AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ವಾಯುಮಾಲಿನ್ಯವು ಶಿಶುಗಳಲ್ಲಿ ಅರಿವಿನ ಸಮಸ್ಯೆಗೆ ಹಾನಿಕಾರಕ: ಅಧ್ಯಯನ

ಭಾರತದಲ್ಲಿ ಗಾಳಿಯ ಗುಣಮಟ್ಟವು ಕಳಪೆಯಾಗಿದ್ದು ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಶಿಶುಗಳಲ್ಲಿ ಮೆದುಳಿನ ಬೆಳವಣಿಗೆಯಲ್ಲಿ ನ್ಯೂನ್ಯತೆಗಳು ಕಂಡುಬರುತ್ತಿವೆ ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ.

ಭಾರತದಲ್ಲಿ ವಾಯುಮಾಲಿನ್ಯವು ಶಿಶುಗಳಲ್ಲಿ ಅರಿವಿನ ಸಮಸ್ಯೆಗೆ ಹಾನಿಕಾರಕ: ಅಧ್ಯಯನ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 25, 2023 | 7:16 PM

Share

ಭಾರತದಲ್ಲಿ ಗಾಳಿಯ ಗುಣಮಟ್ಟವು ಕಳಪೆಯಾಗಿದ್ದು ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಶಿಶುಗಳಲ್ಲಿ ಮೆದುಳಿನ ಬೆಳವಣಿಗೆಯಲ್ಲಿ ನ್ಯೂನ್ಯತೆಗಳು ಕಂಡುಬರುತ್ತಿವೆ. ಅಂದರೆ ದುರ್ಬಲ ಗ್ರಹಿಕೆಗೆ ಸಂಬಂಧಿಸಿದೆ ಎಂದು ಅಧ್ಯಯನವೊಂದು ತಿಳಿಸಿದೆ. ಗ್ರಹಿಕೆ ಎಂದರೆ ಆಲೋಚನೆ, ಅನುಭವ ಮತ್ತು ಇಂದ್ರಿಯಗಳ ಮೂಲಕ ಜ್ಞಾನ ಮತ್ತು ತಿಳುವಳಿಕೆಯನ್ನು ಪಡೆಯುವ ಪ್ರಕ್ರಿಯೆ. ಕ್ರಮವಿಲ್ಲದೆ, ಮಕ್ಕಳ ದೀರ್ಘಕಾಲೀನ ಮೆದುಳಿನ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮವು ಮುಂದಿನ ಜೀವನದ ಮೇಲೆ ಪರಿಣಾಮಗಳನ್ನು ಬೀರಬಹುದು ಎಂದು ಸಂಶೋಧಕರು ಹೇಳಿದ್ದಾರೆ. ಕಳಪೆ ಗಾಳಿಯ ಗುಣಮಟ್ಟವು ಮಕ್ಕಳಲ್ಲಿ ಅರಿವಿನ ಕೊರತೆಗಳಿಗೆ ಸಂಬಂಧಿಸಿದೆ, ಜೊತೆಗೆ ನಡವಳಿಕೆಯ ಸಮಸ್ಯೆಗಳಿಗೆ ಸಂಬಂಧಿಸಿದೆ ಎಂದು ಹಿಂದಿನ ಸಂಶೋಧನೆಗಳು ತೋರಿಸಿ ಕೊಟ್ಟಿದೆ. ಇದು ಕುಟುಂಬಗಳ ಮೇಲೆ ತೀವ್ರ ಪರಿಣಾಮ ಬೀರುತ್ತದೆ” ಎಂದು ಯುಕೆಯ ಈಸ್ಟ್ ಆಂಗ್ಲಿಯಾ ವಿಶ್ವವಿದ್ಯಾಲಯದ ಪ್ರಮುಖ ಸಂಶೋಧಕ ಪ್ರೊಫೆಸರ್ ಜಾನ್ ಸ್ಪೆನ್ಸರ್ ಹೇಳಿದ್ದಾರೆ.

ಗಾಳಿಯಲ್ಲಿರುವ ಸಣ್ಣ ಕಣಗಳ ತುಣುಕುಗಳು ಉಸಿರಾಟದ ನಾಳದಿಂದ ಮೆದುಳಿಗೆ ಚಲಿಸುವುದರಿಂದ ಇದು ಪ್ರಮುಖ ಸಮಸ್ಯೆಯಾಗಿದೆ” ಎಂದು ಸ್ಪೆನ್ಸರ್ ಹೇಳಿದರು. ಮನೆಯಲ್ಲಿ ಗಾಳಿಯ ಗುಣಮಟ್ಟವು ಶಿಶುಗಳ ಅರಿವಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ನೋಡಲು ನಾವು ಗ್ರಾಮೀಣ ಭಾರತದ ಕುಟುಂಬಗಳೊಂದಿಗೆ ಕೆಲಸ ಮಾಡಿದ್ದೇವೆ” ಎಂದು ಸ್ಪೆನ್ಸರ್ ಹೇಳಿದರು.

ಈ ತಂಡವು ಭಾರತದ ಲಕ್ನೋದಲ್ಲಿನ ಸಮುದಾಯ ಸಬಲೀಕರಣ ಪ್ರಯೋಗಾಲಯದೊಂದಿಗೆ ಸೇರಿಕೊಂಡು ಈ ಸಂಶೋಧನೆ ಮಾಡಿದ್ದು ಇದು ಜಾಗತಿಕ ಆರೋಗ್ಯ ಸಂಶೋಧನೆ ಮತ್ತು ನಾವೀನ್ಯತೆ ಸಂಸ್ಥೆಯಾಗಿದೆ, ಈ ಸಂಸ್ಥೆ ಗ್ರಾಮೀಣ ಸಮುದಾಯಗಳೊಂದಿಗೆ ಸಹಯೋಗದೊಂದಿಗೆ ವಿಜ್ಞಾನದಲ್ಲಿ ತೊಡಗಿಸಿಕೊಳ್ಳಲು ಕೆಲಸ ಮಾಡುತ್ತದೆ. ಗಾಳಿಯ ಕಳಪೆ ಗುಣಮಟ್ಟದಿಂದ ಹೆಚ್ಚು ಬಲವಾಗಿ ಪ್ರಭಾವಿತವಾದ ರಾಜ್ಯಗಳಲ್ಲಿ ಒಂದಾದ ಉತ್ತರ ಪ್ರದೇಶದ ಗ್ರಾಮೀಣ ಸಮುದಾಯವಾದ ಶಿವಗಢದಲ್ಲಿ ಸಾಮಾಜಿಕ, ಆರ್ಥಿಕ ಹಿನ್ನೆಲೆಯ ಕುಟುಂಬಗಳೊಂದಿಗೆ ಸಂಶೋಧನೆ ನಡಿಸಲಾಗಿದೆ.

ಇಲೈಫ್ ಜರ್ನಲ್​​ನಲ್ಲಿ ಪ್ರಕಟವಾದ ಅಧ್ಯಯನವು ಅಕ್ಟೋಬರ್ 2017 ರಿಂದ ಜೂನ್ 2019 ರವರೆಗೆ ವಿಶೇಷವಾಗಿ ಮಕ್ಕಳ ಅರಿವಿನ ಬಗ್ಗೆ ಸಂಶೋಧನೆ ಮಾಡಿದ್ದು 215 ಶಿಶುಗಳ ಸ್ಮರಣಾ ಶಕ್ತಿಯ ವೇಗವನ್ನು ಮೌಲ್ಯಮಾಪನ ಮಾಡಿದೆ. ಬಳಿಕ ಇದು ಕಠಿಣವಾಗುತ್ತಾ ಹೋಗುತ್ತದೆ.

ಇದನ್ನೂ ಓದಿ: Air Pollution ವಾಯುಮಾಲಿನ್ಯದಿಂದ ಆರೋಗ್ಯ ಕಾಪಾಡಿಕೊಳ್ಳಲು ಹೀಗೆ ಮಾಡಿ

ಮಕ್ಕಳ ಮನೆಗಳಲ್ಲಿ ಗಾಳಿಯ ಗುಣಮಟ್ಟ ಮಾನಿಟರ್ ಗಳನ್ನು ಬಳಕೆ ಮಾಡಲಾಯಿತು. ಗಾಳಿಯ ಹೊರಸೂಸುವಿಕೆಯ ಮಟ್ಟ ಮತ್ತು ಗಾಳಿಯ ಗುಣಮಟ್ಟವನ್ನು ಅಳೆಯಲಾಯಿತು. ಮೆದುಳಿನ ಬೆಳವಣಿಗೆಯು ಮಕ್ಕಳ ಮೊದಲ ಎರಡು ವರ್ಷಗಳಲ್ಲಿ ಗಾಳಿಯ ಕಳಪೆ ಗುಣಮಟ್ಟ ಮತ್ತು ದುರ್ಬಲ ದೃಷ್ಟಿ ಗ್ರಹಿಕೆಯ ನಡುವೆ ಸಂಬಂಧವಿದೆ ಎಂದು ಈ ಸಂಶೋಧನೆ ಮೊದಲ ಬಾರಿಗೆ ತೋರಿಸುತ್ತದೆ” ಎಂದು ಸ್ಪೆನ್ಸರ್ ಹೇಳಿದರು.

ಇಂತಹ ಪರಿಣಾಮಗಳು ವರ್ಷಗಳಾದ್ಯಂತ ಮುಂದುವರಿಯಬಹುದು, ಇದು ದೀರ್ಘಕಾಲೀನ ಅಭಿವೃದ್ಧಿಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ಅವರು ಹೇಳಿದರು. ಗಾಳಿಯ ಗುಣಮಟ್ಟವನ್ನು ಸುಧಾರಿಸುವ ಜಾಗತಿಕ ಪ್ರಯತ್ನಗಳು ಶಿಶುಗಳ ಉದಯೋನ್ಮುಖ ಅರಿವಿನ ಸಾಮರ್ಥ್ಯಗಳಿಗೆ ಪ್ರಯೋಜನಗಳನ್ನು ನೀಡಬಹುದು ಎಂದು ಸಂಶೋಧನೆ ಹೇಳುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ