AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chahal dhanashree meet Yash Radhika ಬೆಂಗಳೂರಲ್ಲಿ ಯಶ್​-ರಾಧಿಕಾ ದಂಪತಿಯ ಭೇಟಿ ಮಾಡಿದ ಚಹಾಲ್​-ಧನಶ್ರೀ

Yuzvendra Chahal dhanashree Verma meet KGF star Yash and wife Radhika Pandit ಬೆಂಗಳೂರಿನ ಖಾಸಗಿ ಹೋಟೆಲ್​ ಒಂದರಲ್ಲಿ ಯಶ್​ ಹಾಗೂ ರಾಧಿಕಾ ಅವರನ್ನು ಯಜುವೇಂದ್ರ ಚಹಾಲ್​ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಭೇಟಿ ಮಾಡಿದ್ದಾರೆ.

Chahal dhanashree meet Yash Radhika ಬೆಂಗಳೂರಲ್ಲಿ ಯಶ್​-ರಾಧಿಕಾ ದಂಪತಿಯ ಭೇಟಿ ಮಾಡಿದ ಚಹಾಲ್​-ಧನಶ್ರೀ
ಯಶ್​ ದಂಪತಿ ಜತೆ ಚಹಾಲ್​ ದಂಪತಿ
ರಾಜೇಶ್ ದುಗ್ಗುಮನೆ
| Edited By: ಸಾಧು ಶ್ರೀನಾಥ್​|

Updated on:Feb 08, 2021 | 5:43 PM

Share

ಕೆಜಿಎಫ್​ ಚಾಪ್ಟರ್​-2 ಟೀಸರ್​ ತೆರೆಕಂಡಾಗ ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಹಾಲ್​​ ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ಸ್ಟೇಟಸ್​  ಒಂದನ್ನು ಹಾಕಿದ್ದರು. ಅದರಲ್ಲಿ, ಕೆಜಿಎಫ್​-2ಗಾಗಿ ನಾನು ಕಾಯುತ್ತಿದ್ದೇನೆ ಎಂದು ಬರೆದುಕೊಂಡಿದ್ದರು. ಈಗ ವಿಶೇಷ ಎಂಬಂತೆ ಚಹಾಲ್​ ದಂಪತಿ ರಾಕಿಂಗ್​ ಸ್ಟಾರ್​ ದಂಪತಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ​. (Yuzvendra Chahal dhanashree Verma meet KGF star Yash and wife Radhika Pandit)

ಬೆಂಗಳೂರಿನ ಖಾಸಗಿ ಹೋಟೆಲ್​ ಒಂದರಲ್ಲಿ ಯಶ್​ ಹಾಗೂ ರಾಧಿಕಾ ಅವರನ್ನು ಯಜುವೇಂದ್ರ ಚಹಾಲ್​ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಭೇಟಿ ಮಾಡಿದ್ದಾರೆ. ಯಶ್​ ಹಾಗೂ ರಾಧಿಕಾ ಫಾರ್ಮಲ್​ ಉಡುಗೆಯಲ್ಲಿ ಮಿಂಚಿದರೆ, ಚಹಾಲ್​ ಹಾಗೂ ಧನಶ್ರೀ​ ಸಾಮಾನ್ಯ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಐಪಿಎಲ್​ನಲ್ಲಿ ಚಹಾಲ್ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ತಂಡದ ಪರವಾಗಿ ಆಡುತ್ತಿದ್ದಾರೆ. ಹೀಗಾಗಿ ಅವರು ಬೆಂಗಳೂರು ಹಾಗೂ ಕನ್ನಡ ಭಾಷೆ ಬಗ್ಗೆ ವಿಶೇಷ ಗೌರವ ಹೊಂದಿದ್ದಾರೆ. ಅಷ್ಟೇ ಅಲ್ಲ, ಕೆಜಿಎಫ್​ ಮೊದಲ ಚಾಪ್ಟರ್​ ನೋಡಿರುವ ಚಹಾಲ್​, ತುಂಬಾನೇ ಮೆಚ್ಚಿಕೊಂಡಿದ್ದಾರಂತೆ. ಚಹಾಲ್​ ಯಶ್​ ಅವರ ದೊಡ್ಡ ಅಭಿಮಾನಿ ಕೂಡ ಹೌದು. ಇದೇ ಕಾರಣಕ್ಕೆ ಯಶ್​ ಭೇಟಿ ಮಾಡಿದ್ದಾರೆ ಚಹಾಲ್.

ಕೆಜಿಎಫ್​ ಚಾಪ್ಟರ್​ 2 ರಿಲೀಸ್​ ದಿನಾಂಕ ಇತ್ತೀಚೆಗಷ್ಟೇ ಘೋಷಣೆ ಆಗಿತ್ತು. ಜುಲೈ 16ರಂದು ಸಿನಿಮಾ ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಯಶ್​ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಾಪ್ಟರ್​ 2ನಲ್ಲಿ ಬಾಲಿವುಡ್​ ನಟ ಸಂಜಯ್​ ದತ್​ ಪ್ರಮುಖ ಖಳನಾಗಿ ಕಾಣಿಸಿಕೊಳ್ಳಲಿದ್ದಾರೆ. ​ ಯಶ್​ ಜನ್ಮದಿನದ ಪ್ರಯುಕ್ತ ತೆರೆಕಂಡಿದ್ದ ಕೆಜಿಎಫ್​-2 ಟೀಸರ್​ ಸಾಕಷ್ಟು ಹೊಸ ದಾಖಲೆಗಳನ್ನು ಸೃಷ್ಟಿ ಮಾಡಿದೆ.

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ

Published On - 5:43 pm, Mon, 8 February 21

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ