AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air Pollution: ಶ್ವಾಸಕೋಶವನ್ನು ಮಾಲಿನ್ಯದಿಂದ ರಕ್ಷಿಸಲು ಈ 7 ಆಹಾರ ಪದಾರ್ಥಗಳನ್ನು ಸೇವಿಸಿ

ಶ್ವಾಸಕೋಶವನ್ನು ರಕ್ಷಿಸಲು ಮತ್ತು ಉಸಿರಾಟದ ಸಮಸ್ಯೆಯಿಂದ ಹೊರಬರಲು ನಿಮ್ಮ ಆಹಾರದಲ್ಲಿ ಪೌಷ್ಟಿಕಾಂಶ ಭರಿತ ಪದಾರ್ಥಗಳನ್ನು ಸೇರಿಸುವುದು ಉತ್ತಮ.

Air Pollution: ಶ್ವಾಸಕೋಶವನ್ನು ಮಾಲಿನ್ಯದಿಂದ ರಕ್ಷಿಸಲು ಈ 7 ಆಹಾರ ಪದಾರ್ಥಗಳನ್ನು ಸೇವಿಸಿ
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Nov 29, 2021 | 8:35 AM

Share

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಲಿನ್ಯದಿಂದಾಗಿ ಜನರು ಉಸಿರಾಡಲು ತೊಂದರೆ ಅನುಭವಿಸುತ್ತಿದ್ದಾರೆ. ಇದು ಕೇವಲ ದೆಹಲಿಗೆ ಮಾತ್ರ ಸೀಮಿತವಾಗಿಲ್ಲ. ಇನ್ನಿತರ ಪ್ರದೇಶಗಳಲ್ಲೂ ವಾಯು ಮಾಲಿನ್ಯದಂತಹ (Air pollution) ಸಮಸ್ಯೆ ಇದೆ. ದೀರ್ಘಕಾಲದ ಬ್ರಾಂಕೈಟಿಸ್‌ನಿಂದ ಬಳತ್ತಿರುವವರು, ಹೃದ್ರೋಗ ಸಮಸ್ಯೆ ಮತ್ತು ಮಧುಮೇಹದ ಇರುವವರು ಎಚ್ಚರಿಕೆ ವಹಿಸಬೇಕು. ಇಂತಹ ಪರಿಸ್ಥಿತಿಯಲ್ಲಿ ಶ್ವಾಸಕೋಶವನ್ನು ರಕ್ಷಿಸಲು ಮತ್ತು ಉಸಿರಾಟದ ಸಮಸ್ಯೆಯಿಂದ ಹೊರಬರಲು ನಿಮ್ಮ ಆಹಾರದಲ್ಲಿ ಪೌಷ್ಟಿಕಾಂಶ ಭರಿತ ಪದಾರ್ಥಗಳನ್ನು ಸೇರಿಸುವುದು ಉತ್ತಮ.

ಶ್ವಾಸಕೋಶವನ್ನು ಮಾಲಿನ್ಯದಿಂದ ರಕ್ಷಿಸಲು ಈ 7 ಆಹಾರ ಪದಾರ್ಥಗಳನ್ನು ಸೇವಿಸಿ ಬೆಲ್ಲ ಆಯುರ್ವೇದದಲ್ಲಿ ಬೆಲ್ಲದ ಸೇವನೆಯು ಶ್ವಾಸಕೋಶಕ್ಕೆ ಸಂಬಂಧಿಸಿದ ಕಾಯಿಲೆಗಳಲ್ಲಿ ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದು ಉಸಿರಾಟದ ತೊಂದರೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಬೆಲ್ಲವು ಶ್ವಾಸನಾಳದ ಸ್ನಾಯುಗಳು ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ. ಉಸಿರಾಟವನ್ನು ಸುಲಭಗೊಳಿಸುತ್ತದೆ ಮತ್ತು ಶ್ವಾಸಕೋಶದಲ್ಲಿ ಗಾಳಿಯ ಹರಿವನ್ನು ಹೆಚ್ಚಿಸುತ್ತದೆ.

ಮೀನು ಮೀನು ಕೊಬ್ಬಿನಲ್ಲಿ ಸಮೃದ್ಧವಾಗಿವೆ ಮತ್ತು ಒಮೆಗಾ -3 ಕೊಬ್ಬಿನಾಮ್ಲಗಳ ಅತ್ಯುತ್ತಮ ಮೂಲವಾಗಿದೆ. ಇದು ಶ್ವಾಸಕೋಶವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಇವುಗಳನ್ನು ಪಾಲಿ-ಅನ್‌ಸ್ಯಾಚುರೇಟೆಡ್ ಕೊಬ್ಬಿನಾಮ್ಲಗಳು ಎಂದೂ ಕರೆಯುತ್ತಾರೆ. ಇದು ಆಂಟಿಕಾರ್ಸಿನೋಜೆನಿಕ್ ಮತ್ತು ಆಂಟಿಆಕ್ಸಿಡೇಟಿವ್ ಗುಣಲಕ್ಷಣಗಳಿಂದ ಸಮೃದ್ಧವಾಗಿದೆ. ಈ ಎಲ್ಲಾ ಗುಣಲಕ್ಷಣಗಳು ಶ್ವಾಸಕೋಶದ ಕಾಯಿಲೆಗಳು ಮತ್ತು ವಾಯು ಮಾಲಿನ್ಯದ ಹಾನಿಕಾರಕ ಪರಿಣಾಮಗಳಿಂದ ರಕ್ಷಿಸುತ್ತವೆ.

ಸೇಬು ಅಧ್ಯಯನದ ಪ್ರಕಾರ, ನಿಯಮಿತವಾಗಿ ಸೇಬು ತಿನ್ನುವುದು ಶ್ವಾಸಕೋಶವನ್ನು ಆರೋಗ್ಯಕರವಾಗಿರಿಸುತ್ತದೆ. ಸೇಬು ತಿನ್ನುವುದರಿಂದ ಶ್ವಾಸಕೋಶದ ಕೆಲಸ ಮಾಡುವ ಸಾಮರ್ಥ್ಯ ಹೆಚ್ಚುತ್ತದೆ. ಆಸ್ತಮಾ ಮತ್ತು ಶ್ವಾಸಕೋಶದ ಕ್ಯಾನ್ಸರ್ ಸಾಧ್ಯತೆಗಳನ್ನು ಇದು ಕಡಿಮೆ ಮಾಡುತ್ತದೆ.

ವಾಲ್ನಟ್ ಇದು ಒಮೆಗಾ -3 ಕೊಬ್ಬಿನಾಮ್ಲಗಳ ಮತ್ತೊಂದು ಶ್ರೀಮಂತ ಮೂಲವಾಗಿದೆ. ವಾಲ್ನಟ್​ನ ನಿಯಮಿತ ಸೇವನೆಯು ಆಸ್ತಮಾ ಮತ್ತು ಇತರ ಉಸಿರಾಟದ ಸಮಸ್ಯೆಯ ವಿರುದ್ಧ ಹೋರಾಡಲು ಸಹಾಯಕವಾಗಿದೆ.

ಬೀಟ್ರೂಟ್ ಇದು ಶ್ವಾಸಕೋಶದ ಕಾರ್ಯನಿರ್ವಹಣೆಗೆ ಪ್ರಯೋಜನಕಾರಿಯಾದ ನೈಟ್ರೇಟ್ ಅಂಶಗಳನ್ನು ಒಳಗೊಂಡಿದೆ. ತಜ್ಞರ ಪ್ರಕಾರ, ನೈಟ್ರೇಟ್‌ಗಳು ರಕ್ತನಾಳಗಳನ್ನು ವಿಶ್ರಾಂತಿ ಪಡೆಯಲು, ರಕ್ತದೊತ್ತಡವನ್ನು ಕಡಿಮೆ ಮಾಡಲು ಮತ್ತು ಆಮ್ಲಜನಕದ ಹೀರಿಕೊಳ್ಳುವಿಕೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದರ ಜೊತೆಗೆ, ಬೀಟ್ರೂಟ್​ನಲ್ಲಿ ಮೆಗ್ನೀಸಿಯಮ್, ಪೊಟ್ಯಾಸಿಯಮ್, ವಿಟಮಿನ್ ಸಿ ಮತ್ತು ಕ್ಯಾರೊಟಿನಾಯ್ಡ್ ಆಂಟಿಆಕ್ಸಿಡೆಂಟ್​ಗಳು ಸಮೃದ್ಧವಾಗಿವೆ. ಇದು ಶ್ವಾಸಕೋಶದ ಆರೋಗ್ಯಕ್ಕೆ ಅವಶ್ಯಕವಾಗಿದೆ.

ಬೆಳ್ಳುಳ್ಳಿ ಇದರಲ್ಲಿ ಅಲಿಸಿನ್ ಸಮೃದ್ಧವಾಗಿದೆ. ಇದು ಉರಿಯೂತದ ವಿರುದ್ಧ ಹೋರಾಡುವ ಗುಣಲಕ್ಷಣಗಳನ್ನು ಹೊಂದಿದೆ. ಬೆಳ್ಳುಳ್ಳಿ ಸ್ವತಂತ್ರ ರಾಡಿಕಲ್​ಗಳಿಂದ ಉಂಟಾಗುವ ಹಾನಿಯನ್ನು ಕಡಿಮೆ ಮಾಡುತ್ತದೆ. ಬೆಳ್ಳುಳ್ಳಿಯ ನಿಯಮಿತ ಸೇವನೆಯು ಸೋಂಕು ಮತ್ತು ಉರಿಯೂತದ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ಅಸ್ತಮಾ ಅಥವಾ ಬ್ರಾಂಕೈಟಿಸ್‌ನಂತಹ ಉಸಿರಾಟದ ಅಸ್ವಸ್ಥತೆಗಳಿಂದ ದೂರ ಇಡುತ್ತದೆ.

ಅರಿಶಿಣ ಅರಿಶಿಣದಲ್ಲಿ ಕರ್ಕ್ಯುಮಿನ್ ಎಂಬ ಅಂಶವಿದೆ. ಇದು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದು ಸೋಂಕು ಮತ್ತು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದರ ಸೇವನೆಯು ಶ್ವಾಸಕೋಶದ ಕಾರ್ಯ ಸಾಮರ್ಥ್ಯವನ್ನು ಸುಧಾರಿಸುತ್ತದೆ. ನೀವು ಹಾಲಿಗೆ ಅರಿಶಿಣ ಬೆರೆಸಿ ಸೇವಿಸಬಹುದು.

ಇದನ್ನೂ ಓದಿ: ಶುಂಠಿ ನೀರು ಕುಡಿಯುವ ಅಭ್ಯಾಸ ಇದೆಯೇ? ಆರೋಗ್ಯಕರ ಬದಲಾವಣೆಯ ಬಗ್ಗೆ ತಿಳಿಯಿರಿ

Health Tips: ನಿದ್ರೆಯಿಂದ ಖಿನ್ನತೆ ಹೆಚ್ಚಾಗುತ್ತಾ?; ನಿದ್ರೆಗೂ ಮಾನಸಿಕ ಆರೋಗ್ಯಕ್ಕೂ ಇರುವ ನಂಟೇನು?

Follow Us
TV9 Web
TV9 Web

TV9 Kannada

Read More
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು