AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅವಹೇಳನಕಾರಿ ವಿಡಿಯೋ: ಯೂಟ್ಯೂಬರ್​ಗೆ ಮಾನನಷ್ಟ ನೋಟಿಸ್ ಕಳುಹಿಸಿದ ಅಕ್ಷಯ್​ ಕುಮಾರ್​

ಮುಂಬೈ: ತಮ್ಮ ವಿರುದ್ಧ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆಂದು ಬಾಲಿವುಡ್​ ನಟ ಅಕ್ಷಯ್ ಕುಮಾರ್ ಬಿಹಾರ ಮೂಲದ ಯೂಟ್ಯೂಬರ್ ರಶೀದ್ ಸಿದ್ದೀಕಿ​ಗೆ ಮಾನನಷ್ಟದ ನೋಟಿಸ್ ಕಳುಹಿಸಿದ್ದರು. ಆದರೆ ಇದೀಗ, ಯೂಟ್ಯೂಬರ್ (ಯೂಟ್ಯೂಬ್​ನಲ್ಲಿ ವಿಡಿಯೋ ಪೋಸ್ಟ್​ ಮಾಡುವವರು) ರಶೀದ್ ಸಿದ್ದೀಕಿ ನಟ ಕಳುಹಿಸಿರುವ ನೋಟಿಸನ್ನು ತಳ್ಳಿಹಾಕಿದ್ದಾರೆ. ಜೊತೆಗೆ, ನೋಟಿಸ್​ನಲ್ಲಿ ಸೂಚಿಸಿಲಾಗಿದ್ದ 500 ಕೋಟಿ ರೂ. ನಷ್ಟದ ಮೊತ್ತವನ್ನು ಸಹ ನೀಡಲು ನಿರಾಕರಿಸಿದ್ದಾರೆ. ಇದಲ್ಲದೆ, ತಾವು ನೀಡಿರುವ ನೋಟಿಸ್ ಹಿಂಪಡೆದುಕೊಳ್ಳುವಂತೆ ಯೂಟ್ಯೂಬರ್ ರಶೀದ್ ಸಿದ್ದೀಕ್ ನಟನಿಗೆ ಒತ್ತಾಯಿಸಿದ್ದಾರೆ. ಇದನ್ನು ನಿರಾಕರಿಸಿದರೇ ಅಕ್ಷಯ್ […]

ಅವಹೇಳನಕಾರಿ ವಿಡಿಯೋ: ಯೂಟ್ಯೂಬರ್​ಗೆ ಮಾನನಷ್ಟ ನೋಟಿಸ್ ಕಳುಹಿಸಿದ ಅಕ್ಷಯ್​ ಕುಮಾರ್​
ಅಕ್ಷಯ್​ ಕುಮಾರ್
KUSHAL V
|

Updated on: Nov 21, 2020 | 7:36 PM

Share

ಮುಂಬೈ: ತಮ್ಮ ವಿರುದ್ಧ ಸುಳ್ಳು ಮತ್ತು ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆಂದು ಬಾಲಿವುಡ್​ ನಟ ಅಕ್ಷಯ್ ಕುಮಾರ್ ಬಿಹಾರ ಮೂಲದ ಯೂಟ್ಯೂಬರ್ ರಶೀದ್ ಸಿದ್ದೀಕಿ​ಗೆ ಮಾನನಷ್ಟದ ನೋಟಿಸ್ ಕಳುಹಿಸಿದ್ದರು. ಆದರೆ ಇದೀಗ, ಯೂಟ್ಯೂಬರ್ (ಯೂಟ್ಯೂಬ್​ನಲ್ಲಿ ವಿಡಿಯೋ ಪೋಸ್ಟ್​ ಮಾಡುವವರು) ರಶೀದ್ ಸಿದ್ದೀಕಿ ನಟ ಕಳುಹಿಸಿರುವ ನೋಟಿಸನ್ನು ತಳ್ಳಿಹಾಕಿದ್ದಾರೆ.

ಜೊತೆಗೆ, ನೋಟಿಸ್​ನಲ್ಲಿ ಸೂಚಿಸಿಲಾಗಿದ್ದ 500 ಕೋಟಿ ರೂ. ನಷ್ಟದ ಮೊತ್ತವನ್ನು ಸಹ ನೀಡಲು ನಿರಾಕರಿಸಿದ್ದಾರೆ. ಇದಲ್ಲದೆ, ತಾವು ನೀಡಿರುವ ನೋಟಿಸ್ ಹಿಂಪಡೆದುಕೊಳ್ಳುವಂತೆ ಯೂಟ್ಯೂಬರ್ ರಶೀದ್ ಸಿದ್ದೀಕ್ ನಟನಿಗೆ ಒತ್ತಾಯಿಸಿದ್ದಾರೆ. ಇದನ್ನು ನಿರಾಕರಿಸಿದರೇ ಅಕ್ಷಯ್ ಕುಮಾರ್ ವಿರುದ್ಧ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದೆಂದು ರಶೀದ್​ ತಿಳಿಸಿದ್ದಾರೆ.

ರಶೀದ್ ಸಿದ್ದೀಕಿ ತನ್ನ FF ನ್ಯೂಸ್ ಯೂಟ್ಯೂಬ್ ಚಾನಲ್​ನಲ್ಲಿ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನಹಾನಿಕರ ಮತ್ತು ಅವಹೇಳನಕಾರಿ ವಿಡಿಯೋಗಳನ್ನು ಪೋಸ್ಟ್​ ಮಾಡಿದ್ದಾರೆಂದು ಅಕ್ಷಯ್ ಕುಮಾರ್ ಕಾನೂನು ಸಂಸ್ಥೆ ಐ.ಸಿ. ಲೀಗಲ್ ಮೂಲಕ ನವೆಂಬರ್ 17 ರಂದು ನೋಟಿಸ್ ಕಳುಹಿಸಿದ್ದರು.

ಇದಕ್ಕೆ, ನನ್ನ ಮೇಲೆ ಮಾಡಿದ ಆರೋಪಗಳು ಸುಳ್ಳು ಮತ್ತು ದಬ್ಬಾಳಿಕೆಯಿಂದ ಕೂಡಿದೆ. ಪ್ರತಿಯೊಬ್ಬ ಭಾರತೀಯ ಪ್ರಜೆಗೂ ವಾಕ್ ಸ್ವಾತಂತ್ರ್ಯದ ಹಕ್ಕಿದೆ ಎಂದು ರಶೀದ್ ಸಿದ್ದೀಕಿ ತಮ್ಮ ವಕೀಲರ ಮೂಲಕ ಪ್ರತ್ಯುತ್ತರ ನೀಡಿದ್ದಾರೆ.ಈ ಮೊದಲು ಮಹಾರಾಷ್ಟ್ರ ಸರ್ಕಾರ ಮತ್ತು ಸಚಿವ ಆದಿತ್ಯ ಠಾಕ್ರೆ ವಿರುದ್ಧವೂ ಮಾನಹಾನಿ ವಿಡಿಯೋಗಳನ್ನು ಅಪ್ಲೋಡ್ ಮಾಡಿದ್ದ ರಶೀದ್ ಸಿದ್ದೀಕಿ ವಿರುದ್ಧ ಮುಂಬೈ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದರು.

ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು