ಪಾರಿವಾಳ ವಿಚಾರಕ್ಕೆ ಗೆಳೆಯರ ಜಗಳ: ಬಿಡಿಸಲು ಹೋದವ ಮಸಣ ಸೇರಿದ

ಹಾಸನ: ಪಾರಿವಾಳ ವಿಚಾರಕ್ಕಾಗಿ ಇಬ್ಬರು ಗೆಳೆಯರ ನಡುವೆ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಹೋದ ಯುವಕ ಚಾಕುವಿನಿಂದ ಇರಿತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಸಮೀವುಲ್ಲಾ ಮೃತ ದುರ್ದೈವಿ. ನಿನ್ನೆ ರಾತ್ರಿ ಇಬ್ಬರು ಗೆಳೆಯರ ನಡುವೆ ಪಾರಿವಾಳ ವಿಚಾರಕ್ಕಾಗಿ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೇರಿದನ್ನು ಕಂಡು ಅಲ್ಲೇ ಇದ್ದ ಸಮೀವುಲ್ಲಾ ಇಬ್ಬರ ನಡುವೆ ಜಗಳ ನಿಲ್ಲಿಸಲು ಹೋಗಿದ್ದಾನೆ. ಆದರೆ ಇಬ್ಬರು ಗೆಳೆಯರ ಜಗಳದ ನಡುವೆ […]

ಪಾರಿವಾಳ ವಿಚಾರಕ್ಕೆ ಗೆಳೆಯರ ಜಗಳ: ಬಿಡಿಸಲು ಹೋದವ ಮಸಣ ಸೇರಿದ
ಸಾಧು ಶ್ರೀನಾಥ್​

Updated on: Jul 30, 2020 | 2:13 PM

ಹಾಸನ: ಪಾರಿವಾಳ ವಿಚಾರಕ್ಕಾಗಿ ಇಬ್ಬರು ಗೆಳೆಯರ ನಡುವೆ ನಡೆಯುತ್ತಿದ್ದ ಜಗಳವನ್ನು ಬಿಡಿಸಲು ಹೋದ ಯುವಕ ಚಾಕುವಿನಿಂದ ಇರಿತಕ್ಕೊಳಗಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಬಾಗೂರು ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಸಮೀವುಲ್ಲಾ ಮೃತ ದುರ್ದೈವಿ. ನಿನ್ನೆ ರಾತ್ರಿ ಇಬ್ಬರು ಗೆಳೆಯರ ನಡುವೆ ಪಾರಿವಾಳ ವಿಚಾರಕ್ಕಾಗಿ ಗಲಾಟೆ ನಡೆದಿದೆ. ಗಲಾಟೆ ತಾರಕಕ್ಕೇರಿದನ್ನು ಕಂಡು ಅಲ್ಲೇ ಇದ್ದ ಸಮೀವುಲ್ಲಾ ಇಬ್ಬರ ನಡುವೆ ಜಗಳ ನಿಲ್ಲಿಸಲು ಹೋಗಿದ್ದಾನೆ.

ಆದರೆ ಇಬ್ಬರು ಗೆಳೆಯರ ಜಗಳದ ನಡುವೆ ಜಗಳ ಬಿಡಿಸಲು ಹೋದ ಸಮೀವುಲ್ಲಾ ಚಾಕುವಿನಿಂದ ಹಲ್ಲೆಗೆ ಒಳಗಾಗಿದ್ದು, ತೀವ್ರ ರಕ್ತಸ್ರಾವವಾಗಿ ಸಾವನ್ನಪ್ಪಿದ್ದಾನೆ. ಚನ್ನರಾಯಪಟ್ಟಣ ನಗರ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Published On - 2:03 pm, Thu, 30 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us