AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳ ಬಂಧನ ಖಂಡಿಸಿ ಆ ಯುವಕ ವಿಷ ಕುಡಿದಿದ್ದ! ಮುಂದೇನಾಯ್ತು?

ಬೆಳಗಾವಿ: ಸಾಯೋಕೆ ಸಾವಿರ ಕಾರಣ ಅಂತಾರೆ. ಆದ್ರೆ ಹೀಗೂ ಸಾಯಬಹುದು ಅಂತಾ ಬಹುಶಃ ಯಾರೂ ಅಂದುಕೊಂಡಿರಲಿಲ್ಲ ನೋಡಿ. ಪೊಲೀಸರು ಕುಟುಂಬ ಸದಸ್ಯರನ್ನ ಅನ್ಯಾಯವಾಗಿ ಅರೆಸ್ಟ್‌ ಮಾಡಿದ್ದಾರೆ ಅಂತಾ ವಿಷ ಕುಡಿದು ಪ್ರತಿಭಟಿಸಿದ್ದ ವ್ಯಕ್ತಿ ಈಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊಸಕುರುಗುಂದ ಗ್ರಾಮದ ಸಂಜು ನಾಯ್ಕರ್‌ ಎಂಬಾತನೇ ಮೃತ ದುರ್ದೈವಿ. ಈತನ ಅಣ್ಣನ ಹೆಂಡತಿಗೆ ಪರಪುರುಷನ ಜತೆ ಅಕ್ರಮ ಸಂಬಂಧವಿತ್ತೆನ್ನಲಾಗಿದೆ. ಆಗ ಸಂಜುನ ಅಣ್ಣ ಮತ್ತು ಕುಟುಂಬ ಸದಸ್ಯರು ಸೇರಿ ಆತನನ್ನು […]

ಆರೋಪಿಗಳ ಬಂಧನ ಖಂಡಿಸಿ ಆ ಯುವಕ ವಿಷ ಕುಡಿದಿದ್ದ! ಮುಂದೇನಾಯ್ತು?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jun 26, 2020 | 3:13 PM

Share

ಬೆಳಗಾವಿ: ಸಾಯೋಕೆ ಸಾವಿರ ಕಾರಣ ಅಂತಾರೆ. ಆದ್ರೆ ಹೀಗೂ ಸಾಯಬಹುದು ಅಂತಾ ಬಹುಶಃ ಯಾರೂ ಅಂದುಕೊಂಡಿರಲಿಲ್ಲ ನೋಡಿ. ಪೊಲೀಸರು ಕುಟುಂಬ ಸದಸ್ಯರನ್ನ ಅನ್ಯಾಯವಾಗಿ ಅರೆಸ್ಟ್‌ ಮಾಡಿದ್ದಾರೆ ಅಂತಾ ವಿಷ ಕುಡಿದು ಪ್ರತಿಭಟಿಸಿದ್ದ ವ್ಯಕ್ತಿ ಈಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊಸಕುರುಗುಂದ ಗ್ರಾಮದ ಸಂಜು ನಾಯ್ಕರ್‌ ಎಂಬಾತನೇ ಮೃತ ದುರ್ದೈವಿ. ಈತನ ಅಣ್ಣನ ಹೆಂಡತಿಗೆ ಪರಪುರುಷನ ಜತೆ ಅಕ್ರಮ ಸಂಬಂಧವಿತ್ತೆನ್ನಲಾಗಿದೆ. ಆಗ ಸಂಜುನ ಅಣ್ಣ ಮತ್ತು ಕುಟುಂಬ ಸದಸ್ಯರು ಸೇರಿ ಆತನನ್ನು ಕೊಲೆ ಮಾಡಿದ್ದಾರೆನ್ನಲಾಗಿದೆ. ಈ ಆರೋಪದ ಮೇಲೆ ಬೈಲಹೊಂಗಲ ಪೊಲೀಸರು ಸಂಜುನ ಅಣ್ಣ ಮತ್ತು ಕುಟುಂಬದ ಸದಸ್ಯರನ್ನು ಬಂಧಿಸಿದ್ದರು.

ಈ ಸಂಬಂಧ ಸಂಜು ನಾಯ್ಕರ್‌ ಗುರುವಾರ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪೊಲೀಸರು ತನ್ನ ಕುಟುಂಬಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಮಾಡಿದ್ದ. ಈ ಸಂದರ್ಭದಲ್ಲಿ ವಿಷ ಕೂಡಾ ಕುಡಿದಿದ್ದ.

ಆಗ ಪೊಲೀಸರು ತಕ್ಷಣವೇ ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇವತ್ತು ಆಸ್ಪತ್ರೆಯಲ್ಲಿ ಸಂಜು ಕೊನೆಯುಸಿರೆಳೆದಿದ್ದಾನೆ. ಸಂಜು ಮೃತನಾದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಆವರಣದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

Published On - 3:13 pm, Fri, 26 June 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!