AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳ ಬಂಧನ ಖಂಡಿಸಿ ಆ ಯುವಕ ವಿಷ ಕುಡಿದಿದ್ದ! ಮುಂದೇನಾಯ್ತು?

ಬೆಳಗಾವಿ: ಸಾಯೋಕೆ ಸಾವಿರ ಕಾರಣ ಅಂತಾರೆ. ಆದ್ರೆ ಹೀಗೂ ಸಾಯಬಹುದು ಅಂತಾ ಬಹುಶಃ ಯಾರೂ ಅಂದುಕೊಂಡಿರಲಿಲ್ಲ ನೋಡಿ. ಪೊಲೀಸರು ಕುಟುಂಬ ಸದಸ್ಯರನ್ನ ಅನ್ಯಾಯವಾಗಿ ಅರೆಸ್ಟ್‌ ಮಾಡಿದ್ದಾರೆ ಅಂತಾ ವಿಷ ಕುಡಿದು ಪ್ರತಿಭಟಿಸಿದ್ದ ವ್ಯಕ್ತಿ ಈಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊಸಕುರುಗುಂದ ಗ್ರಾಮದ ಸಂಜು ನಾಯ್ಕರ್‌ ಎಂಬಾತನೇ ಮೃತ ದುರ್ದೈವಿ. ಈತನ ಅಣ್ಣನ ಹೆಂಡತಿಗೆ ಪರಪುರುಷನ ಜತೆ ಅಕ್ರಮ ಸಂಬಂಧವಿತ್ತೆನ್ನಲಾಗಿದೆ. ಆಗ ಸಂಜುನ ಅಣ್ಣ ಮತ್ತು ಕುಟುಂಬ ಸದಸ್ಯರು ಸೇರಿ ಆತನನ್ನು […]

ಆರೋಪಿಗಳ ಬಂಧನ ಖಂಡಿಸಿ ಆ ಯುವಕ ವಿಷ ಕುಡಿದಿದ್ದ! ಮುಂದೇನಾಯ್ತು?
ಆಯೇಷಾ ಬಾನು
| Edited By: |

Updated on:Jun 26, 2020 | 3:13 PM

Share

ಬೆಳಗಾವಿ: ಸಾಯೋಕೆ ಸಾವಿರ ಕಾರಣ ಅಂತಾರೆ. ಆದ್ರೆ ಹೀಗೂ ಸಾಯಬಹುದು ಅಂತಾ ಬಹುಶಃ ಯಾರೂ ಅಂದುಕೊಂಡಿರಲಿಲ್ಲ ನೋಡಿ. ಪೊಲೀಸರು ಕುಟುಂಬ ಸದಸ್ಯರನ್ನ ಅನ್ಯಾಯವಾಗಿ ಅರೆಸ್ಟ್‌ ಮಾಡಿದ್ದಾರೆ ಅಂತಾ ವಿಷ ಕುಡಿದು ಪ್ರತಿಭಟಿಸಿದ್ದ ವ್ಯಕ್ತಿ ಈಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊಸಕುರುಗುಂದ ಗ್ರಾಮದ ಸಂಜು ನಾಯ್ಕರ್‌ ಎಂಬಾತನೇ ಮೃತ ದುರ್ದೈವಿ. ಈತನ ಅಣ್ಣನ ಹೆಂಡತಿಗೆ ಪರಪುರುಷನ ಜತೆ ಅಕ್ರಮ ಸಂಬಂಧವಿತ್ತೆನ್ನಲಾಗಿದೆ. ಆಗ ಸಂಜುನ ಅಣ್ಣ ಮತ್ತು ಕುಟುಂಬ ಸದಸ್ಯರು ಸೇರಿ ಆತನನ್ನು ಕೊಲೆ ಮಾಡಿದ್ದಾರೆನ್ನಲಾಗಿದೆ. ಈ ಆರೋಪದ ಮೇಲೆ ಬೈಲಹೊಂಗಲ ಪೊಲೀಸರು ಸಂಜುನ ಅಣ್ಣ ಮತ್ತು ಕುಟುಂಬದ ಸದಸ್ಯರನ್ನು ಬಂಧಿಸಿದ್ದರು.

ಈ ಸಂಬಂಧ ಸಂಜು ನಾಯ್ಕರ್‌ ಗುರುವಾರ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪೊಲೀಸರು ತನ್ನ ಕುಟುಂಬಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಮಾಡಿದ್ದ. ಈ ಸಂದರ್ಭದಲ್ಲಿ ವಿಷ ಕೂಡಾ ಕುಡಿದಿದ್ದ.

ಆಗ ಪೊಲೀಸರು ತಕ್ಷಣವೇ ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇವತ್ತು ಆಸ್ಪತ್ರೆಯಲ್ಲಿ ಸಂಜು ಕೊನೆಯುಸಿರೆಳೆದಿದ್ದಾನೆ. ಸಂಜು ಮೃತನಾದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಆವರಣದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

Published On - 3:13 pm, Fri, 26 June 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!