AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ಲಾಸ್ಮಾ ದಾನ ಮಾಡಿ ಹಾರ್ಟ್ ಸ್ಪೇಷಲಿಸ್ಟ್ ಜೀವ ಉಳಿಸಿದ ಯುವಕ ಏನು ಹೇಳಿದ ಗೊತ್ತಾ?

ಬೆಂಗಳೂರು: ಕೊರೊನಾದ ಸಂಕಷ್ಟದ ಸಮಯದಲ್ಲಿ ಸಾವಿರಾರು ರೋಗಿಗಳ ಪ್ರಾಣ ಉಳಿಸುವ ವೈದ್ಯರೇ ಸಂಕಷ್ಟಕ್ಕೆ ಸಿಲುಕಿದಾಗ ಪ್ಲಾಸ್ಮಾ ಥೇರಪಿ ಸಂಜೀವಿನಿಯಂತೆ ಅವರ ಜೀವ ಕಾಪಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನ ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ನಟೇಶ್ ಅವರಿಗೆ ಕೊರೊನಾ ಸೋಂಕು ತಗಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪರಿಸ್ಥಿತಿ ಗಂಭೀರವಾದಗ ವೈದ್ಯರು ಡಾ. ನಟೇಶ್ ಅವರಿಗೆ ಪ್ಲಾಸ್ಮಾ ಥೆರಪಿ ನೀಡಲು ನಿರ್ದರಿಸಿ ಬೆಂಗಳೂರಿನಲ್ಲಿರುವ ಹೆಚ್‌ಸಿಜಿ ಆಸ್ಪತ್ರೆ ಸಂಪರ್ಕಿಸಿದ್ದರು. ಅಲ್ಲಿ ಕುನಾಲ್ ಎನ್ನುವ ಯುವಕ ದಾನ ಮಾಡಿದ್ದ […]

ಪ್ಲಾಸ್ಮಾ ದಾನ ಮಾಡಿ ಹಾರ್ಟ್ ಸ್ಪೇಷಲಿಸ್ಟ್ ಜೀವ ಉಳಿಸಿದ ಯುವಕ ಏನು ಹೇಳಿದ ಗೊತ್ತಾ?
Guru
|

Updated on: Aug 09, 2020 | 2:03 PM

Share

ಬೆಂಗಳೂರು: ಕೊರೊನಾದ ಸಂಕಷ್ಟದ ಸಮಯದಲ್ಲಿ ಸಾವಿರಾರು ರೋಗಿಗಳ ಪ್ರಾಣ ಉಳಿಸುವ ವೈದ್ಯರೇ ಸಂಕಷ್ಟಕ್ಕೆ ಸಿಲುಕಿದಾಗ ಪ್ಲಾಸ್ಮಾ ಥೇರಪಿ ಸಂಜೀವಿನಿಯಂತೆ ಅವರ ಜೀವ ಕಾಪಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹೌದು ಬೆಂಗಳೂರಿನ ಜಯದೇವ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ನಟೇಶ್ ಅವರಿಗೆ ಕೊರೊನಾ ಸೋಂಕು ತಗಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪರಿಸ್ಥಿತಿ ಗಂಭೀರವಾದಗ ವೈದ್ಯರು ಡಾ. ನಟೇಶ್ ಅವರಿಗೆ ಪ್ಲಾಸ್ಮಾ ಥೆರಪಿ ನೀಡಲು ನಿರ್ದರಿಸಿ ಬೆಂಗಳೂರಿನಲ್ಲಿರುವ ಹೆಚ್‌ಸಿಜಿ ಆಸ್ಪತ್ರೆ ಸಂಪರ್ಕಿಸಿದ್ದರು.

ಅಲ್ಲಿ ಕುನಾಲ್ ಎನ್ನುವ ಯುವಕ ದಾನ ಮಾಡಿದ್ದ ಪ್ಲಾಸ್ಮಾವನ್ನು ಹೆಚ್‌ಸಿಜಿ ಆಸ್ಪತ್ರೆ ಡಾಕ್ಟರ್ ನಟೇಶ್ ಅವರಿಗೆ ನೀಡಿತ್ತು. ಆಗ ಈ ಪ್ಲಾಸ್ಮಾದಿಂದ ಡಾ. ನಟೆಶ್‌ಗೆ ಚಿಕಿತ್ಸೆ ನೀಡಲಾಗಿತ್ತು. ಈಗ ಕುನಾಲ್ ನೀಡಿದ ಪ್ಲಾಸ್ಮಾದಿಂದ ಡಾ. ನಟೇಶ್ ಬದುಕುಳಿದ್ದಾರೆ.

ಕೊರೊನಾ ಸೋಂಕಿನಿಂದ ಯಶಸ್ವಿಯಾಗಿ ಗುಣಮುಖರಾದವರ ಪ್ಲಾಸ್ಮಾವನ್ನು ಇತರ ಸೋಂಕಿತರ ಚಿಕಿತ್ಸೆಗೆ ಉಪಯೋಗಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಇಲ್ಲಿಯವರೆಗೆ ಪ್ಲಾಸ್ಮಾ ಥೆರಪಿಯಿಂದ ಆರು ಜೀವಗಳನ್ನ ಉಳಿಸಲಾಗಿದೆ.

ಈ ಬಗ್ಗೆ ಮಾತನಾಡಿರುವ ಕುನಾಲ್ ಜನರ ಜೀವ ಉಳಿಸುವ ವೈದ್ಯರಿಗೆ ನನ್ನ ಪ್ಲಾಸ್ಮಾ ಉಪಯೋಗಕ್ಕೆ ಬಂದಿರೋದಕ್ಕೆ ಸಂತಸವಾಗಿದೆ ಎಂದು ತಿಳಿಸಿದ್ದಾರೆ. ಅಷ್ಟೇ ಅಲ್ಲ ಜಯದೇವ ಆಸ್ಪತ್ರೆ ವೈದ್ಯರು ಕೂಡಾ ಕುನಾಲ್‌ಗೆ ವಿಡಿಯೋ ಮೂಲಕ ಮಾತನಾಡಿ ಧನ್ಯವಾದ ಹೇಳಿದ್ದಾರೆ.

ವೈದ್ಯರ ಪ್ರೋತ್ಸಾದ ಮಾತು ಕೇಳಿ ಕುನಾಲ್ ಈಗ ಮತ್ತೇ ತಮ್ಮ ಪ್ಲಾಸ್ಮಾ ದಾನ ಮಾಡಲು ರೆಡಿಯಾಗಿದ್ದಾರೆ. ಜೊತೆಗೆ ಕೋವಿಡ್‌ನಿಂದ ಗುಣಮುಖರಾದವರು ಪ್ಲಾಸ್ಮಾ ಡೊನೇಟ್ ಮಾಡಿ ಜೀವ ಉಳಿಸಿ ಎಂದು ಇತರರಿಗೆ ಕುನಾಲ್ ಮನವಿ ಮಾಡಿದ್ದಾರೆ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು