
ಚಿಕ್ಕಮಗಳೂರು: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಮಿತಿ ಮೀರುತ್ತಿದ್ದು, ಮಾಸ್ಕ್ ಹಾಕುವುದು ಕಡ್ಡಾಯ ಮಾಡಲಾಗಿದೆ. ಆದರೆ ಇಲ್ಲಿ ಯುವಕರಿಗೆ ಮಾಸ್ಕ್ ಹಾಕದ್ದನ್ನ ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿದ್ದಾರೆ.
ಶೃಂಗೇರಿ ತಾಲೂಕಿನ ನೆಮ್ಮಾರ್ ಬಳಿ ಉಡುಪಿ ಮೂಲದ ಯುವಕರಿಗೆ ಮಾಸ್ಕ್ ಯಾಕೆ ಹಾಕಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಕಿರಿಕ್ ಮಾಡಿಕೊಂಡಿದ್ದಾರೆ. ಪ್ರಶ್ನೆ ಮಾಡಿದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ. ಸ್ಥಳಕ್ಕೆ ಸ್ಥಳೀಯರು ಬರುತ್ತಿದ್ದಂತೆ ಯುವಕರು ಪರಾರಿಯಾಗಿದ್ದಾರೆ. ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Published On - 9:04 am, Sun, 26 July 20