ಪ್ರೀತಿಸಿದ ಹುಡುಗಿಗೆ ನಡುರಸ್ತೆಯಲ್ಲೇ ತಾಳಿ ಕಟ್ಟಿದ.. ಈಗ ಗ್ರಾಮಸ್ಥರಿಗೆ ಶುರುವಾಯ್ತು ಸಂಕಷ್ಟ

ದಾವಣಗೆರೆ: ಪ್ರೀತಿಸಿದ ಹುಡುಗಿಗೆ ಯುವಕನೊಬ್ಬ ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಸ್ವಾರಸ್ಯಕರ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೇಮಂತ್ ಎಂಬ ಯುವಕ ತಾನು ಪ್ರೀತಿಸಿದ ಯುವತಿಗೆ ನಡು ರಸ್ತೆಯಲ್ಲೇ ತಾಳಿಕಟ್ಟಿದ್ದಾನೆ. ಹೇಮಂತ್​ ಕಳೆದ 4 ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಆದರೆ, ಇವರ ಪ್ರೀತಿಗೆ ಜಾತಿ ಅಡ್ಡಬಂದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಇದಕ್ಕೆ ಒಪ್ಪದೆ ಹೇಮಂತ್​ನಿಗೆ ತಮ್ಮ ಜಾತಿಯ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ. ಸದ್ಯ, ಯುವಕ‌ ಮತ್ತು ಯುವತಿ ಅನ್ಯಜಾತಿಗೆ ಸೇರಿದ್ದವರಾಗಿರುವುದರಿಂದ […]

ಪ್ರೀತಿಸಿದ ಹುಡುಗಿಗೆ ನಡುರಸ್ತೆಯಲ್ಲೇ ತಾಳಿ ಕಟ್ಟಿದ.. ಈಗ ಗ್ರಾಮಸ್ಥರಿಗೆ ಶುರುವಾಯ್ತು ಸಂಕಷ್ಟ
ಸಾಧು ಶ್ರೀನಾಥ್​ Edited By:

Updated on: Sep 06, 2020 | 1:25 PM

ದಾವಣಗೆರೆ: ಪ್ರೀತಿಸಿದ ಹುಡುಗಿಗೆ ಯುವಕನೊಬ್ಬ ನಡು ರಸ್ತೆಯಲ್ಲೇ ತಾಳಿ ಕಟ್ಟಿರುವ ಸ್ವಾರಸ್ಯಕರ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ತಿಮ್ಲಾಪುರ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹೇಮಂತ್ ಎಂಬ ಯುವಕ ತಾನು ಪ್ರೀತಿಸಿದ ಯುವತಿಗೆ ನಡು ರಸ್ತೆಯಲ್ಲೇ ತಾಳಿಕಟ್ಟಿದ್ದಾನೆ.

ಹೇಮಂತ್​ ಕಳೆದ 4 ವರ್ಷದಿಂದ ಯುವತಿಯನ್ನು ಪ್ರೀತಿಸುತ್ತಿದ್ದ ಎಂದು ತಿಳಿದುಬಂದಿದೆ. ಆದರೆ, ಇವರ ಪ್ರೀತಿಗೆ ಜಾತಿ ಅಡ್ಡಬಂದ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಇದಕ್ಕೆ ಒಪ್ಪದೆ ಹೇಮಂತ್​ನಿಗೆ ತಮ್ಮ ಜಾತಿಯ ಯುವತಿಯೊಂದಿಗೆ ಮದುವೆ ಮಾಡಿಸಿದ್ದಾರೆ.

ಸದ್ಯ, ಯುವಕ‌ ಮತ್ತು ಯುವತಿ ಅನ್ಯಜಾತಿಗೆ ಸೇರಿದ್ದವರಾಗಿರುವುದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದು, ಸ್ಥಳಕ್ಕೆ ಚನ್ನಗಿರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us