AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshaya Tritiya 2025: ಅಕ್ಷಯ ತೃತೀಯ ದಿನದಂದು ಈ ವಸ್ತುಗಳನ್ನು ಖರೀದಿಸಲು ಮರೆಯದಿರಿ

ಅಕ್ಷಯ ತೃತೀಯ: ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಅಕ್ಷಯ ತೃತೀಯವೂ ಒಂದು. ಈ ಹಬ್ಬದ ದಿನದಂದು ಶುಭದ ಸಂಕೇತವಾಗಿ ಚಿನ್ನ, ಬೆಳ್ಲಿ ಖರೀದಿಸುವ ವಾಡಿಕೆ ಇದೆ. ಈ ಶುಭ ದಿನ ಚಿನ್ನ ಖರೀದಿ ಮಾಡುವುದರಿಂದ ಸಮೃದ್ಧಿ ಹಾಗೂ ಸಂಪತ್ತು ಹೆಚ್ಚುತ್ತದೆ ಎಂಬ ನಂಬಿಕೆಯಿಂದ ಹೆಚ್ಚಿನ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮಾತ್ರವಲ್ಲ ಅಕ್ಷಯ ತೃತೀಯ ಹಬ್ಬದಂದು ಪುಸ್ತಕ, ಬಟ್ಟೆ ಸೇರಿದಂತೆ ಈ ಕೆಲವೊಂದಷ್ಟು ವಸ್ತುಗಳನ್ನು ಖದೀರಿ ಮಾಡುವುದು ಕೂಡಾ ಶುಭದ ಸಂಕೇತವಾಗಿದೆ. ಈ ಶುಭ ದಿನದಂದು ಈ ವಸ್ತುಗಳನ್ನು ಮನೆಗೆ ತರುವುದರಿಂದ ಅದೃಷ್ಟ ಎಂದು ಕೂಡ ನಂಬಲಾಗಿದೆ.

Akshaya Tritiya 2025: ಅಕ್ಷಯ ತೃತೀಯ ದಿನದಂದು ಈ ವಸ್ತುಗಳನ್ನು ಖರೀದಿಸಲು ಮರೆಯದಿರಿ
Akshaya Tritiya 2025Image Credit source: Getty Images
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 24, 2025 | 3:51 PM

Share

ಹಿಂದೂಗಳ (Hindu) ಪವಿತ್ರ ಹಬ್ಬಗಳಲ್ಲಿ ಒಂದಾದ ಅಕ್ಷಯ ತೃತೀಯ (Akshaya Tritiya) ಹಬ್ಬಕ್ಕೆ ಇನ್ನೂ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ ಚಿನ್ನ (Gold)  ಖರೀದಿಸಿದರೆ ಮನೆ ಮತ್ತು ಕುಟುಂಬದಲ್ಲಿ ಸಮೃದ್ಧಿ ನೆಲೆಸುತ್ತದೆ ಹಾಗೂ ದಾನ ಮಾಡಿದರೆ ಶುಭವೆಂಬ, ಲಕ್ಷ್ಮೀ ದೇವಿಯ ಆಶೀರ್ವಾದ ಯಾವಾಗಲೂ ನಿಮ್ಮ ಕುಟುಂಬದ ಮೇಲೆ ಇರುತ್ತದೆ ಎಂಬ ನಂಬಿಕೆ ಕೂಡಾ ಇದೆ. ಹೀಗಾಗಿ ಈ ದಿನ ಹೆಚ್ಚಿನವರು ಈ ಶುಭ ದಿನದಂದು ಚಿನ್ನವನ್ನು ಖರೀದಿ ಮಾಡುತ್ತಾರೆ. ಚಿನ್ನ ಮಾತ್ರವಲ್ಲದೆ ಅಕ್ಷಯ ತೃತೀಯ ಹಬ್ಬದ ದಿನ ಈ ಕೆಲವೊಂದಿಷ್ಟು ಖರೀದಿಸುವುದು ಕೂಡಾ ಶುಭದ ಸಂಕೇತವಂತೆ. ಹಾಗಿದ್ರೆ ಅಕ್ಷಯ ತೃತೀಯ ಹಬ್ಬದ ದಿನ ಯಾವ ವಸ್ತುಗಳನ್ನು ಖರೀದಿಸಿದರೆ ಒಳ್ಳೆಯದು ಎಂಬ ಮಾಹಿತಿ ಇಲ್ಲಿದೆ ನೋಡಿ

ಅಕ್ಷಯ ತೃತೀಯ ದಿನದಂದು ಈ ವಸ್ತುಗಳನ್ನು ಖರೀದಿಸಲು ಮರೆಯದಿರಿ:

ಅಕ್ಷಯ ತೃತೀಯದಂದು ಚಿನ್ನ:

ಅಕ್ಷಯ ತೃತೀಯ ಹಬ್ಬದ ದಿನ ಚಿನ್ನ ಖರೀದಿಸುವುದು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಆದ್ದರಿಂದ ಈ ದಿನ ಹೆಚ್ಚಿನವರು ಚಿನ್ನದ ನಾಣ್ಯ, ಸಣ್ಣ ಆಭರಣಗಳು ಸೇರಿದಂತೆ ಶುಭ ಮತ್ತು ಸಮೃದ್ಧಿಯ ಸಂಕೇತವಾಗಿ ಚಿನ್ನವನ್ನು ಖರೀದಿಸುತ್ತಾರೆ.

ವಾಹನ ಖರೀದಿ:

ನೀವು ಹೊಸ ವಾಹನ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ, ಅಕ್ಷಯ ತೃತೀಯಕ್ಕಿಂತ ಉತ್ತಮವಾದ ದಿನ ಇನ್ನೊಂದಿಲ್ಲ. ಈ ದಿನದಂದು ಶುಭ ಸಮಯದಲ್ಲಿ ವಾಹನಗಳನ್ನು ಖರೀದಿಸುವುದರಿಂದ ಭವಿಷ್ಯದಲ್ಲಿ ಸಂತೋಷ ಮತ್ತು ಯಶಸ್ಸು ದೊರೆಯುತ್ತದೆ ಎಂಬ ನಂಬಿಕೆಯೂ ಇದೆ. ವಾಹನ ಖರೀದಿಸುವ ಯೋಜನೆಯಲ್ಲಿದ್ದರೆ, ಈ ದಿನ ತುಂಬಾ ಸೂಕ್ತ ಅಂತಾನೇ ಹೇಳಬಹುದು.

ಇದನ್ನೂ ಓದಿ
Image
ಬಿಳಿ ಚಾಕೊಲೇಟ್ ನಿಜವಾದ ಚಾಕೊಲೇಟಾ?
Image
ಬೇಸಿಗೆಯಲ್ಲಿ ಪ್ರತಿದಿನ 1 ಲೋಟ ಸೋಂಪು ನೀರನ್ನು ಕುಡಿಯಬೇಕಂತೆ
Image
ಬರಿಗಣ್ಣಿಗೆ ಕಾಣದ ಹೊಚ್ಚ ಹೊಸ ಬಣ್ಣವನ್ನು ಕಂಡು ಹಿಡಿದ ವಿಜ್ಞಾನಿಗಳು

ಬೆಳ್ಳಿ ಖರೀದಿ:

ಚಿನ್ನ ಮಾತ್ರವಲ್ಲ ಅಕ್ಷಯ ತೃತೀಯ ದಿನದಂದು ಬೆಳ್ಳಿ ವಸ್ತುಗಳನ್ನು ಸಹ ಖರೀದಿಸುವುದು ಕೂಡ ಒಳ್ಳೆಯದು. ಬೆಳ್ಳಿ ಲಕ್ಷ್ಮೀ ದೇವಿಯ ಸಂಕೇತವಾಗಿರುವುದರಿಂದ, ಈ ಶುಭ ದಿನದಂದು ಬೆಳ್ಳಿ ಖರೀದಿಸುವುದರಿಂದ ಜೀವನದಲ್ಲಿ ಸಮತೋಲನ ಮತ್ತು ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ ಎಂದು ನಂಬಲಾಗಿದೆ.

ಆಸ್ತಿ ಖರೀದಿ:

ಅಕ್ಷಯ ತೃತೀಯ  ದಿನದಂದು ಭೂಮಿ ಅಥವಾ ಯಾವುದೇ ಆಸ್ತಿಯನ್ನು ಖರೀದಿಸುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ. ಇದು ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದಲ್ಲದೆ, ಭವಿಷ್ಯದಲ್ಲಿ ಪ್ರಗತಿ ಮತ್ತು ಸಕಾರಾತ್ಮಕತೆಯನ್ನು ತರುತ್ತದೆ.

ಮಣ್ಣಿನ ಮಡಕೆ:

ಈ ದಿನದಂದು ಮಣ್ಣಿನ ಮಡಕೆ ಖರೀದಿಸುವುದು ಶುಭವೆಂದು ಪರಿಗಣಿಸಲಾಗಿದೆ. ಇದು ಸಂಪತ್ತು ಮತ್ತು ಆಸ್ತಿಯ ಸಂಕೇತವಾಗಿದೆ. ಅಕ್ಷಯ ತೃತೀಯ ದಿನ ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ಖರೀದಿಸಲು ಸಾಧ್ಯವಾಗದಿದ್ದರೆ ನೀವು ಮಣ್ಣಿನ ಪಾತ್ರೆ ಖರೀದಿಸಬಹುದು. ಮತ್ತು ಖರೀದಿಸಿದ ಈ ಪಾತ್ರೆಯನ್ನು ಪೂಜಿಸಿ, ಅದರಲ್ಲಿ ಅಕ್ಕಿ ಮತ್ತು ಅರಿಶಿನವನ್ನು ಹಾಕಿ ಒಂದು ವರ್ಷ ಮನೆಯಲ್ಲಿ ಇಟ್ಟರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆಯೂ ಇದೆ.  ಅಲ್ಲದೆ ಈ ದಿನ  ಹಿತ್ತಾಳೆ ಅಥವಾ ತಾಮ್ರದ ಪಾತ್ರೆಗಳನ್ನು ಖರೀದಿಸುವುದರಿಂದ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಕಾರಾತ್ಮಕ ಶಕ್ತಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಬಿಳಿ ಚಾಕೊಲೇಟ್ ನಿಜವಾದ ಚಾಕೊಲೇಟಾ? ಸತ್ಯಾಂಶ ಇಲ್ಲಿದೆ

ಹೊಸ ಬಟ್ಟೆಗಳು:

ಚಿನ್ನ ಬೆಳ್ಳಿ ಮಾತ್ರವಲ್ಲದೆ ಅಕ್ಷಯ ತೃತೀಯ ಹಬ್ಬದ ದಿನ ಹೊಸ ಬಟ್ಟೆಗಳನ್ನು ಖರೀದಿಸುವುದು ಕೂಡಾ ಒಳ್ಳೆಯದು. ಇದರಿಂದ  ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ ಎಂಬ ನಂಬಿಕೆ ಇದೆ.

ಕಲ್ಲುಪ್ಪು:

ಅಕ್ಷಯ ತೃತೀಯ ದಿನದಂದು ಕಲ್ಲುಪ್ಪನ್ನು ಖರೀದಿಸಿ ಮನೆಗೆ ತರುವುದು ಕೂಡಾ ಒಳ್ಳೆಯದು. ಇದು ನಕಾರಾತ್ಮಕತೆಯನ್ನು ತೆಗೆದು ಹಾಕುವುದರಿಂದ ಹೆಚ್ಚಿನ ಜನರು ತಮ್ಮ ಜೀವನದಿಂದ ಅಡೆತಡೆಗಳನ್ನು ತೊಡೆದು ಹಾಕುವ ಸಲುವಾಗಿ ಈ ಶುಭ ದಿನದಂದು ಕಲ್ಲುಪ್ಪನ್ನು ಖರೀದಿಸುತ್ತಾರೆ.

ತುಳಸಿ ಗಿಡ:

ಅಕ್ಷಯ ತೃತೀಯ ದಿನ ತುಳಸಿ ಗಿಡವನ್ನು ಮನೆಗೆ ತರುವುದು ಕೂಡಾ ತುಂಬಾನೇ ಒಳ್ಳೆಯದು. ತುಳಸಿ ಲಕ್ಷ್ಮಿಯ ರೂಪವಾಗಿರುವುದರಿಂದ ಆರೋಗ್ಯ, ಸಮೃದ್ಧಿಗಾಗಿ, ಉತ್ತಮ ಜೀನವಕ್ಕಾಗಿ ಈ ಶುಭ ದಿನ ತುಳಸಿ ಗಿಡವನ್ನು ಮನೆಗೆ ತರುವುದು ಒಳ್ಳೆಯದು ಎಂದು ನಂಬಲಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಮಾಂಗಲ್ಯ ಭಾಗ್ಯದ ಅರ್ಥವೇನು, ಸ್ತ್ರೀಯರಿಗೆ ಇದು ಶ್ರೀರಕ್ಷೆ ಹೇಗೆ?
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಈ ರಾಶಿಯವರು ಇಂದು ಸ್ವಂತ ಉದ್ಯೋಗದಲ್ಲಿ ಅಧಿಕ ಲಾಭ ಪಡೆಯುವರು
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
ಚಿತ್ರರಂಗದಲ್ಲಿ ಒಗ್ಗಟ್ಟಿನ ಕೊರತೆ ಇದೆ: ನಟಿ ರಮ್ಯಾ
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
‘ಎಕ್ಕ’ ಸಿನಿಮಾಕ್ಕೂ ಅಪ್ಪುವಿನ ‘ಜಾಕಿ’ ಸಿನಿಮಾಕ್ಕೂ ಲಿಂಕ್ ಏನು?
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಪುತ್ತೂರಿನಲ್ಲಿ ನೈತಿಕ ಪೊಲೀಸ್‌ಗಿರಿ: ಎಸ್​ಪಿ ಹೇಳಿದ್ದಿಷ್ಟು
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ಹುಬ್ಬಳ್ಳಿಯಲ್ಲಿ ವೇಶ್ಯಾವಾಟಿಕೆ ಜಾಲ: ಟಾಯ್ಲೆಟ್ ರೂಮ್​​ನಲ್ಲಿ ಸುರಂಗ ಮಾರ್ಗ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ನಾವು ಎಷ್ಟೇ ಬೆಳೆದರೂ ನಮ್ಮ ಕಾಲು ನೆಲದ ಮೇಲೆ ಇರಬೇಕು: ಹರ್ಷಿಕಾ ಪೂಣಚ್ಚ
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಬೀಗರ ಗಲಾಟೆ: ಕಪಾಳಕ್ಕೆ ಬಾರಿಸಿದ ಶಾಸಕ ಪ್ರಭು ಚೌಹಾಣ್
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ಹೇಳದೇ ಒಬಿಸಿ ಸಮಿತಿಗೆ ನೇಮಕ: ಈ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ
ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ, ಓರ್ವ ಸಾವು, ನಾಲ್ವರಿಗೆ ಗಂಭೀರ