AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಪಿಗಳ ಬಂಧನ ಖಂಡಿಸಿ ಆ ಯುವಕ ವಿಷ ಕುಡಿದಿದ್ದ! ಮುಂದೇನಾಯ್ತು?

ಬೆಳಗಾವಿ: ಸಾಯೋಕೆ ಸಾವಿರ ಕಾರಣ ಅಂತಾರೆ. ಆದ್ರೆ ಹೀಗೂ ಸಾಯಬಹುದು ಅಂತಾ ಬಹುಶಃ ಯಾರೂ ಅಂದುಕೊಂಡಿರಲಿಲ್ಲ ನೋಡಿ. ಪೊಲೀಸರು ಕುಟುಂಬ ಸದಸ್ಯರನ್ನ ಅನ್ಯಾಯವಾಗಿ ಅರೆಸ್ಟ್‌ ಮಾಡಿದ್ದಾರೆ ಅಂತಾ ವಿಷ ಕುಡಿದು ಪ್ರತಿಭಟಿಸಿದ್ದ ವ್ಯಕ್ತಿ ಈಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊಸಕುರುಗುಂದ ಗ್ರಾಮದ ಸಂಜು ನಾಯ್ಕರ್‌ ಎಂಬಾತನೇ ಮೃತ ದುರ್ದೈವಿ. ಈತನ ಅಣ್ಣನ ಹೆಂಡತಿಗೆ ಪರಪುರುಷನ ಜತೆ ಅಕ್ರಮ ಸಂಬಂಧವಿತ್ತೆನ್ನಲಾಗಿದೆ. ಆಗ ಸಂಜುನ ಅಣ್ಣ ಮತ್ತು ಕುಟುಂಬ ಸದಸ್ಯರು ಸೇರಿ ಆತನನ್ನು […]

ಆರೋಪಿಗಳ ಬಂಧನ ಖಂಡಿಸಿ ಆ ಯುವಕ ವಿಷ ಕುಡಿದಿದ್ದ! ಮುಂದೇನಾಯ್ತು?
ಆಯೇಷಾ ಬಾನು
| Edited By: |

Updated on:Jun 26, 2020 | 3:13 PM

Share

ಬೆಳಗಾವಿ: ಸಾಯೋಕೆ ಸಾವಿರ ಕಾರಣ ಅಂತಾರೆ. ಆದ್ರೆ ಹೀಗೂ ಸಾಯಬಹುದು ಅಂತಾ ಬಹುಶಃ ಯಾರೂ ಅಂದುಕೊಂಡಿರಲಿಲ್ಲ ನೋಡಿ. ಪೊಲೀಸರು ಕುಟುಂಬ ಸದಸ್ಯರನ್ನ ಅನ್ಯಾಯವಾಗಿ ಅರೆಸ್ಟ್‌ ಮಾಡಿದ್ದಾರೆ ಅಂತಾ ವಿಷ ಕುಡಿದು ಪ್ರತಿಭಟಿಸಿದ್ದ ವ್ಯಕ್ತಿ ಈಗ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊಸಕುರುಗುಂದ ಗ್ರಾಮದ ಸಂಜು ನಾಯ್ಕರ್‌ ಎಂಬಾತನೇ ಮೃತ ದುರ್ದೈವಿ. ಈತನ ಅಣ್ಣನ ಹೆಂಡತಿಗೆ ಪರಪುರುಷನ ಜತೆ ಅಕ್ರಮ ಸಂಬಂಧವಿತ್ತೆನ್ನಲಾಗಿದೆ. ಆಗ ಸಂಜುನ ಅಣ್ಣ ಮತ್ತು ಕುಟುಂಬ ಸದಸ್ಯರು ಸೇರಿ ಆತನನ್ನು ಕೊಲೆ ಮಾಡಿದ್ದಾರೆನ್ನಲಾಗಿದೆ. ಈ ಆರೋಪದ ಮೇಲೆ ಬೈಲಹೊಂಗಲ ಪೊಲೀಸರು ಸಂಜುನ ಅಣ್ಣ ಮತ್ತು ಕುಟುಂಬದ ಸದಸ್ಯರನ್ನು ಬಂಧಿಸಿದ್ದರು.

ಈ ಸಂಬಂಧ ಸಂಜು ನಾಯ್ಕರ್‌ ಗುರುವಾರ ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಪೊಲೀಸರು ತನ್ನ ಕುಟುಂಬಕ್ಕೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ಮಾಡಿದ್ದ. ಈ ಸಂದರ್ಭದಲ್ಲಿ ವಿಷ ಕೂಡಾ ಕುಡಿದಿದ್ದ.

ಆಗ ಪೊಲೀಸರು ತಕ್ಷಣವೇ ಈತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇವತ್ತು ಆಸ್ಪತ್ರೆಯಲ್ಲಿ ಸಂಜು ಕೊನೆಯುಸಿರೆಳೆದಿದ್ದಾನೆ. ಸಂಜು ಮೃತನಾದ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯ ಆವರಣದಲ್ಲಿ ಕುಟುಂಬ ಸದಸ್ಯರ ಆಕ್ರಂದನ ಮುಗಿಲು ಮುಟ್ಟಿತ್ತು.

Published On - 3:13 pm, Fri, 26 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್