು ಸಿಗದಿದ್ದಕ್ಕೆ ಅಸಮಾಧಾನಗೊಂಡ ಯುವ ರೈತನೊಬ್ಬ ಸಚಿವ ಸಿ.ಪಿ.ಯೋಗೇಶ್ವರ್​ ಬಳಿ ತನ್ನ ಅಳಲು ತೋಡಿಕೊಂಡಿರುವ ಘಟನೆ ಸಕ್ಕರೆ ನಾಡು ಮಂಡ್ಯದಲ್ಲಿ ನಡೆದಿದೆ. ರೈತ ದೇಶದ ಬೆನ್ನೆಲುಬು ಅಂತಾರೆ ಆದ್ರೆ ಅದೇ ರೈತನಿಗೆ ಮದುವೆಯಾಗಲು ಹೆಣ್ಣು ಸಿಗುವುದೇ ಕಷ್ಟಕರ. ರೈತರ ಮನೆಯಲ್ಲಿ ಕೆಲಸ ಹೆಚ್ಚಿರುತ್ತೆ, ಹಾಗೂ ದುಡಿಮೆ ಸಹ ಜವರಾಯನ ಜೂಜಾಟದಂತೆ ಅಂತ ಹೆಣ್ಣು ಹೆತ್ತವರು ರೈತರಿಗೆ ತಮ್ಮ ಮಗಳನ್ನು ಕೊಡಲು ಹಿಂದೆ ಮುಂದೆ ನೋಡ್ತಾರೆ. ಇದರಂತೆಯೇ ಮದುವೆಯಾಗಲು ಹೆಣ್ಣು ಸಿಗದೆ ನೊಂದಿದ್ದ ರೈತ ಕರೆ ಮಾಡಿ ತನ್ನ ನೋವನ್ನು ಸಚಿವ ಸಿ.ಪಿ.ಯೋಗೇಶ್ವರ್​ ಬಳಿ ಹಂಚಿಕೊಂಡಿದ್ದಾನೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ನಿವಾಸಿ ಪ್ರವೀಣ್ ಎಂಬ ರೈತ ಫೋನ್​ ಮೂಲಕ ಕರೆ ಮಾಡಿ ಸಚಿವರ ಬಳಿ ಅಳಲು ತೋಡಿಕೊಂಡಿದ್ದಾನೆ. ಬೆಂಗಳೂರಿನಲ್ಲಿ ಕೆಲಸ ಇರುವವರಿಗೆ ಮಾತ್ರ ಹೆಣ್ಣು ಕೊಡ್ತಾರೆ.

ರೈತ ಎಂಬ ಕಾರಣಕ್ಕೆ ಎಲ್ಲೂ ನನಗೆ ಹೆಣ್ಣು ಸಿಗುತ್ತಿಲ್ಲ. ಹೀಗಾಗಿ ಅಂತರ್ ಜಾತಿಗೆ ನೀಡುವ ಪ್ರೋತ್ಸಾಹ ಧನದ ರೀತಿಯಲ್ಲಿ ರೈತನನ್ನು ಮದುವೆಯಾಗುವ ಹೆಣ್ಣಿಗೆ ಸರ್ಕಾರಿ ಯೋಜನೆ ರೂಪಿಸಿ ಎಂದು ರೈತ ಪ್ರವೀಣ್, ಸಚಿವರಿಗೆ ಸಲಹೆ ನೀಡಿದ್ದಾರೆ. ಜೊತೆಗೆ ಮಕ್ಕಳಿಗೂ ಸರ್ಕಾರಿ ಸೌಲಭ್ಯ ನೀಡಿದ್ದು ಈ ಬಗ್ಗೆ ಸಿಎಂ ಬಳಿ ಚರ್ಚೆ ಮಾಡುವಂತೆ ಸಚಿವರಿಗೆ ಮನವಿ ಮಾಡಿಕೊಂಡಿದ್ದಾನೆ. ಸದ್ಯ ಯುವಕನ ಮಾತಿಗೆ ಯೋಗೇಶ್ವರ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರಂತೆ.

ಇದನ್ನೂ ಓದಿ: ನಮಗೆ ಹೆಣ್ಣು ಕೊಡೋಕೆ ಹಿಂದೆ ಮುಂದೆ ನೋಡ್ತಾರೆ -ಅವಿವಾಹಿತ ನಟರ ಗೋಳಿನ ಕಥೆ

Published On - 12:54 pm, Thu, 18 February 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ