AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟ ಕೊಡ್ರಪ್ಪಾ, ಹೊಡೀಬೇಡಿ: ಜೊಮ್ಯಾಟೋಗೆ ಪಾಠ ಹೇಳಿದ ನೆಟ್ಟಿಗರು

ಜೊಮ್ಯಾಟೊ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ವೀಟ್​ಗಳು ಕೂಡ ಹರಿದಾಡಿವೆ.

ಊಟ ಕೊಡ್ರಪ್ಪಾ, ಹೊಡೀಬೇಡಿ: ಜೊಮ್ಯಾಟೋಗೆ ಪಾಠ ಹೇಳಿದ ನೆಟ್ಟಿಗರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Mar 10, 2021 | 8:36 PM

Share

ಘಟನೆ ಎಷ್ಟೇ ಗಂಭೀರವಾಗಿರಲಿ ಅಥವಾ ಎಷ್ಟೇ ಹಾಸ್ಯಾಸ್ಪದವಾಗಿರಲಿ. ಸಾಮಾಜಿಕ ಜಾಲತಾಣದಲ್ಲಿ ಮೀಮ್​ಗಳಂತೂ ಹರಿದಾಡೇ ಹರಿದಾಡುತ್ತವೆ. ಬೆಂಗಳೂರಿನಲ್ಲಿ ನಡೆದ ಜೊಮ್ಯಾಟೊ ವಿವಾದ ಕೂಡ ಅಷ್ಟೇ. ಡೆಲಿವರಿ ಬಾಯ್​ ಹೊಡೆದ ರಭಸಕ್ಕೆ ಹುಡುಗಿಯ ಮೂಗಲ್ಲಿ ರಕ್ತ ಸೋರುತ್ತಿತ್ತು. ಈ ಬಗ್ಗೆ ಕೆಲವರು ವಿಷಾದ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ ಮಾಡಿದ್ದಾರೆ. ಇನ್ನೂ ಕೆಲವರು ಊಟ ಕೊಡ್ರಪ್ಪಾ, ಹೊಡೀಬೇಡಿ ಎಂದು ಜೊಮ್ಯಾಟೊಗೆ ಪಾಠ ಮಾಡಿದ್ದಾರೆ.

ಬೆಂಗಳೂರಿನ ಹಿತೇಶಾ ಚಂದ್ರಾಣಿ ಎಂಬ ಯುವತಿ ಒಂಟಿಯಾಗಿ ಮನೆಯಲ್ಲಿ ನೆಲೆಸಿದ್ದು, ಹಸಿವಾದಾಗ ಮಧ್ಯಾಹ್ನ 3.30ರ ಸುಮಾರಿಗೆ ಜೊಮ್ಯಾಟೋ ಆ್ಯಪ್​ ಮೂಲಕ ಊಟ ತರಿಸಿಕೊಳ್ಳಲು ಬುಕ್​ ಮಾಡಿದ್ದರು. ಆ್ಯಪ್​ನಲ್ಲಿ ತೋರಿಸಿದ ಸಮಯದ ಪ್ರಕಾರ ಊಟ ಮಧ್ಯಾಹ್ನ 4:30ಕ್ಕೆ ಬರಬೇಕಿತ್ತು. ಆದರೆ, ಊಟ ಬರೋದು ವಿಳಂಬವಾಗಿತ್ತು. ಈ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ನಂತರ ಡೆಲಿವರಿ ಬಾಯ್​ ಮುಷ್ಠಿಯಿಂದ ಯುವತಿಯ ಮುಖಕ್ಕೆ ಬಲವಾಗಿ ಗುದ್ದಿ ಓಡಿ ಹೋಗಿದ್ದಾನೆ. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಈಗ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಟ್ವೀಟ್​ಗಳು ಹರಿದಾಡಿವೆ.

ಈ ಬಗ್ಗೆ ರಾಜು ಎನ್ನುವ ವ್ಯಕ್ತಿ ಟ್ವೀಟ್​ ಒಂದನ್ನು ಮಾಡಿದ್ದಾರೆ. ಜೊಮ್ಯಾಟೊದವರು ಮೊದಲು ನಿಮ್ಮ ಡೆಲಿವರಿ ಬಾಯ್​ಗಳಿಗೆ ಮಹಿಳೆಯರಿಗೆ ಗೌರವ ನೀಡುವುದನ್ನು ಕಲಿಸಿ. ಆಹಾರ ನೀಡಿ, ಹೊಡೆತವನ್ನಲ್ಲ ಎಂದು ಬರೆದುಕೊಂಡಿದ್ದಾರೆ. ಇನ್ನೂ ಒಂದಿಷ್ಟು ಜನರು ತಮಗೆ ತೋಚಿದಂತೆ ಈ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಮಹಿಳೆ ಮೇಲೆ ಹಲ್ಲೆಗೈದಿದ್ದ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಕಾಮರಾಜು ಅರೆಸ್ಟ್​

ನಿಗದಿತ ಸಮಯಕ್ಕೆ ಬಾರದ ಊಟ; ಪ್ರಶ್ನಿಸಿದ್ದಕ್ಕೆ ಯುವತಿಯ ಮೂಗು ಮುರಿದ ಜೊಮ್ಯಾಟೋ ಡೆಲಿವರಿ ಬಾಯ್​

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ