AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hair Care: ನೀವು ನಿಮ್ಮ ಕೂದಲನ್ನು ಇಷ್ಟ ಪಡ್ತೀರ ಅಲ್ವಾ ಹಾಗಾದರೆ ಈ ತಪ್ಪು ಮಾಡಬೇಡಿ

ನಾವು ಮಾಡುವ ಕೆಲವು ಸಣ್ಣ ತಪ್ಪುಗಳು ಕೂದಲು ಉದುರುವಿಕೆ ಅಥವಾ ತೆಳ್ಳಗಾಗುವಿಕೆಗೆ ಕಾರಣವಾಗುತ್ತದೆ. ನಾವು ತಿಳಿಯದೇ ಮಾಡುವ ಕೆಲವು ಕೆಲಸಗಳು ಕೂಡ ನಮ್ಮ ಕೂದಲಿಗೆ ಹಾನಿಯನ್ನುಂಟುಮಾಡುತ್ತವೆ.

Hair Care: ನೀವು ನಿಮ್ಮ ಕೂದಲನ್ನು ಇಷ್ಟ ಪಡ್ತೀರ ಅಲ್ವಾ ಹಾಗಾದರೆ ಈ ತಪ್ಪು ಮಾಡಬೇಡಿ
Haircare
Follow us
TV9 Web
| Updated By: ನಯನಾ ರಾಜೀವ್

Updated on: Aug 05, 2022 | 12:50 PM

ನಾವು ಮಾಡುವ ಕೆಲವು ಸಣ್ಣ ತಪ್ಪುಗಳು ಕೂದಲು ಉದುರುವಿಕೆ ಅಥವಾ ತೆಳ್ಳಗಾಗುವಿಕೆಗೆ ಕಾರಣವಾಗುತ್ತದೆ. ನಾವು ತಿಳಿಯದೇ ಮಾಡುವ ಕೆಲವು ಕೆಲಸಗಳು ಕೂಡ ನಮ್ಮ ಕೂದಲಿಗೆ ಹಾನಿಯನ್ನುಂಟುಮಾಡುತ್ತವೆ.

ಕೂದಲನ್ನು ಹೆಚ್ಚು ತೊಳೆಯಬೇಡಿ: ಆಗಾಗ ಶಾಂಪೂ ಬಳಸಿ ನಿಮ್ಮ ಕೂದಲನ್ನು ಸ್ವಚ್ಛಗೊಳಿಸುವುದು ನಿಮ್ಮ ಕೂದಲಿಗೆ ಶಾಶ್ವತವಾಗಿ ಹಾನಿ ಮಾಡುತ್ತದೆ. ರಾಸಾಯನಿಕಗಳು ನೈಸರ್ಗಿಕ ತೈಲವನ್ನು ತಲೆಯಿಂದ ಹೋಗುವಂತೆ ಮಾಡಿ, ಕೂದಲಿನ ಬೇರುಗಳು ದುರ್ಬಲವಾಗುವಂತೆ ಮಾಡುತ್ತದೆ. ಅಲ್ಲದೆ, ಬಹಳಷ್ಟು ಶಾಂಪೂ ಮಾಡುವುದು ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ತಜ್ಞರ ಪ್ರಕಾರ, ನೀವು ವಾಸಿಸುವ ಸ್ಥಳವನ್ನು ಅವಲಂಬಿಸಿ, ವಾರಕ್ಕೆ ಎರಡು ಬಾರಿ ಮಾತ್ರ ತಲೆಸ್ನಾನ ಮಾಡಿ ಎಂದು ಸಲಹೆ ನೀಡಿದ್ದಾರೆ.

ನೆತ್ತಿಯ ಮೇಲೆ ಕಂಡೀಷನರ್ ಹಾಕಬೇಡಿ: ಶಾಂಪೂ ಮಾಡಿದ ನಂತರ ನಿಮ್ಮ ಕೂದಲನ್ನು ಕಂಡೀಷನರ್ ಮಾಡುವುದು ಬಹಳ ಮುಖ್ಯ ಆದರೆ ಅದನ್ನು ಸರಿಯಾಗಿ ಎಲ್ಲಿ ಹಾಕಬೇಕೆಂದು ನೀವು ತಿಳಿದಿರಬೇಕು. ಕಂಡೀಷನರ್ ಅನ್ನು ಯಾವಾಗಲೂ ಕೂದಲಿಗೆ ಅನ್ವಯಿಸಬೇಕು, ಆರೋಗ್ಯಕರ ಮತ್ತು ಹೊಳೆಯುವ ಕೂದಲನ್ನು ಪಡೆಯಬಹುದು. ಆದರೆ ನೆತ್ತಿ ಭಾಗಕ್ಕೆ ಹಚ್ಚುವುದು ಬೇಡ.

ಕೂದಲನ್ನು ಹೆಚ್ಚು ಹೊತ್ತು ಕಟ್ಟಬೇಡಿ: ಕೂದಲನ್ನು ಪೋನಿಟೇಲ್ ಅಥವಾ ಬ್ರೇಡ್‌ನಲ್ಲಿ ದೀರ್ಘಕಾಲ ಇಡುವುದು ತುಂಬಾ ಆರಾಮದಾಯಕವೆನಿಸಿದರೂ ಕೂದಲು ಉದುರುವ ಸಮಸ್ಯೆ ಹೆಚ್ಚಿದೆ. ಇವು ಕೂದಲಿನ ಬೇರುಗಳನ್ನು ದುರ್ಬಲಗೊಳಿಸುತ್ತವೆ ಹಾಗೂ ನೆತ್ತಿಯನ್ನು ಹಾನಿಗೊಳಿಸುತ್ತವೆ.

ಹೇರ್ ಬ್ರಷ್ ಬಳಕೆ : ಹೇರ್ ಬ್ರಷ್ ಅನ್ನು ಬುದ್ಧಿವಂತಿಕೆಯಿಂದ ಬಳಸಿದರೆ ನಿಮ್ಮ ಕೂದಲಿಗೆ ಒಳ್ಳೆಯದು. ಪ್ರತಿ ಗಂಟೆಗೆ ಕೂದಲನ್ನು ಬಾಚಬೇಡಿ ಏಕೆಂದರೆ ಅದು ನಿಮ್ಮ ಕೂದಲನ್ನು ಹೆಚ್ಚು ಹಾನಿಗೊಳಿಸುತ್ತದೆ.

ಹೆಚ್ಚು ಬಾರಿ ಕೂದಲು ಬಾಚಿಕೊಳ್ಳುವುದು ಬೇರುಗಳನ್ನು ದುರ್ಬಲಗೊಳಿಸುತ್ತದೆ ಮತ್ತು ಬಹಳಷ್ಟು ಕೂದಲು ಉದುರುವಿಕೆಗೆ ಕಾರಣವಾಗುತ್ತದೆ. ಒದ್ದೆಯಾದ ಕೂದಲನ್ನು ಬಾಚಿಕೊಳ್ಳಬೇಡಿ: ಕೂದಲು ಒದ್ದೆಯಾಗಿದ್ದಾಗ ಬಾಚುವುದು ಹಾನಿಕಾರಕ,ಇದರಿಂದ ಕೂದಲು ಕವಲು ಒಡೆಯುವುದು, ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ.

ಸ್ವಲ್ಪ ಸಮಯದವರೆಗೆ ಕೂದಲನ್ನು ನೈಸರ್ಗಿಕವಾಗಿ ಒಣಗಲು ಬಿಡಿ ಮತ್ತು ನಂತರ ಅಗಲವಾದ ಹಲ್ಲಿನ ಬಾಚಣಿಗೆ ಅಥವಾ ಬ್ರಷ್‌ನಿಂದ ಅದನ್ನು ಬಿಡಿಸಿ. ಅಲ್ಲಿಯವರೆಗೆ, ನಿಮ್ಮ ಬೆರಳುಗಳನ್ನು ಬಳಸಿ.

ಎಲ್ಲಾ ಸಮಯದಲ್ಲೂ ಸ್ಟ್ರೈಟನಿಂಗ್, ಹೇರ್ ಡ್ರೈಯರ್ ಬಳಸಬೇಡಿ: ನೀವು ಪ್ರತಿ ಬಾರಿ ತಲೆ ಸ್ನಾನ ಮಾಡಿದ ಬಳಿಕ ಹೇರ್ ಸ್ಟ್ರೈಟನಿಂಗ್ ಹಾಗೂ ಹೇರ್ ಡ್ರೈಯರ್ ಬಳಸುವುದನ್ನು ತಪ್ಪಿಸಬೇಕು. ಇಲ್ಲವಾದಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚಾಗುತ್ತದೆ.

ಉತ್ತಮ ಆಹಾರ ಸೇವನೆ ಮಾಡಿ: ನೀವು ಸೇವಿಸುವ ಆಹಾರ ಕೂದಲಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಹೀಗಾಗಿ ನಿಮ್ಮ ಆಹಾರದಲ್ಲಿ ತರಕಾರಿಗಳು, ಮಜ್ಜಿಗೆ, ಹಣ್ಣುಗಳು, ಮೊಸರು, ಮೊಳಕೆಯೊಡೆದ ಕಾಳುಗಳನ್ನು ಸೇವಿಸಿ. ಇದು ನಿಮ್ಮ ಆರೋಗ್ಯವನ್ನು ಜತೆಗೆ ಕೂದಲಿನ ಆರೋಗ್ಯವನ್ನೂ ಸುಧಾರಿಸುತ್ತದೆ

ನೆತ್ತಿಗೆ ಮಸಾಜ್ ಮಾಡಿ: ನೆತ್ತಿಯಲ್ಲಿ ರಕ್ತ ಸಂಚಾರ ಉತ್ತಮವಾದಾಗ ಕೂದಲು ಉದುರುವ ಸಮಸ್ಯೆ ಕೂಡ ಕಡಿಮೆಯಾಗುತ್ತದೆ. ನೀವು ನಿತ್ಯ ಬಳಸುವ ಯಾವುದೇ ಹೇರ್ ಆಯಿಲ್ ಬಳಸಿ ನಿಧಾನವಾಗಿ ನೆತ್ತಿಯ ಮೇಲೆ ಮಸಾಜ್ ಮಾಡುವುದರಿಂದ ಕೂದಲು ಸೊಂಪಾಗಿ ಬೆಳೆಯುತ್ತದೆ ಇದರ ಜೊತೆಗೆ ತಲೆನೋವು, ಟೆನ್ಶನ್ ಇಂತಹ ಸಮಸ್ಯೆಗಳು ಕೂಡ ಪರಿಹಾರವಾಗುತ್ತದೆ.

ಬೇವಿನ ಬಳಕೆ: ಬೇವಿನ ಸೊಪ್ಪನ್ನು ನೀರಿನಲ್ಲಿ ಬೇವಿನ ಎಲೆ ಹಾಕಿ ಚೆನ್ನಾಗಿ ಕುದಿಸಿ ಅದರ ನೀರನ್ನು ಕೂದಲ ಬುಡಕ್ಕೆ ಹಚ್ಚಿ ಒಣಗಿದ ಮೇಲೆ ಸ್ನಾನ ಮಾಡುವುದರಿಂದ ಕೂದಲು ಉದುರುವುದು ನಿಲ್ಲುತ್ತದೆ. ಕೂದಲ ಬುಡಕ್ಕೆ ಹಚ್ಚುವುದರಿಂದ ರಕ್ತಪರಿಚಲನೆ ಉತ್ತಮವಾಗುತ್ತದೆ. ಅಷ್ಟೇ ಅಲ್ಲದೆ ಬಾಲನೆರೆ, ಕೂದಲು ಉದುರಿ ತೆಳ್ಳಗಾಗುವುದನ್ನು ಇದು ತಪ್ಪಿಸುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ