AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಸಿಗೆಯಲ್ಲಿ ಕಾಡುವ ಬೆವರು ಗುಳ್ಳೆಯಿಂದ ಮುಕ್ತಿ ಹೊಂದಲು ಇಲ್ಲಿದೆ ಸುಲಭ ಮಾರ್ಗ

ಬೇಸಿಗೆ ಬಂತೆಂದರೆ ತ್ವಚೆಯ ರಕ್ಷಣೆಯತ್ತ ಹೆಚ್ಚು ಗಮನ ಕೊಡಬೇಕಾಗುತ್ತದೆ. ಸೂರ್ಯನ ಕಿರಣಗಳಿಂದ ಮೃದುವಾದ ಚರ್ಮವು ರಕ್ಷಿಸುವುದೇ ದೊಡ್ಡ ಸವಾಲು. ಸುಡು ಬಿಸಿಲಿನ ನಡುವೆ ಚರ್ಮದ ಸಮಸ್ಯೆಗಳು ಹೆಚ್ಚಾಗಿ ಕಾಡುತ್ತದೆ. ಬೆವರುಗುಳ್ಳೆಗಳು, ಚರ್ಮದ ಉರಿ ಹಾಗೂ ತುರಿಕೆಯಂತಹ ಕಾಯಿಲೆಯಿಂದ ಕೆಲವರಂತೂ ಒದ್ದಾಡಿ ಬಿಡುತ್ತಾರೆ. ಆದರೆ ಇಂತಹ ಕಾಯಿಲೆಗಳಿಗೆ ಪ್ರಾರಂಭದಲ್ಲಿಯೇ ಮನೆಯಲ್ಲಿ ಔಷಧಿ ಮಾಡಿ ಪರಿಹಾರ ಕಂಡುಕೊಳ್ಳಬಹುದು.

ಬೇಸಿಗೆಯಲ್ಲಿ ಕಾಡುವ ಬೆವರು ಗುಳ್ಳೆಯಿಂದ ಮುಕ್ತಿ ಹೊಂದಲು ಇಲ್ಲಿದೆ ಸುಲಭ ಮಾರ್ಗ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on:Feb 23, 2024 | 12:52 PM

Share

ಬೇಸಿಗೆಗಾಲವೆಂದರೆ ಬಹಳಷ್ಟು ಕಿರಿಕಿರಿ. ಹೀಗಾಗಿ ಬೇಸಿಗೆಯನ್ನು ಅಷ್ಟಾಗಿ ಯಾರು ಕೂಡ ಇಷ್ಟ ಪಡುವುದಿಲ್ಲ. ಪ್ರಾರಂಭದಲ್ಲಿ ನಮ್ಮ ದೇಹವು ಚಳಿಗಾಲದಿಂದ ಬೇಸಿಗೆ ಕಾಲದ ಹವಾಮಾನಕ್ಕೆ ಹೊಂದಿಕೊಳ್ಳುವುದು ಕಷ್ಟವಾಗುತ್ತದೆ. ಹೀಗಾಗಿ ಹೆಚ್ಚಿನವರಿಗೆ ಆರೋಗ್ಯವು ಕೈ ಕೊಡುತ್ತದೆ. ಈ ಸಮಯದಲ್ಲಿ ವಿಪರೀತ ಬಿಸಿಲಿನಿಂದ ಚರ್ಮದ ಸಮಸ್ಯೆಗಳು ಕಾಡುವುದು ಸರ್ವೇ ಸಾಮಾನ್ಯ. ದೇಹದಲ್ಲಿ ಚಿಕ್ಕ-ಚಿಕ್ಕ ಗುಳ್ಳೆಗಳು ಎದ್ದು, ಕೀವು ತುಂಬಿಕೊಳ್ಳುತ್ತದೆ, ಇಲ್ಲದಿದ್ದರೆ ವಿಪರೀತ ತುರಿಕೆಯಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಹೀಗಾಗಿ ಈ ಸಮಸ್ಯೆಯಿಂದ ಮುಕ್ತರಾಗಲು ಮನೆ ಮದ್ದನ್ನು ಪ್ರಯತ್ನಿಸಬಹುದು

* ತೊಳೆದ ಅಕ್ಕಿಯ ನೀರಿನಿಂದ ಮೈಯನ್ನು ತೊಳೆದುಕೊಳ್ಳುವುದರಿಂದ ಬೆವರು ಗುಳ್ಳೆಗಳು ಕಡಿಮೆಯಾಗುತ್ತದೆ.

* ಬದನೆಕಾಯಿ ನೆನೆಹಾಕಿದ ನೀರಿನಲ್ಲಿ ಕೈಕಾಲು ಮುಖ ತೊಳೆಯುತ್ತಿದ್ದರೆ ಗುಳ್ಳೆಯಂತಹ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.

* ಬೇವಿನ ಎಲೆಗಳ ಪೇಸ್ಟ್ ತಯಾರಿಸಿ ಗುಳ್ಳೆಯ ಮೇಲೆ ಲೇಪಿಸುತ್ತಿದ್ದರೆ ಬಹುಬೇಗನೆ ಶಮನವಾಗುತ್ತದೆ.

* ಬೆಳ್ಳುಳ್ಳಿಯನ್ನು ಪೇಸ್ಟ್ ಮಾಡಿ ಬೆವರು ಸಾಲೆಯ ಮೇಲೆ ದಿನಕ್ಕೆ ಒಂದೆರಡು ಬಾರಿ ಹಚ್ಚಿದರೆ ಗುಳ್ಳೆಗಳು ಇಲ್ಲದಂತಾಗುತ್ತದೆ.

* ಬಿಸಿ ನೀರಿಗೆ ಕಲ್ಲು ಉಪ್ಪು ಬೆರೆಸಿ ಸ್ನಾನ ಮಾಡಿದರೆ ಚರ್ಮದ ಸೋಂಕು ಸೇರಿದಂತೆ ಬೆವರುಗುಳ್ಳೆಗಳಿಗೆ ಪರಿಣಾಮಕಾರಿಯಾದ ಮನೆ ಮದ್ದಾಗಿದೆ.

* ಪ್ರತಿ ದಿನವೂ ತಣ್ಣೀರು ಸ್ನಾನ ಮಾಡಿದರೆ ಈ ಸಮಸ್ಯೆಯು ದೂರವಾಗುತ್ತದೆ.

* ನೆಲ್ಲಿಕಾಯಿಯನ್ನು ಜಜ್ಜಿ ತೆಗೆದ ರಸವನ್ನು ಮೈಗೆ ಹಚ್ಚುತ್ತಿದ್ದರೆ ಬೆವರುಗುಳ್ಳೆಗಳೂ ಇಲ್ಲದಂತಾಗುತ್ತದೆ.

* ತೆಂಗಿನ ಎಣ್ಣೆಯನ್ನು ಸೌತೆಕಾಯಿ ರಸದೊಂದಿಗೆ ಬೆರೆಸಿ ಈ ಬೆವರು ಗುಳ್ಳೆಗಳ ಮೇಲೆ ಹಚ್ಚಿದರೆ ಗುಣಮುಖವಾಗುತ್ತದೆ.

* ರೋಸ್ ವಾಟರ್‌ಗೆ ಶ್ರೀಗಂಧದ ಪುಡಿ, ಲಾವಂಚದ ಪುಡಿ ಈ ಎಲ್ಲವನ್ನು ಸಮಪ್ರಮಾಣದಲ್ಲಿ ಸೇರಿಸಿಮಿಶ್ರಣ ಮಾಡಿ, ಬೆವರು ಗುಳ್ಳೆಗಳ ಮೇಲೆ ಲೇಪಿಸುವುದರಿಂದ ಪರಿಣಾಮಕಾರಿಕಾರಿ ಔಷಧಿಯಾಗಿದೆ.

* ತುಳಸಿ ರಸ ಮತ್ತು ಶುಂಠಿಯನ್ನು ಸೇರಿಸಿ ಪೇಸ್ಟ್ ಮಾಡಿಟ್ಟುಕೊಳ್ಳಿ. ಇದನ್ನು ಪ್ರತಿ ದಿನ ಹಚ್ಚುತ್ತ ಬರುವುದರಿಂದ ಚರ್ಮದ ಸಮಸ್ಯೆಗಳು ದೂರವಾಗುತ್ತದೆ.

* ಅರಶಿನ ಮತ್ತು ಶುಂಠಿಯನ್ನು ಚೆನ್ನಾಗಿ ರುಬ್ಬಿಕೊಂಡು, ಈ ಮಿಶ್ರಣವನ್ನು ನೇರವಾಗಿ ಗುಳ್ಳೆಯ ಮೇಲೆ ಹಚ್ಚುವುದು ಪರಿಣಾಮಕಾರಿ.

* ಬೇಯಿಸಿದ ಮೊಟ್ಟೆಯ ಬಿಳಿ ಭಾಗವನ್ನು ನೆನಸಿ, ಅದನ್ನು ಗುಳ್ಳೆಯ ಮೇಲೆ ಇಡುವುದರಿಂದ ಈ ಸಮಸ್ಯೆಯಿಂದ ಮುಕ್ತರಾಗುವುದು ಸುಲಭ.

ಇದನ್ನೂ ಓದಿ: ಬೇಸಿಗೆಯಲ್ಲಿ ಆರೋಗ್ಯಕ್ಕೆ ಹಿತಕರ ಈ ದಾಳಿಂಬೆ ಜ್ಯೂಸ್​​​, ಈ ಐಟಂ ಇದ್ದರೆ ಸಾಕು ಮಾಡೋದು ಕಷ್ಟವೇನಲ್ಲ

* ಕುದಿಯುವ ಬಿಸಿನೀರಿಗೆ ಜೋಳದ ಹಿಟ್ಟು ಹಾಕಿ ಮಿಶ್ರಣ ಮಾಡಿ, ಇದನ್ನು ಬೆವರು ಗುಳ್ಳೆಯ ಮೇಲೆ ಹಚ್ಚುತ್ತ ಬರುವುದರಿಂದ ಸಮಸ್ಯೆಯು ನಿವಾರಣೆಯಾಗುತ್ತದೆ.

* ತಣ್ಣೀರಿಗೆ ಜೀರಿಗೆಪುಡಿ ಹಾಕಿ ಸ್ನಾನ ಮಾಡುವುದರಿಂದ ಬೆವರು ಗುಳ್ಳೆಗಳು ಕಡಿಮೆಯಾಗುತ್ತದೆ.

ಈ ಮನೆಮದ್ದು ಉಪಯೋಗಿಸುವ ಮುನ್ನ ತಜ್ಞರ ಬಳಿ ಚರ್ಚಿಸುವುದು ಉತ್ತಮ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:40 pm, Fri, 23 February 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ