AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಬಳ ವಿಚಾರ: ಇತ್ಯರ್ಥಕ್ಕೆಂದು ಕರೆದವರು ಕೊಂದೇಬಿಟ್ರು, ಆದರೆ ಕೊಂದಿದ್ಯಾರನ್ನ?

ನೆಲಮಂಗಲ: ಸಂಬಳ ಕೊಡಿಸುವ ವಿಚಾರದಲ್ಲಿ ಮಧ್ಯವರ್ತಿಯಾಗಿ ಹೋಗಿದ್ದವನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿ ಸಮೀಪದ ಸಾಯಿ ಲೇಔಟ್​ನಲ್ಲಿ ನಡೆದಿದೆ. ತುಮಕೂರಿನ ಕೊರಟಗೆರೆ ಮೂಲದ ಸತೀಶ್(26)ಕೊಲೆಯಾದ ಯುವಕನಾಗಿದ್ದು, ಪ್ರದೀಪ್ ಎಂಬ ಯುವಕನಿಗೆ ಐದು ತಿಂಗಳಿಂದ ಬರೀ ಅಡ್ವಾನ್ಸ್ ಹಣ ಕೊಟ್ಟು ಸಂಬಳ ಕೊಡದೆ ದುಡಿಸಿ ಕೊಳ್ಳತ್ತಿದ್ದ ಬಸ್ ಒನರ್ ಬಳಿ ಚಾಲಕ ಪ್ರದೀಪ್, ಜೊತೆಗೆ ಇರಲಿ ಅಂತ ಮಧ್ಯವರ್ತಿಯಾಗಿ  ಸತೀಶ್ ನನ್ನ ಜೊತೆಗೆ ಕರೆತಂದಿದ್ದ. ತಡರಾತ್ರಿ ಸಂಬಳ ಕೊಡುವ ವಿಚಾರವಾಗಿ ಬಸ್ […]

ಸಂಬಳ ವಿಚಾರ: ಇತ್ಯರ್ಥಕ್ಕೆಂದು ಕರೆದವರು ಕೊಂದೇಬಿಟ್ರು, ಆದರೆ ಕೊಂದಿದ್ಯಾರನ್ನ?
ಸಾಧು ಶ್ರೀನಾಥ್​
|

Updated on:Sep 19, 2020 | 7:45 AM

Share

ನೆಲಮಂಗಲ: ಸಂಬಳ ಕೊಡಿಸುವ ವಿಚಾರದಲ್ಲಿ ಮಧ್ಯವರ್ತಿಯಾಗಿ ಹೋಗಿದ್ದವನನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿ ಸಮೀಪದ ಸಾಯಿ ಲೇಔಟ್​ನಲ್ಲಿ ನಡೆದಿದೆ.

ತುಮಕೂರಿನ ಕೊರಟಗೆರೆ ಮೂಲದ ಸತೀಶ್(26)ಕೊಲೆಯಾದ ಯುವಕನಾಗಿದ್ದು, ಪ್ರದೀಪ್ ಎಂಬ ಯುವಕನಿಗೆ ಐದು ತಿಂಗಳಿಂದ ಬರೀ ಅಡ್ವಾನ್ಸ್ ಹಣ ಕೊಟ್ಟು ಸಂಬಳ ಕೊಡದೆ ದುಡಿಸಿ ಕೊಳ್ಳತ್ತಿದ್ದ ಬಸ್ ಒನರ್ ಬಳಿ ಚಾಲಕ ಪ್ರದೀಪ್, ಜೊತೆಗೆ ಇರಲಿ ಅಂತ ಮಧ್ಯವರ್ತಿಯಾಗಿ  ಸತೀಶ್ ನನ್ನ ಜೊತೆಗೆ ಕರೆತಂದಿದ್ದ.

ತಡರಾತ್ರಿ ಸಂಬಳ ಕೊಡುವ ವಿಚಾರವಾಗಿ ಬಸ್ ಒನರ್ ಹರೀಶ್​ ಚಾಲಕ ಪ್ರದೀಪ್​ನನ್ನು ಕರೆಸಿದ್ದರು. ಸಂಬಳ ಕೊಡ್ತೀನಿ ಅಂತ ಹೇಳಿದ ಬಳಿಕ ಎಲ್ರೂ ಸೇರಿ ಎಣ್ಣೆ ಹೊಡೆದ್ರು. ಬಳಿಕ ಮತ್ತೆ ಗಲಾಟೆ ಆರಂಭಿಸಿ ಮಧ್ಯವರ್ತಿಯಾಗಿ ಬಂದಿದ್ದವನ ಮೇಲೆ ಬಿಯರ್ ಬಾಟಲಿಯಿಂದ ಒನರ್ ಹರೀಶ್ ಮತ್ತು ಇತನ ಸಹಚರರಾದ ಮಲ್ಲೇಶ್,ಸಿದ್ದು, ಸೇರಿ ತೀವ್ರವಾಗಿ ಹಲ್ಲೆ ಮಾಡಿದ್ದಾರೆ.

ಹಲ್ಲೆಗೊಳಗಾಗಿದ್ದ ಸತೀಶನಿಗೆ ನೆಲಮಂಗಲ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ಬಳಕ ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಆ್ಯಂಬುಲೆನ್ಸ್​ ಮುಖಾಂತರ ರವಾನೆ ಮಾಡಲಾಗಿದೆ. ಆದರೆ ನಿಮಾನ್ಸ್​ನಲ್ಲಿ ಬೆಡ್ ಸಿಗದ ಕಾರಣ ವಾಪಸ್ ನೆಲಮಂಗಲಕ್ಕೆ ಕರೆತಂದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಸತೀಶ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ.

Published On - 7:33 am, Sat, 19 September 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ