AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Non-Veg Foods: ಭಾರತದ ಈ ನಗರಗಳಲ್ಲಿ ಮಾಂಸಾಹಾರ ಸೇವನೆ ನಿಷಿದ್ಧ ಏಕೆ?

ಭಾರತದ ಕೆಲವು ಸ್ಥಳಗಳಲ್ಲಿ ಕೇವಲ ಸಸ್ಯಾಹಾರವನ್ನು ಮಾತ್ರ ಸೇವಿಸುತ್ತಾರೆ, ಮಾಂಸಾಹಾರ ನಿಷಿದ್ಧ ಎಂಬುದು ನಿಮಗೆ ತಿಳಿದಿದೆಯೇ?

Non-Veg Foods: ಭಾರತದ ಈ ನಗರಗಳಲ್ಲಿ ಮಾಂಸಾಹಾರ ಸೇವನೆ ನಿಷಿದ್ಧ ಏಕೆ?
Food
TV9 Web
| Edited By: |

Updated on: Oct 06, 2022 | 12:49 PM

Share

ಭಾರತದ ಕೆಲವು ಸ್ಥಳಗಳಲ್ಲಿ ಕೇವಲ ಸಸ್ಯಾಹಾರವನ್ನು ಮಾತ್ರ ಸೇವಿಸುತ್ತಾರೆ, ಮಾಂಸಾಹಾರ ನಿಷಿದ್ಧ ಎಂಬುದು ನಿಮಗೆ ತಿಳಿದಿದೆಯೇ? ಭಾರತದಲ್ಲಿ ಶೇ.40ರಷ್ಟು ಜನರು ಸಸ್ಯಾಹಾರಿಗಳಿದ್ದಾರೆ, ಗುಜರಾತ್, ಹರಿಯಾಣ ಮತ್ತು ರಾಜಸ್ಥಾನದಂತಹ ರಾಜ್ಯಗಳು ಸಸ್ಯಾಹಾರಿ ರಾಜ್ಯವೆಂದು ಹೇಳಲಾಗುತ್ತದೆ. ಅಲ್ಲಿ ಜನರು ಸಸ್ಯಾಹಾರಿ ಆಹಾರವನ್ನು ಸೇವಿಸುತ್ತಾರೆ.

ಈ ರಾಜ್ಯಗಳಲ್ಲಿ ಮಾಂಸಾಹಾರ ಸೇವಿಸುವವರ ಸಂಖ್ಯೆ ಕಡಿಮೆ ಎಂದು ಹೇಳಲಾಗುತ್ತದೆ. ಮಾಂಸಾಹಾರವನ್ನು ಅನುಮತಿಸದ ಕೆಲವು ನಗರಗಳು ಇಲ್ಲಿವೆ.

ರಿಷಿಕೇಶ, ಉತ್ತರಾಖಂಡ ಈ ಪ್ರದೇಶದಲ್ಲಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ. ಇದು ದೇವಾಲಯಗಳ ನಗರವಾಗಿದೆ, ಸಾಕಷ್ಟು ಮುಳ್ಳಿನ ಮರಗಳನ್ನು ಹೊಂದಿರುವ ಪಚ್ಚೆ ಹಸಿರು ಬೆಟ್ಟಗಳು ಇಲ್ಲಿವೆ

ವಾರಾಣಸಿ, ಉತ್ತರ ಪ್ರದೇಶ ಇದು ಶಿವನ ನಗರ ಎಂದು ನಂಬಲಾಗಿದೆ ಏಕೆಂದರೆ ಈ ನಗರವು ಅವನಿಂದ ಮಾತ್ರ ನಿರ್ಮಿಸಲ್ಪಟ್ಟಿದೆ ಎಂದು ಹೇಳಲಾಗಿದೆ. ಈ ನಗರದಲ್ಲಿ ನೀವು ಕೇಳಿರದ ಸಸ್ಯಾಹಾರಿ ಆಹಾರಗಳಿವೆ

ಹರಿದ್ವಾರ, ಉತ್ತರಾಖಂಡ ಇದು ಭಾರತದ ಪವಿತ್ರ ನಗರಗಳಲ್ಲಿ ಒಂದಾಗಿದೆ. ಅದಕ್ಕೆ ಕಾರಣ ಪವಿತ್ರ ಗಂಗಾ ನದಿ. ಈ ನಗರದಲ್ಲಿ ನೀವು ಸಲಾಡ್‌ಗಳು, ವೆಜ್ ಫ್ರೈಡ್ ಫುಡ್​ಗಳನ್ನು ಸೇವಿಸಬಹುದು.

ಮಧುರೈ, ತಮಿಳುನಾಡು ಈ ನಗರವನ್ನು ತಮಿಳುನಾಡಿನ ಹೃದಯ ಎಂದೂ ಕರೆಯುತ್ತಾರೆ. ಈ ನಗರದಲ್ಲಿ ಅತ್ಯಂತ ರುಚಿಕರವಾದ, ಪೌಷ್ಟಿಕ ಸಸ್ಯಾಹಾರಿ ಭಕ್ಷ್ಯಗಳು ದೊರೆಯುತ್ತವೆ.

ಅಯೋಧ್ಯೆ, ಉತ್ತರ ಪ್ರದೇಶ ಇದು ಭಗವಾನ್ ರಾಮನ ಜನ್ಮಸ್ಥಳವಾಗಿದೆ ಮತ್ತು ಹೀಗಾಗಿ ಭಾರತದಲ್ಲಿ ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ. ಇದು ಪವಿತ್ರ ಸ್ಥಳವಾಗಿದ್ದು, ನಗರದಲ್ಲಿ ಮಾಂಸಾಹಾರವನ್ನು ಅನುಮತಿಸಲಾಗುವುದಿಲ್ಲ.

ವೃಂದಾವನ, ಉತ್ತರ ಪ್ರದೇಶ ನಗರವು ಮಥುರಾ ಜಿಲ್ಲೆಯಲ್ಲಿದೆ ಮತ್ತು ಧಾರ್ಮಿಕ ಪ್ರಾಮುಖ್ಯತೆಯನ್ನು ಹೊಂದಿದೆ ಏಕೆಂದರೆ ಹಿಂದೂ ಧರ್ಮಗ್ರಂಥಗಳ ಪ್ರಕಾರ, ಭಗವಾನ್ ಕೃಷ್ಣನು ಹೆಚ್ಚಿನ ಬಾಲ್ಯವನ್ನು ಈ ನಗರದಲ್ಲಿ ಕಳೆದನು. ನಗರದಲ್ಲಿ ಮಾಂಸಾಹಾರ ನಿಷೇಧಿಸಿರುವುದರಿಂದ ಮಾಂಸಾಹಾರ ಸಿಗುವುದಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು