AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಳ ವಿಚಾರ: ಇತ್ಯರ್ಥಕ್ಕೆಂದು ಕರೆದವರು ಕೊಂದೇಬಿಟ್ರು, ಆದರೆ ಕೊಂದಿದ್ಯಾರನ್ನ?

ನೆಲಮಂಗಲ: ಸಂಬಳ ಕೊಡಿಸುವ ವಿಚಾರದಲ್ಲಿ ಮಧ್ಯವರ್ತಿಯಾಗಿ ಹೋಗಿದ್ದವನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿ ಸಮೀಪದ ಸಾಯಿ ಲೇಔಟ್​ನಲ್ಲಿ ನಡೆದಿದೆ. ತುಮಕೂರಿನ ಕೊರಟಗೆರೆ ಮೂಲದ ಸತೀಶ್(26)ಕೊಲೆಯಾದ ಯುವಕನಾಗಿದ್ದು, ಪ್ರದೀಪ್ ಎಂಬ ಯುವಕನಿಗೆ ಐದು ತಿಂಗಳಿಂದ ಬರೀ ಅಡ್ವಾನ್ಸ್ ಹಣ ಕೊಟ್ಟು ಸಂಬಳ ಕೊಡದೆ ದುಡಿಸಿ ಕೊಳ್ಳತ್ತಿದ್ದ ಬಸ್ ಒನರ್ ಬಳಿ ಚಾಲಕ ಪ್ರದೀಪ್, ಜೊತೆಗೆ ಇರಲಿ ಅಂತ ಮಧ್ಯವರ್ತಿಯಾಗಿ  ಸತೀಶ್ ನನ್ನ ಜೊತೆಗೆ ಕರೆತಂದಿದ್ದ. ತಡರಾತ್ರಿ ಸಂಬಳ ಕೊಡುವ ವಿಚಾರವಾಗಿ ಬಸ್ […]

ಸಂಬಳ ವಿಚಾರ: ಇತ್ಯರ್ಥಕ್ಕೆಂದು ಕರೆದವರು ಕೊಂದೇಬಿಟ್ರು, ಆದರೆ ಕೊಂದಿದ್ಯಾರನ್ನ?
ಸಾಧು ಶ್ರೀನಾಥ್​
|

Updated on:Sep 19, 2020 | 7:45 AM

Share

ನೆಲಮಂಗಲ: ಸಂಬಳ ಕೊಡಿಸುವ ವಿಚಾರದಲ್ಲಿ ಮಧ್ಯವರ್ತಿಯಾಗಿ ಹೋಗಿದ್ದವನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿ ಸಮೀಪದ ಸಾಯಿ ಲೇಔಟ್​ನಲ್ಲಿ ನಡೆದಿದೆ.

ತುಮಕೂರಿನ ಕೊರಟಗೆರೆ ಮೂಲದ ಸತೀಶ್(26)ಕೊಲೆಯಾದ ಯುವಕನಾಗಿದ್ದು, ಪ್ರದೀಪ್ ಎಂಬ ಯುವಕನಿಗೆ ಐದು ತಿಂಗಳಿಂದ ಬರೀ ಅಡ್ವಾನ್ಸ್ ಹಣ ಕೊಟ್ಟು ಸಂಬಳ ಕೊಡದೆ ದುಡಿಸಿ ಕೊಳ್ಳತ್ತಿದ್ದ ಬಸ್ ಒನರ್ ಬಳಿ ಚಾಲಕ ಪ್ರದೀಪ್, ಜೊತೆಗೆ ಇರಲಿ ಅಂತ ಮಧ್ಯವರ್ತಿಯಾಗಿ  ಸತೀಶ್ ನನ್ನ ಜೊತೆಗೆ ಕರೆತಂದಿದ್ದ.

ತಡರಾತ್ರಿ ಸಂಬಳ ಕೊಡುವ ವಿಚಾರವಾಗಿ ಬಸ್ ಒನರ್ ಹರೀಶ್​ ಚಾಲಕ ಪ್ರದೀಪ್​ನನ್ನು ಕರೆಸಿದ್ದರು. ಸಂಬಳ ಕೊಡ್ತೀನಿ ಅಂತ ಹೇಳಿದ ಬಳಿಕ ಎಲ್ರೂ ಸೇರಿ ಎಣ್ಣೆ ಹೊಡೆದ್ರು. ಬಳಿಕ ಮತ್ತೆ ಗಲಾಟೆ ಆರಂಭಿಸಿ ಮಧ್ಯವರ್ತಿಯಾಗಿ ಬಂದಿದ್ದವನ ಮೇಲೆ ಬಿಯರ್ ಬಾಟಲಿಯಿಂದ ಒನರ್ ಹರೀಶ್ ಮತ್ತು ಇತನ ಸಹಚರರಾದ ಮಲ್ಲೇಶ್,ಸಿದ್ದು, ಸೇರಿ ತೀವ್ರವಾಗಿ ಹಲ್ಲೆ ಮಾಡಿದ್ದಾರೆ.

ಹಲ್ಲೆಗೊಳಗಾಗಿದ್ದ ಸತೀಶನಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ಬಳಕ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಆ್ಯಂಬುಲೆನ್ಸ್​ ಮುಖಾಂತರ ರವಾನೆ ಮಾಡಲಾಗಿದೆ. ಆದರೆ ನಿಮಾನ್ಸ್​ನಲ್ಲಿ ಬೆಡ್ ಸಿಗದ ಕಾರಣ ವಾಪಸ್ ನೆಲಮಂಗಲಕ್ಕೆ ಕರೆತಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಸತೀಶ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Published On - 7:33 am, Sat, 19 September 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!