AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಹೇಳನಕಾರಿ ವಿಡಿಯೋ: ಯೂಟ್ಯೂಬರ್​ಗೆ ಮಾನನಷ್ಟ ನೋಟಿಸ್ ಕಳುಹಿಸಿದ ಅಕ್ಷಯ್​ ಕುಮಾರ್​

ಮುಂಬೈ: ತಮ್ಮ ವಿರುದ್ಧ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆಂದು ಬಾಲಿವುಡ್​ ನಟ ಅಕ್ಷಯ್ ಕುಮಾರ್ ಬಿಹಾರ ಮೂಲದ ಯೂಟ್ಯೂಬರ್ ರಶೀದ್ ಸಿದ್ದೀಕಿ​ಗೆ ಮಾನನಷ್ಟದ ನೋಟಿಸ್ ಕಳುಹಿಸಿದ್ದರು. ಆದರೆ ಇದೀಗ, ಯೂಟ್ಯೂಬರ್ (ಯೂಟ್ಯೂಬ್​ನಲ್ಲಿ ವಿಡಿಯೋ ಪೋಸ್ಟ್​ ಮಾಡುವವರು) ರಶೀದ್ ಸಿದ್ದೀಕಿ ನಟ ಕಳುಹಿಸಿರುವ ನೋಟಿಸನ್ನು ತಳ್ಳಿಹಾಕಿದ್ದಾರೆ. ಜೊತೆಗೆ, ನೋಟಿಸ್​ನಲ್ಲಿ ಸೂಚಿಸಿಲಾಗಿದ್ದ 500 ಕೋಟಿ ರೂ. ನಷ್ಟದ ಮೊತ್ತವನ್ನು ಸಹ ನೀಡಲು ನಿರಾಕರಿಸಿದ್ದಾರೆ. ಇದಲ್ಲದೆ, ತಾವು ನೀಡಿರುವ ನೋಟಿಸ್ ಹಿಂಪಡೆದುಕೊಳ್ಳುವಂತೆ ಯೂಟ್ಯೂಬರ್ ರಶೀದ್ ಸಿದ್ದೀಕ್ ನಟನಿಗೆ ಒತ್ತಾಯಿಸಿದ್ದಾರೆ. ಇದನ್ನು ನಿರಾಕರಿಸಿದರೇ ಅಕ್ಷಯ್ […]

ಅವಹೇಳನಕಾರಿ ವಿಡಿಯೋ: ಯೂಟ್ಯೂಬರ್​ಗೆ ಮಾನನಷ್ಟ ನೋಟಿಸ್ ಕಳುಹಿಸಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್
KUSHAL V
|

Updated on: Nov 21, 2020 | 7:36 PM

Share

ಮುಂಬೈ: ತಮ್ಮ ವಿರುದ್ಧ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆಂದು ಬಾಲಿವುಡ್​ ನಟ ಅಕ್ಷಯ್ ಕುಮಾರ್ ಬಿಹಾರ ಮೂಲದ ಯೂಟ್ಯೂಬರ್ ರಶೀದ್ ಸಿದ್ದೀಕಿ​ಗೆ ಮಾನನಷ್ಟದ ನೋಟಿಸ್ ಕಳುಹಿಸಿದ್ದರು. ಆದರೆ ಇದೀಗ, ಯೂಟ್ಯೂಬರ್ (ಯೂಟ್ಯೂಬ್​ನಲ್ಲಿ ವಿಡಿಯೋ ಪೋಸ್ಟ್​ ಮಾಡುವವರು) ರಶೀದ್ ಸಿದ್ದೀಕಿ ನಟ ಕಳುಹಿಸಿರುವ ನೋಟಿಸನ್ನು ತಳ್ಳಿಹಾಕಿದ್ದಾರೆ.

ಜೊತೆಗೆ, ನೋಟಿಸ್​ನಲ್ಲಿ ಸೂಚಿಸಿಲಾಗಿದ್ದ 500 ಕೋಟಿ ರೂ. ನಷ್ಟದ ಮೊತ್ತವನ್ನು ಸಹ ನೀಡಲು ನಿರಾಕರಿಸಿದ್ದಾರೆ. ಇದಲ್ಲದೆ, ತಾವು ನೀಡಿರುವ ನೋಟಿಸ್ ಹಿಂಪಡೆದುಕೊಳ್ಳುವಂತೆ ಯೂಟ್ಯೂಬರ್ ರಶೀದ್ ಸಿದ್ದೀಕ್ ನಟನಿಗೆ ಒತ್ತಾಯಿಸಿದ್ದಾರೆ. ಇದನ್ನು ನಿರಾಕರಿಸಿದರೇ ಅಕ್ಷಯ್ ಕುಮಾರ್ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದೆಂದು ರಶೀದ್​ ತಿಳಿಸಿದ್ದಾರೆ.

ರಶೀದ್ ಸಿದ್ದೀಕಿ ತನ್ನ FF ನ್ಯೂಸ್ ಯೂಟ್ಯೂಬ್ ಚಾನಲ್​ನಲ್ಲಿ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನಹಾನಿಕರ ಮತ್ತು ಅವಹೇಳನಕಾರಿ ವಿಡಿಯೋಗಳನ್ನು ಪೋಸ್ಟ್​ ಮಾಡಿದ್ದಾರೆಂದು ಅಕ್ಷಯ್ ಕುಮಾರ್ ಕಾನೂನು ಸಂಸ್ಥೆ ಐ.ಸಿ. ಲೀಗಲ್ ಮೂಲಕ ನವೆಂಬರ್ 17 ರಂದು ನೋಟಿಸ್ ಕಳುಹಿಸಿದ್ದರು.

ಇದಕ್ಕೆ, ನನ್ನ ಮೇಲೆ ಮಾಡಿದ ಆರೋಪಗಳು ಸುಳ್ಳು ಮತ್ತು ದಬ್ಬಾಳಿಕೆಯಿಂದ ಕೂಡಿದೆ. ಪ್ರತಿಯೊಬ್ಬ ಭಾರತೀಯ ಪ್ರಜೆಗೂ ವಾಕ್ ಸ್ವಾತಂತ್ರ್ಯದ ಹಕ್ಕಿದೆ ಎಂದು ರಶೀದ್ ಸಿದ್ದೀಕಿ ತಮ್ಮ ವಕೀಲರ ಮೂಲಕ ಪ್ರತ್ಯುತ್ತರ ನೀಡಿದ್ದಾರೆ.ಈ ಮೊದಲು ಮಹಾರಾಷ್ಟ್ರ ಸರ್ಕಾರ ಮತ್ತು ಸಚಿವ ಆದಿತ್ಯ ಠಾಕ್ರೆ ವಿರುದ್ಧವೂ ಮಾನಹಾನಿ ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದ ರಶೀದ್ ಸಿದ್ದೀಕಿ ವಿರುದ್ಧ ಮುಂಬೈ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದರು.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ