AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರು ಕುಡಿಯುವಾಗ ಈ ತಪ್ಪು ಮಾಡಲೇಬೇಡಿ? ಈ ಬಗ್ಗೆ ಇಲ್ಲಿದೆ ಮಾಹಿತಿ

ನೀರು ಕುಡಿಯುವಾಗ ನಾವು ಸಾಮಾನ್ಯವಾಗಿ ಮಾಡುವ ಕೆಲವು ತಪ್ಪುಗಳನ್ನು ತಪ್ಪಿಸುವುದು ಬಹಳ ಅವಶ್ಯಕ. ಈ ಬಗ್ಗೆ ಅನೇಕ ಅಧ್ಯಯನಗಳು ತಿಳಿಸಿದ್ದರೂ ಕೂಡ ನಾವು ಅದನ್ನು ತಿಳಿದೋ ತಿಳಿಯದೆಯೋ ನಿರ್ಲಕ್ಷಿಸಿದ್ದೇವೆ. ಹಾಗಾಗಿ ಈ ಬಗ್ಗೆ ಜಾಗ್ರತೆ ಮಾಡಲು ಇಲ್ಲಿ ಮಾಹಿತಿ ನೀಡಲಾಗಿದೆ.

ನೀರು ಕುಡಿಯುವಾಗ ಈ ತಪ್ಪು ಮಾಡಲೇಬೇಡಿ? ಈ ಬಗ್ಗೆ ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Apr 10, 2023 | 2:59 PM

Share

ಪ್ರತಿಯೊಬ್ಬ ಮನುಷ್ಯನಿಗೆ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ನೀರು ಪ್ರಮುಖ ಪಾತ್ರ ವಹಿಸುತ್ತದೆ. ಇದು ದೇಹವನ್ನು ನೀರಿನಾಂಶ ಆಗಿರಿಸುವುದಲ್ಲದೆ ಪೋಷಕಾಂಶಗಳನ್ನು ಸುಲಭವಾಗಿ ಹೀರಿಕೊಳ್ಳಲು, ಆಹಾರವನ್ನು ವಿಭಜಿಸಲು ಸಹಾಯ ಮಾಡುತ್ತದೆ. ಅಲ್ಲದೆ ದೇಹದ ತಾಪಮಾನವನ್ನು ಕಾಪಾಡಿಕೊಳ್ಳಲು ಮತ್ತು ದೇಹದಿಂದ ವಿಷವನ್ನು ಹೊರಹಾಕಲು ನೀರು ಸಹಾಯ ಮಾಡುತ್ತದೆ. ನೀರು ನಿಮ್ಮ ದೇಹಕ್ಕೆ ಒಳ್ಳೆ ರೀತಿಯಲ್ಲಿ ಸಹಾಯ ಮಾಡಲು, ನೀರು ಕುಡಿಯುವಾಗ ನಾವು ಸಾಮಾನ್ಯವಾಗಿ ಮಾಡುವ ಕೆಲವು ತಪ್ಪುಗಳನ್ನು ತಪ್ಪಿಸುವುದು ಬಹಳ ಅವಶ್ಯಕ.

ನೀರು ಕುಡಿಯುವಾಗ ತಪ್ಪಿಸಬೇಕಾದ ತಪ್ಪುಗಳು

ಆಯುರ್ವೇದವು ಉತ್ತಮ ಆರೋಗ್ಯಕ್ಕಾಗಿ ಕುಡಿಯುವ ನೀರಿನ ಕೆಲವು ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಸೂಚಿಸುತ್ತದೆ. ಅವುಗಳಲ್ಲಿ ಕೆಲವು ಹೀಗಿವೆ:

ನೀರನ್ನು ವೇಗವಾಗಿ ಕುಡಿಯಬೇಡಿ

ತುಂಬಾ ವೇಗವಾಗಿ ನೀರು ಕುಡಿಯುವುದರಿಂದ ದೇಹಕ್ಕೆ ಕೆಲವು ಸಣ್ಣ ಆಘಾತಗಳಿಗೆ ದಾರಿ ಮಾಡಿಕೊಟ್ಟಂತಾಗುತ್ತದೆ. ಪರಿಣಾಮವಾಗಿ, ಹೊಟ್ಟೆಯ ನರಗಳಿಗೆ ಇದು ಪೆಟ್ಟು ಇದರಿಂದ ಅಜೀರ್ಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನೀರನ್ನು ಸ್ವಲ್ಪ ಸ್ವಲ್ಪವೇ ಕುಡಿಯಬೇಕು.

ಊಟದ ನಂತರ ನೀರು ಕುಡಿಯಬೇಕು

ಆಯುರ್ವೇದದ ಪ್ರಕಾರ, ಊಟಕ್ಕೆ ಸ್ವಲ್ಪ ಮೊದಲು ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಕಡಿಮೆಯಾಗುತ್ತದೆ ಮತ್ತು ಊಟದ ನಂತರ ನೀರು ಕುಡಿಯುವುದರಿಂದ ಜೀರ್ಣಕ್ರಿಯೆ ಹೆಚ್ಚಾಗುತ್ತದೆ. ಹಾಗಾಗಿ ಊಟ ಮಾಡುವುದಕ್ಕಿಂತ ಮೊದಲು ನೀರು ಕುಡಿಯುವುದನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ಬೊಜ್ಜು ಹೆಚ್ಚಾಗುತ್ತದೆ. ನೀರು ಮತ್ತು ಊಟದ ನಡುವೆ ಕನಿಷ್ಠ 45 ನಿಮಿಷಗಳ ಅಂತರವನ್ನು ನೀಡುವುದು ಹೆಚ್ಚು ಪ್ರಯೋಜನಕಾರಿ.

ಪ್ಲಾಸ್ಟಿಕ್ ಬಾಟಲಿಯಿಂದ ನೀರು ಕುಡಿಯುವುದನ್ನು ತಪ್ಪಿಸಿ

ಪ್ಲಾಸ್ಟಿಕ್ ಬಾಟಲಿಗಳಲ್ಲಿ ದೀರ್ಘಕಾಲದವರೆಗೆ ನೀರನ್ನು ಇಟ್ಟು ಕುಡಿಯುವುದರಿಂದ ಕ್ಯಾನ್ಸರ್ ನಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಆದಷ್ಟು ಪ್ಲಾಸ್ಟಿಕ್ ಬಾಟಲಿಗಳನ್ನು ಬಳಸುವುದನ್ನು ಕಡಿಮೆ ಮಾಡಿ. ಸ್ಟಿಲ್ ಅಥವಾ ತಾಮ್ರದ ಬಾಟಲಿಗಳು ಉತ್ತಮ.

ಇದನ್ನೂ ಓದಿ: ಬೇಸಿಗೆಯಲ್ಲಿ ನೀರು ಕಡಿಮೆ ಕುಡಿದರೆ ಪಾರ್ಶ್ವವಾಯು ಅಪಾಯ ಹೆಚ್ಚು

ಬಾಯಾರಿಕೆಯಾದಾಗ ಮಾತ್ರ ನೀರು ಕುಡಿಯಿರಿ

ಪ್ರತಿದಿನ ಎರಡರಿಂದ ಮೂರು ಲೀಟರ್ ನೀರು ಕುಡಿಯಿರಿ. ಕೆಲವರು ಎಂಟರಿಂದ ಹತ್ತು ಲೋಟಗಳನ್ನು ಸಹ ಶಿಫಾರಸು ಮಾಡುತ್ತಾರೆ. ಇವು ಸಾಮಾನ್ಯ ಮಿಥ್ಯೆಗಳು. ಬಾಯಾರಿಕೆಯಾಗದಿದ್ದಾಗ ಮಾತ್ರ ನೀರು ಕುಡಿಯುವುದು ಒಳ್ಳೆಯದು.

ತಂಪಾದ ನೀರನ್ನು ಕುಡಿಯುವುದನ್ನು ತಪ್ಪಿಸಿ

ನಮ್ಮಲ್ಲಿ ಅನೇಕರು ದೀರ್ಘ ದಿನದ ಕೆಲಸದ ಬಳಿಕ ತಣ್ಣೀರಿನ ಬಾಟಲಿಗಳಿಗೆ ಫ್ರಿಡ್ಜ್ ತೆಗೆದು ನೀರು ಕುಡಿಯುತ್ತಾರೆ. ಆದರೆ ಅದು ಉಂಟು ಮಾಡಬಹುದಾದ ಹಾನಿಯ ಬಗ್ಗೆ ಹೆಚ್ಚು ತಿಳಿದುಕೊಂಡಿಲ್ಲ. ಆಯುರ್ವೇದದ ಪ್ರಕಾರ, ತಂಪಾದ ನೀರು ಆಹಾರದ ಜೀರ್ಣ ಕ್ರಿಯೆಗೆ ಸಾಕಷ್ಟು ತೊಂದರೆ ನೀಡುತ್ತದೆ. ಇದಲ್ಲದೆ, ರಕ್ತನಾಳಗಳನ್ನು ಸಂಕುಚಿತಗೊಳಿಸುತ್ತದೆ.

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು