AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕುಡಿಯುವಾಗ ಈ ತಪ್ಪು ಮಾಡಲೇಬೇಡಿ? ಈ ಬಗ್ಗೆ ಇಲ್ಲಿದೆ ಮಾಹಿತಿ

ನೀರು ಕುಡಿಯುವಾಗ ನಾವು ಸಾಮಾನ್ಯವಾಗಿ ಮಾಡುವ ಕೆಲವು ತಪ್ಪುಗಳನ್ನು ತಪ್ಪಿಸುವುದು ಬಹಳ ಅವಶ್ಯಕ. ಈ ಬಗ್ಗೆ ಅನೇಕ ಅಧ್ಯಯನಗಳು ತಿಳಿಸಿದ್ದರೂ ಕೂಡ ನಾವು ಅದನ್ನು ತಿಳಿದೋ ತಿಳಿಯದೆಯೋ ನಿರ್ಲಕ್ಷಿಸಿದ್ದೇವೆ. ಹಾಗಾಗಿ ಈ ಬಗ್ಗೆ ಜಾಗ್ರತೆ ಮಾಡಲು ಇಲ್ಲಿ ಮಾಹಿತಿ ನೀಡಲಾಗಿದೆ.

ನೀರು ಕುಡಿಯುವಾಗ ಈ ತಪ್ಪು ಮಾಡಲೇಬೇಡಿ? ಈ ಬಗ್ಗೆ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 10, 2023 | 2:59 PM

Share

ಪ್ರತಿಯೊಬ್ಬ ಮನುಷ್ಯನಿಗೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ನೀರು ಪ್ರಮುಖ ಪಾತ್ರ ವಹಿಸುತ್ತದೆ. ಇದು ದೇಹವನ್ನು ನೀರಿನಾಂಶ ಆಗಿರಿಸುವುದಲ್ಲದೆ ಪೋಷಕಾಂಶಗಳನ್ನು ಸುಲಭವಾಗಿ ಹೀರಿಕೊಳ್ಳಲು, ಆಹಾರವನ್ನು ವಿಭಜಿಸಲು ಸಹಾಯ ಮಾಡುತ್ತದೆ. ಅಲ್ಲದೆ ದೇಹದ ತಾಪಮಾನವನ್ನು ಕಾಪಾಡಿಕೊಳ್ಳಲು ಮತ್ತು ದೇಹದಿಂದ ವಿಷವನ್ನು ಹೊರಹಾಕಲು ನೀರು ಸಹಾಯ ಮಾಡುತ್ತದೆ. ನೀರು ನಿಮ್ಮ ದೇಹಕ್ಕೆ ಒಳ್ಳೆ ರೀತಿಯಲ್ಲಿ ಸಹಾಯ ಮಾಡಲು, ನೀರು ಕುಡಿಯುವಾಗ ನಾವು ಸಾಮಾನ್ಯವಾಗಿ ಮಾಡುವ ಕೆಲವು ತಪ್ಪುಗಳನ್ನು ತಪ್ಪಿಸುವುದು ಬಹಳ ಅವಶ್ಯಕ.

ನೀರು ಕುಡಿಯುವಾಗ ತಪ್ಪಿಸಬೇಕಾದ ತಪ್ಪುಗಳು

ಆಯುರ್ವೇದವು ಉತ್ತಮ ಆರೋಗ್ಯಕ್ಕಾಗಿ ಕುಡಿಯುವ ನೀರಿನ ಕೆಲವು ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಸೂಚಿಸುತ್ತದೆ. ಅವುಗಳಲ್ಲಿ ಕೆಲವು ಹೀಗಿವೆ:

ನೀರನ್ನು ವೇಗವಾಗಿ ಕುಡಿಯಬೇಡಿ

ತುಂಬಾ ವೇಗವಾಗಿ ನೀರು ಕುಡಿಯುವುದರಿಂದ ದೇಹಕ್ಕೆ ಕೆಲವು ಸಣ್ಣ ಆಘಾತಗಳಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಪರಿಣಾಮವಾಗಿ, ಹೊಟ್ಟೆಯ ನರಗಳಿಗೆ ಇದು ಪೆಟ್ಟು ಇದರಿಂದ ಅಜೀರ್ಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನೀರನ್ನು ಸ್ವಲ್ಪ ಸ್ವಲ್ಪವೇ ಕುಡಿಯಬೇಕು.

ಊಟದ ನಂತರ ನೀರು ಕುಡಿಯಬೇಕು

ಆಯುರ್ವೇದದ ಪ್ರಕಾರ, ಊಟಕ್ಕೆ ಸ್ವಲ್ಪ ಮೊದಲು ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಕಡಿಮೆಯಾಗುತ್ತದೆ ಮತ್ತು ಊಟದ ನಂತರ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಹೆಚ್ಚಾಗುತ್ತದೆ. ಹಾಗಾಗಿ ಊಟ ಮಾಡುವುದಕ್ಕಿಂತ ಮೊದಲು ನೀರು ಕುಡಿಯುವುದನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ಬೊಜ್ಜು ಹೆಚ್ಚಾಗುತ್ತದೆ. ನೀರು ಮತ್ತು ಊಟದ ನಡುವೆ ಕನಿಷ್ಠ 45 ನಿಮಿಷಗಳ ಅಂತರವನ್ನು ನೀಡುವುದು ಹೆಚ್ಚು ಪ್ರಯೋಜನಕಾರಿ.

ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುವುದನ್ನು ತಪ್ಪಿಸಿ

ಪ್ಲಾಸ್ಟಿಕ್ ಬಾಟಲಿಗಳಲ್ಲಿ ದೀರ್ಘಕಾಲದವರೆಗೆ ನೀರನ್ನು ಇಟ್ಟು ಕುಡಿಯುವುದರಿಂದ ಕ್ಯಾನ್ಸರ್ ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಆದಷ್ಟು ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವುದನ್ನು ಕಡಿಮೆ ಮಾಡಿ. ಸ್ಟಿಲ್ ಅಥವಾ ತಾಮ್ರದ ಬಾಟಲಿಗಳು ಉತ್ತಮ.

ಇದನ್ನೂ ಓದಿ: ಬೇಸಿಗೆಯಲ್ಲಿ ನೀರು ಕಡಿಮೆ ಕುಡಿದರೆ ಪಾರ್ಶ್ವವಾಯು ಅಪಾಯ ಹೆಚ್ಚು

ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ

ಪ್ರತಿದಿನ ಎರಡರಿಂದ ಮೂರು ಲೀಟರ್ ನೀರು ಕುಡಿಯಿರಿ. ಕೆಲವರು ಎಂಟರಿಂದ ಹತ್ತು ಲೋಟಗಳನ್ನು ಸಹ ಶಿಫಾರಸು ಮಾಡುತ್ತಾರೆ. ಇವು ಸಾಮಾನ್ಯ ಮಿಥ್ಯೆಗಳು. ಬಾಯಾರಿಕೆಯಾಗದಿದ್ದಾಗ ಮಾತ್ರ ನೀರು ಕುಡಿಯುವುದು ಒಳ್ಳೆಯದು.

ತಂಪಾದ ನೀರನ್ನು ಕುಡಿಯುವುದನ್ನು ತಪ್ಪಿಸಿ

ನಮ್ಮಲ್ಲಿ ಅನೇಕರು ದೀರ್ಘ ದಿನದ ಕೆಲಸದ ಬಳಿಕ ತಣ್ಣೀರಿನ ಬಾಟಲಿಗಳಿಗೆ ಫ್ರಿಡ್ಜ್ ತೆಗೆದು ನೀರು ಕುಡಿಯುತ್ತಾರೆ. ಆದರೆ ಅದು ಉಂಟು ಮಾಡಬಹುದಾದ ಹಾನಿಯ ಬಗ್ಗೆ ಹೆಚ್ಚು ತಿಳಿದುಕೊಂಡಿಲ್ಲ. ಆಯುರ್ವೇದದ ಪ್ರಕಾರ, ತಂಪಾದ ನೀರು ಆಹಾರದ ಜೀರ್ಣ ಕ್ರಿಯೆಗೆ ಸಾಕಷ್ಟು ತೊಂದರೆ ನೀಡುತ್ತದೆ. ಇದಲ್ಲದೆ, ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?