AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chahal dhanashree meet Yash Radhika ಬೆಂಗಳೂರಲ್ಲಿ ಯಶ್​-ರಾಧಿಕಾ ದಂಪತಿಯ ಭೇಟಿ ಮಾಡಿದ ಚಹಾಲ್​-ಧನಶ್ರೀ

Yuzvendra Chahal dhanashree Verma meet KGF star Yash and wife Radhika Pandit ಬೆಂಗಳೂರಿನ ಖಾಸಗಿ ಹೋಟೆಲ್​ ಒಂದರಲ್ಲಿ ಯಶ್​ ಹಾಗೂ ರಾಧಿಕಾ ಅವರನ್ನು ಯಜುವೇಂದ್ರ ಚಹಾಲ್​ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಭೇಟಿ ಮಾಡಿದ್ದಾರೆ.

Chahal dhanashree meet Yash Radhika ಬೆಂಗಳೂರಲ್ಲಿ ಯಶ್​-ರಾಧಿಕಾ ದಂಪತಿಯ ಭೇಟಿ ಮಾಡಿದ ಚಹಾಲ್​-ಧನಶ್ರೀ
ಯಶ್​ ದಂಪತಿ ಜತೆ ಚಹಾಲ್​ ದಂಪತಿ
ರಾಜೇಶ್ ದುಗ್ಗುಮನೆ
| Edited By: |

Updated on:Feb 08, 2021 | 5:43 PM

Share

ಕೆಜಿಎಫ್​ ಚಾಪ್ಟರ್​-2 ಟೀಸರ್​ ತೆರೆಕಂಡಾಗ ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಹಾಲ್​​ ಇನ್​​ಸ್ಟಾಗ್ರಾಂನಲ್ಲಿ ಈ ಬಗ್ಗೆ ಸ್ಟೇಟಸ್​  ಒಂದನ್ನು ಹಾಕಿದ್ದರು. ಅದರಲ್ಲಿ, ಕೆಜಿಎಫ್​-2ಗಾಗಿ ನಾನು ಕಾಯುತ್ತಿದ್ದೇನೆ ಎಂದು ಬರೆದುಕೊಂಡಿದ್ದರು. ಈಗ ವಿಶೇಷ ಎಂಬಂತೆ ಚಹಾಲ್​ ದಂಪತಿ ರಾಕಿಂಗ್​ ಸ್ಟಾರ್​ ದಂಪತಿಯನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಅಷ್ಟೇ ಅಲ್ಲ, ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ​. (Yuzvendra Chahal dhanashree Verma meet KGF star Yash and wife Radhika Pandit)

ಬೆಂಗಳೂರಿನ ಖಾಸಗಿ ಹೋಟೆಲ್​ ಒಂದರಲ್ಲಿ ಯಶ್​ ಹಾಗೂ ರಾಧಿಕಾ ಅವರನ್ನು ಯಜುವೇಂದ್ರ ಚಹಾಲ್​ ಹಾಗೂ ಅವರ ಪತ್ನಿ ಧನಶ್ರೀ ವರ್ಮಾ ಭೇಟಿ ಮಾಡಿದ್ದಾರೆ. ಯಶ್​ ಹಾಗೂ ರಾಧಿಕಾ ಫಾರ್ಮಲ್​ ಉಡುಗೆಯಲ್ಲಿ ಮಿಂಚಿದರೆ, ಚಹಾಲ್​ ಹಾಗೂ ಧನಶ್ರೀ​ ಸಾಮಾನ್ಯ ಉಡುಗೆಯಲ್ಲಿ ಕಾಣಿಸಿಕೊಂಡಿದ್ದಾರೆ.

ಐಪಿಎಲ್​ನಲ್ಲಿ ಚಹಾಲ್ ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ತಂಡದ ಪರವಾಗಿ ಆಡುತ್ತಿದ್ದಾರೆ. ಹೀಗಾಗಿ ಅವರು ಬೆಂಗಳೂರು ಹಾಗೂ ಕನ್ನಡ ಭಾಷೆ ಬಗ್ಗೆ ವಿಶೇಷ ಗೌರವ ಹೊಂದಿದ್ದಾರೆ. ಅಷ್ಟೇ ಅಲ್ಲ, ಕೆಜಿಎಫ್​ ಮೊದಲ ಚಾಪ್ಟರ್​ ನೋಡಿರುವ ಚಹಾಲ್​, ತುಂಬಾನೇ ಮೆಚ್ಚಿಕೊಂಡಿದ್ದಾರಂತೆ. ಚಹಾಲ್​ ಯಶ್​ ಅವರ ದೊಡ್ಡ ಅಭಿಮಾನಿ ಕೂಡ ಹೌದು. ಇದೇ ಕಾರಣಕ್ಕೆ ಯಶ್​ ಭೇಟಿ ಮಾಡಿದ್ದಾರೆ ಚಹಾಲ್.

ಕೆಜಿಎಫ್​ ಚಾಪ್ಟರ್​ 2 ರಿಲೀಸ್​ ದಿನಾಂಕ ಇತ್ತೀಚೆಗಷ್ಟೇ ಘೋಷಣೆ ಆಗಿತ್ತು. ಜುಲೈ 16ರಂದು ಸಿನಿಮಾ ವಿಶ್ವಾದ್ಯಂತ ತೆರೆಗೆ ಬರುತ್ತಿದೆ. ಯಶ್​ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡರೆ, ಶ್ರೀನಿಧಿ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚಾಪ್ಟರ್​ 2ನಲ್ಲಿ ಬಾಲಿವುಡ್​ ನಟ ಸಂಜಯ್​ ದತ್​ ಪ್ರಮುಖ ಖಳನಾಗಿ ಕಾಣಿಸಿಕೊಳ್ಳಲಿದ್ದಾರೆ. ​ ಯಶ್​ ಜನ್ಮದಿನದ ಪ್ರಯುಕ್ತ ತೆರೆಕಂಡಿದ್ದ ಕೆಜಿಎಫ್​-2 ಟೀಸರ್​ ಸಾಕಷ್ಟು ಹೊಸ ದಾಖಲೆಗಳನ್ನು ಸೃಷ್ಟಿ ಮಾಡಿದೆ.

ಜುಲೈ 16 ಅನ್ನು ನ್ಯಾಷನಲ್ ಹಾಲಿಡೇ ಆಗಿ ಘೋಷಿಸಿ -ಪ್ರಧಾನಿ ಮೋದಿಗೆ ಯಶ್ ಅಭಿಮಾನಿಗಳ​ ಮನವಿ

Published On - 5:43 pm, Mon, 8 February 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ