AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chahal dhanashree meet Yash Radhika ಬೆಂಗಳೂರಲ್ಲಿ ಯಶ್​-ರಾಧಿಕಾ ದಂಪತಿಯ ಭೇಟಿ ಮಾಡಿದ ಚಹಾಲ್​-ಧನಶ್ರೀ

Yuzvendra Chahal dhanashree Verma meet KGF star Yash and wife Radhika Pandit ಬೆಂಗಳೂರಿನ ಖಾಸಗಿ ಹೋಟೆಲ್​ ಒಂದರಲ್ಲಿ ಯಶ್​ ಹಾಗೂ ರಾಧಿಕಾ ಅವರನ್ನು ಯಜುವೇಂದ್ರ ಚಹಾಲ್​ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಭೇಟಿ ಮಾಡಿದ್ದಾರೆ.

Chahal dhanashree meet Yash Radhika ಬೆಂಗಳೂರಲ್ಲಿ ಯಶ್​-ರಾಧಿಕಾ ದಂಪತಿಯ ಭೇಟಿ ಮಾಡಿದ ಚಹಾಲ್​-ಧನಶ್ರೀ
ಯಶ್​ ದಂಪತಿ ಜತೆ ಚಹಾಲ್​ ದಂಪತಿ
ರಾಜೇಶ್ ದುಗ್ಗುಮನೆ
| Edited By: |

Updated on:Feb 08, 2021 | 5:43 PM

Share

ಕೆಜಿಎಫ್​ ಚಾಪ್ಟರ್​-2 ಟೀಸರ್​ ತೆರೆಕಂಡಾಗ ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಹಾಲ್​​ ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ಸ್ಟೇಟಸ್​  ಒಂದನ್ನು ಹಾಕಿದ್ದರು. ಅದರಲ್ಲಿ, ಕೆಜಿಎಫ್​-2ಗಾಗಿ ನಾನು ಕಾಯುತ್ತಿದ್ದೇನೆ ಎಂದು ಬರೆದುಕೊಂಡಿದ್ದರು. ಈಗ ವಿಶೇಷ ಎಂಬಂತೆ ಚಹಾಲ್​ ದಂಪತಿ ರಾಕಿಂಗ್​ ಸ್ಟಾರ್​ ದಂಪತಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ​. (Yuzvendra Chahal dhanashree Verma meet KGF star Yash and wife Radhika Pandit)

ಬೆಂಗಳೂರಿನ ಖಾಸಗಿ ಹೋಟೆಲ್​ ಒಂದರಲ್ಲಿ ಯಶ್​ ಹಾಗೂ ರಾಧಿಕಾ ಅವರನ್ನು ಯಜುವೇಂದ್ರ ಚಹಾಲ್​ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಭೇಟಿ ಮಾಡಿದ್ದಾರೆ. ಯಶ್​ ಹಾಗೂ ರಾಧಿಕಾ ಫಾರ್ಮಲ್​ ಉಡುಗೆಯಲ್ಲಿ ಮಿಂಚಿದರೆ, ಚಹಾಲ್​ ಹಾಗೂ ಧನಶ್ರೀ​ ಸಾಮಾನ್ಯ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಐಪಿಎಲ್​ನಲ್ಲಿ ಚಹಾಲ್ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ತಂಡದ ಪರವಾಗಿ ಆಡುತ್ತಿದ್ದಾರೆ. ಹೀಗಾಗಿ ಅವರು ಬೆಂಗಳೂರು ಹಾಗೂ ಕನ್ನಡ ಭಾಷೆ ಬಗ್ಗೆ ವಿಶೇಷ ಗೌರವ ಹೊಂದಿದ್ದಾರೆ. ಅಷ್ಟೇ ಅಲ್ಲ, ಕೆಜಿಎಫ್​ ಮೊದಲ ಚಾಪ್ಟರ್​ ನೋಡಿರುವ ಚಹಾಲ್​, ತುಂಬಾನೇ ಮೆಚ್ಚಿಕೊಂಡಿದ್ದಾರಂತೆ. ಚಹಾಲ್​ ಯಶ್​ ಅವರ ದೊಡ್ಡ ಅಭಿಮಾನಿ ಕೂಡ ಹೌದು. ಇದೇ ಕಾರಣಕ್ಕೆ ಯಶ್​ ಭೇಟಿ ಮಾಡಿದ್ದಾರೆ ಚಹಾಲ್.

ಕೆಜಿಎಫ್​ ಚಾಪ್ಟರ್​ 2 ರಿಲೀಸ್​ ದಿನಾಂಕ ಇತ್ತೀಚೆಗಷ್ಟೇ ಘೋಷಣೆ ಆಗಿತ್ತು. ಜುಲೈ 16ರಂದು ಸಿನಿಮಾ ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಯಶ್​ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಾಪ್ಟರ್​ 2ನಲ್ಲಿ ಬಾಲಿವುಡ್​ ನಟ ಸಂಜಯ್​ ದತ್​ ಪ್ರಮುಖ ಖಳನಾಗಿ ಕಾಣಿಸಿಕೊಳ್ಳಲಿದ್ದಾರೆ. ​ ಯಶ್​ ಜನ್ಮದಿನದ ಪ್ರಯುಕ್ತ ತೆರೆಕಂಡಿದ್ದ ಕೆಜಿಎಫ್​-2 ಟೀಸರ್​ ಸಾಕಷ್ಟು ಹೊಸ ದಾಖಲೆಗಳನ್ನು ಸೃಷ್ಟಿ ಮಾಡಿದೆ.

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ

Published On - 5:43 pm, Mon, 8 February 21

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್