AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟ ಕೊಡ್ರಪ್ಪಾ, ಹೊಡೀಬೇಡಿ: ಜೊಮ್ಯಾಟೋಗೆ ಪಾಠ ಹೇಳಿದ ನೆಟ್ಟಿಗರು

ಜೊಮ್ಯಾಟೊ ವಿವಾದ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಟ್ವೀಟ್​ಗಳು ಕೂಡ ಹರಿದಾಡಿವೆ.

ಊಟ ಕೊಡ್ರಪ್ಪಾ, ಹೊಡೀಬೇಡಿ: ಜೊಮ್ಯಾಟೋಗೆ ಪಾಠ ಹೇಳಿದ ನೆಟ್ಟಿಗರು
ಸಾಂದರ್ಭಿಕ ಚಿತ್ರ
ರಾಜೇಶ್ ದುಗ್ಗುಮನೆ
| Edited By: |

Updated on: Mar 10, 2021 | 8:36 PM

Share

ಘಟನೆ ಎಷ್ಟೇ ಗಂಭೀರವಾಗಿರಲಿ ಅಥವಾ ಎಷ್ಟೇ ಹಾಸ್ಯಾಸ್ಪದವಾಗಿರಲಿ. ಸಾಮಾಜಿಕ ಜಾಲತಾಣದಲ್ಲಿ ಮೀಮ್​ಗಳಂತೂ ಹರಿದಾಡೇ ಹರಿದಾಡುತ್ತವೆ. ಬೆಂಗಳೂರಿನಲ್ಲಿ ನಡೆದ ಜೊಮ್ಯಾಟೊ ವಿವಾದ ಕೂಡ ಅಷ್ಟೇ. ಡೆಲಿವರಿ ಬಾಯ್​ ಹೊಡೆದ ರಭಸಕ್ಕೆ ಹುಡುಗಿಯ ಮೂಗಲ್ಲಿ ರಕ್ತ ಸೋರುತ್ತಿತ್ತು. ಈ ಬಗ್ಗೆ ಕೆಲವರು ವಿಷಾದ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ ಮಾಡಿದ್ದಾರೆ. ಇನ್ನೂ ಕೆಲವರು ಊಟ ಕೊಡ್ರಪ್ಪಾ, ಹೊಡೀಬೇಡಿ ಎಂದು ಜೊಮ್ಯಾಟೊಗೆ ಪಾಠ ಮಾಡಿದ್ದಾರೆ.

ಬೆಂಗಳೂರಿನ ಹಿತೇಶಾ ಚಂದ್ರಾಣಿ ಎಂಬ ಯುವತಿ ಒಂಟಿಯಾಗಿ ಮನೆಯಲ್ಲಿ ನೆಲೆಸಿದ್ದು, ಹಸಿವಾದಾಗ ಮಧ್ಯಾಹ್ನ 3.30ರ ಸುಮಾರಿಗೆ ಜೊಮ್ಯಾಟೋ ಆ್ಯಪ್​ ಮೂಲಕ ಊಟ ತರಿಸಿಕೊಳ್ಳಲು ಬುಕ್​ ಮಾಡಿದ್ದರು. ಆ್ಯಪ್​ನಲ್ಲಿ ತೋರಿಸಿದ ಸಮಯದ ಪ್ರಕಾರ ಊಟ ಮಧ್ಯಾಹ್ನ 4:30ಕ್ಕೆ ಬರಬೇಕಿತ್ತು. ಆದರೆ, ಊಟ ಬರೋದು ವಿಳಂಬವಾಗಿತ್ತು. ಈ ವಿಚಾರಕ್ಕೆ ಇಬ್ಬರ ನಡುವೆ ಜಗಳ ನಡೆದಿದೆ. ನಂತರ ಡೆಲಿವರಿ ಬಾಯ್​ ಮುಷ್ಠಿಯಿಂದ ಯುವತಿಯ ಮುಖಕ್ಕೆ ಬಲವಾಗಿ ಗುದ್ದಿ ಓಡಿ ಹೋಗಿದ್ದಾನೆ. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಈಗ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಸಾಕಷ್ಟು ಟ್ವೀಟ್​ಗಳು ಹರಿದಾಡಿವೆ.

ಈ ಬಗ್ಗೆ ರಾಜು ಎನ್ನುವ ವ್ಯಕ್ತಿ ಟ್ವೀಟ್​ ಒಂದನ್ನು ಮಾಡಿದ್ದಾರೆ. ಜೊಮ್ಯಾಟೊದವರು ಮೊದಲು ನಿಮ್ಮ ಡೆಲಿವರಿ ಬಾಯ್​ಗಳಿಗೆ ಮಹಿಳೆಯರಿಗೆ ಗೌರವ ನೀಡುವುದನ್ನು ಕಲಿಸಿ. ಆಹಾರ ನೀಡಿ, ಹೊಡೆತವನ್ನಲ್ಲ ಎಂದು ಬರೆದುಕೊಂಡಿದ್ದಾರೆ. ಇನ್ನೂ ಒಂದಿಷ್ಟು ಜನರು ತಮಗೆ ತೋಚಿದಂತೆ ಈ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಮಹಿಳೆ ಮೇಲೆ ಹಲ್ಲೆಗೈದಿದ್ದ ಜೊಮ್ಯಾಟೊ ಫುಡ್ ಡೆಲಿವರಿ ಬಾಯ್ ಕಾಮರಾಜು ಅರೆಸ್ಟ್​

ನಿಗದಿತ ಸಮಯಕ್ಕೆ ಬಾರದ ಊಟ; ಪ್ರಶ್ನಿಸಿದ್ದಕ್ಕೆ ಯುವತಿಯ ಮೂಗು ಮುರಿದ ಜೊಮ್ಯಾಟೋ ಡೆಲಿವರಿ ಬಾಯ್​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ