AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳ ಬಂಧನ ಖಂಡಿಸಿ ಆ ಯುವಕ ವಿಷ ಕುಡಿದಿದ್ದ! ಮುಂದೇನಾಯ್ತು?

ಬೆಳಗಾವಿ: ಸಾಯೋಕೆ ಸಾವಿರ ಕಾರಣ ಅಂತಾರೆ. ಆದ್ರೆ ಹೀಗೂ ಸಾಯಬಹುದು ಅಂತಾ ಬಹುಶಃ ಯಾರೂ ಅಂದುಕೊಂಡಿರಲಿಲ್ಲ ನೋಡಿ. ಪೊಲೀಸರು ಕುಟುಂಬ ಸದಸ್ಯರನ್ನ ಅನ್ಯಾಯವಾಗಿ ಅರೆಸ್ಟ್‌ ಮಾಡಿದ್ದಾರೆ ಅಂತಾ ವಿಷ ಕುಡಿದು ಪ್ರತಿಭಟಿಸಿದ್ದ ವ್ಯಕ್ತಿ ಈಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊಸಕುರುಗುಂದ ಗ್ರಾಮದ ಸಂಜು ನಾಯ್ಕರ್‌ ಎಂಬಾತನೇ ಮೃತ ದುರ್ದೈವಿ. ಈತನ ಅಣ್ಣನ ಹೆಂಡತಿಗೆ ಪರಪುರುಷನ ಜತೆ ಅಕ್ರಮ ಸಂಬಂಧವಿತ್ತೆನ್ನಲಾಗಿದೆ. ಆಗ ಸಂಜುನ ಅಣ್ಣ ಮತ್ತು ಕುಟುಂಬ ಸದಸ್ಯರು ಸೇರಿ ಆತನನ್ನು […]

ಆರೋಪಿಗಳ ಬಂಧನ ಖಂಡಿಸಿ ಆ ಯುವಕ ವಿಷ ಕುಡಿದಿದ್ದ! ಮುಂದೇನಾಯ್ತು?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jun 26, 2020 | 3:13 PM

Share

ಬೆಳಗಾವಿ: ಸಾಯೋಕೆ ಸಾವಿರ ಕಾರಣ ಅಂತಾರೆ. ಆದ್ರೆ ಹೀಗೂ ಸಾಯಬಹುದು ಅಂತಾ ಬಹುಶಃ ಯಾರೂ ಅಂದುಕೊಂಡಿರಲಿಲ್ಲ ನೋಡಿ. ಪೊಲೀಸರು ಕುಟುಂಬ ಸದಸ್ಯರನ್ನ ಅನ್ಯಾಯವಾಗಿ ಅರೆಸ್ಟ್‌ ಮಾಡಿದ್ದಾರೆ ಅಂತಾ ವಿಷ ಕುಡಿದು ಪ್ರತಿಭಟಿಸಿದ್ದ ವ್ಯಕ್ತಿ ಈಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊಸಕುರುಗುಂದ ಗ್ರಾಮದ ಸಂಜು ನಾಯ್ಕರ್‌ ಎಂಬಾತನೇ ಮೃತ ದುರ್ದೈವಿ. ಈತನ ಅಣ್ಣನ ಹೆಂಡತಿಗೆ ಪರಪುರುಷನ ಜತೆ ಅಕ್ರಮ ಸಂಬಂಧವಿತ್ತೆನ್ನಲಾಗಿದೆ. ಆಗ ಸಂಜುನ ಅಣ್ಣ ಮತ್ತು ಕುಟುಂಬ ಸದಸ್ಯರು ಸೇರಿ ಆತನನ್ನು ಕೊಲೆ ಮಾಡಿದ್ದಾರೆನ್ನಲಾಗಿದೆ. ಈ ಆರೋಪದ ಮೇಲೆ ಬೈಲಹೊಂಗಲ ಪೊಲೀಸರು ಸಂಜುನ ಅಣ್ಣ ಮತ್ತು ಕುಟುಂಬದ ಸದಸ್ಯರನ್ನು ಬಂಧಿಸಿದ್ದರು.

ಈ ಸಂಬಂಧ ಸಂಜು ನಾಯ್ಕರ್‌ ಗುರುವಾರ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪೊಲೀಸರು ತನ್ನ ಕುಟುಂಬಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಮಾಡಿದ್ದ. ಈ ಸಂದರ್ಭದಲ್ಲಿ ವಿಷ ಕೂಡಾ ಕುಡಿದಿದ್ದ.

ಆಗ ಪೊಲೀಸರು ತಕ್ಷಣವೇ ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇವತ್ತು ಆಸ್ಪತ್ರೆಯಲ್ಲಿ ಸಂಜು ಕೊನೆಯುಸಿರೆಳೆದಿದ್ದಾನೆ. ಸಂಜು ಮೃತನಾದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಆವರಣದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

Published On - 3:13 pm, Fri, 26 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ