AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Akshaya Tritiya 2025: ಅಕ್ಷಯ ತೃತೀಯ ದಿನದಂದು ಈ ವಸ್ತುಗಳನ್ನು ಖರೀದಿಸಲು ಮರೆಯದಿರಿ

ಅಕ್ಷಯ ತೃತೀಯ: ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಅಕ್ಷಯ ತೃತೀಯವೂ ಒಂದು. ಈ ಹಬ್ಬದ ದಿನದಂದು ಶುಭದ ಸಂಕೇತವಾಗಿ ಚಿನ್ನ, ಬೆಳ್ಲಿ ಖರೀದಿಸುವ ವಾಡಿಕೆ ಇದೆ. ಈ ಶುಭ ದಿನ ಚಿನ್ನ ಖರೀದಿ ಮಾಡುವುದರಿಂದ ಸಮೃದ್ಧಿ ಹಾಗೂ ಸಂಪತ್ತು ಹೆಚ್ಚುತ್ತದೆ ಎಂಬ ನಂಬಿಕೆಯಿಂದ ಹೆಚ್ಚಿನ ಜನರು ಚಿನ್ನ ಖರೀದಿ ಮಾಡುತ್ತಾರೆ. ಚಿನ್ನ ಮಾತ್ರವಲ್ಲ ಅಕ್ಷಯ ತೃತೀಯ ಹಬ್ಬದಂದು ಪುಸ್ತಕ, ಬಟ್ಟೆ ಸೇರಿದಂತೆ ಈ ಕೆಲವೊಂದಷ್ಟು ವಸ್ತುಗಳನ್ನು ಖದೀರಿ ಮಾಡುವುದು ಕೂಡಾ ಶುಭದ ಸಂಕೇತವಾಗಿದೆ. ಈ ಶುಭ ದಿನದಂದು ಈ ವಸ್ತುಗಳನ್ನು ಮನೆಗೆ ತರುವುದರಿಂದ ಅದೃಷ್ಟ ಎಂದು ಕೂಡ ನಂಬಲಾಗಿದೆ.

Akshaya Tritiya 2025: ಅಕ್ಷಯ ತೃತೀಯ ದಿನದಂದು ಈ ವಸ್ತುಗಳನ್ನು ಖರೀದಿಸಲು ಮರೆಯದಿರಿ
Akshaya Tritiya 2025Image Credit source: Getty Images
ಮಾಲಾಶ್ರೀ ಅಂಚನ್​
| Edited By: |

Updated on: Apr 24, 2025 | 3:51 PM

Share

ಹಿಂದೂಗಳ (Hindu) ಪವಿತ್ರ ಹಬ್ಬಗಳಲ್ಲಿ ಒಂದಾದ ಅಕ್ಷಯ ತೃತೀಯ (Akshaya Tritiya) ಹಬ್ಬಕ್ಕೆ ಇನ್ನೂ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ಪ್ರತಿ ವರ್ಷ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯಂದು ಅಕ್ಷಯ ತೃತೀಯ ಹಬ್ಬವನ್ನು ಆಚರಿಸಲಾಗುತ್ತದೆ. ಈ ದಿನ ಚಿನ್ನ (Gold)  ಖರೀದಿಸಿದರೆ ಮನೆ ಮತ್ತು ಕುಟುಂಬದಲ್ಲಿ ಸಮೃದ್ಧಿ ನೆಲೆಸುತ್ತದೆ ಹಾಗೂ ದಾನ ಮಾಡಿದರೆ ಶುಭವೆಂಬ, ಲಕ್ಷ್ಮೀ ದೇವಿಯ ಆಶೀರ್ವಾದ ಯಾವಾಗಲೂ ನಿಮ್ಮ ಕುಟುಂಬದ ಮೇಲೆ ಇರುತ್ತದೆ ಎಂಬ ನಂಬಿಕೆ ಕೂಡಾ ಇದೆ. ಹೀಗಾಗಿ ಈ ದಿನ ಹೆಚ್ಚಿನವರು ಈ ಶುಭ ದಿನದಂದು ಚಿನ್ನವನ್ನು ಖರೀದಿ ಮಾಡುತ್ತಾರೆ. ಚಿನ್ನ ಮಾತ್ರವಲ್ಲದೆ ಅಕ್ಷಯ ತೃತೀಯ ಹಬ್ಬದ ದಿನ ಈ ಕೆಲವೊಂದಿಷ್ಟು ಖರೀದಿಸುವುದು ಕೂಡಾ ಶುಭದ ಸಂಕೇತವಂತೆ. ಹಾಗಿದ್ರೆ ಅಕ್ಷಯ ತೃತೀಯ ಹಬ್ಬದ ದಿನ ಯಾವ ವಸ್ತುಗಳನ್ನು ಖರೀದಿಸಿದರೆ ಒಳ್ಳೆಯದು ಎಂಬ ಮಾಹಿತಿ ಇಲ್ಲಿದೆ ನೋಡಿ

ಅಕ್ಷಯ ತೃತೀಯ ದಿನದಂದು ಈ ವಸ್ತುಗಳನ್ನು ಖರೀದಿಸಲು ಮರೆಯದಿರಿ:

ಅಕ್ಷಯ ತೃತೀಯದಂದು ಚಿನ್ನ:

ಅಕ್ಷಯ ತೃತೀಯ ಹಬ್ಬದ ದಿನ ಚಿನ್ನ ಖರೀದಿಸುವುದು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಆದ್ದರಿಂದ ಈ ದಿನ ಹೆಚ್ಚಿನವರು ಚಿನ್ನದ ನಾಣ್ಯ, ಸಣ್ಣ ಆಭರಣಗಳು ಸೇರಿದಂತೆ ಶುಭ ಮತ್ತು ಸಮೃದ್ಧಿಯ ಸಂಕೇತವಾಗಿ ಚಿನ್ನವನ್ನು ಖರೀದಿಸುತ್ತಾರೆ.

ವಾಹನ ಖರೀದಿ:

ನೀವು ಹೊಸ ವಾಹನ ಖರೀದಿಸುವ ಬಗ್ಗೆ ಯೋಚಿಸುತ್ತಿದ್ದರೆ, ಅಕ್ಷಯ ತೃತೀಯಕ್ಕಿಂತ ಉತ್ತಮವಾದ ದಿನ ಇನ್ನೊಂದಿಲ್ಲ. ಈ ದಿನದಂದು ಶುಭ ಸಮಯದಲ್ಲಿ ವಾಹನಗಳನ್ನು ಖರೀದಿಸುವುದರಿಂದ ಭವಿಷ್ಯದಲ್ಲಿ ಸಂತೋಷ ಮತ್ತು ಯಶಸ್ಸು ದೊರೆಯುತ್ತದೆ ಎಂಬ ನಂಬಿಕೆಯೂ ಇದೆ. ವಾಹನ ಖರೀದಿಸುವ ಯೋಜನೆಯಲ್ಲಿದ್ದರೆ, ಈ ದಿನ ತುಂಬಾ ಸೂಕ್ತ ಅಂತಾನೇ ಹೇಳಬಹುದು.

ಇದನ್ನೂ ಓದಿ
Image
ಬಿಳಿ ಚಾಕೊಲೇಟ್ ನಿಜವಾದ ಚಾಕೊಲೇಟಾ?
Image
ಬೇಸಿಗೆಯಲ್ಲಿ ಪ್ರತಿದಿನ 1 ಲೋಟ ಸೋಂಪು ನೀರನ್ನು ಕುಡಿಯಬೇಕಂತೆ
Image
ಬರಿಗಣ್ಣಿಗೆ ಕಾಣದ ಹೊಚ್ಚ ಹೊಸ ಬಣ್ಣವನ್ನು ಕಂಡು ಹಿಡಿದ ವಿಜ್ಞಾನಿಗಳು

ಬೆಳ್ಳಿ ಖರೀದಿ:

ಚಿನ್ನ ಮಾತ್ರವಲ್ಲ ಅಕ್ಷಯ ತೃತೀಯ ದಿನದಂದು ಬೆಳ್ಳಿ ವಸ್ತುಗಳನ್ನು ಸಹ ಖರೀದಿಸುವುದು ಕೂಡ ಒಳ್ಳೆಯದು. ಬೆಳ್ಳಿ ಲಕ್ಷ್ಮೀ ದೇವಿಯ ಸಂಕೇತವಾಗಿರುವುದರಿಂದ, ಈ ಶುಭ ದಿನದಂದು ಬೆಳ್ಳಿ ಖರೀದಿಸುವುದರಿಂದ ಜೀವನದಲ್ಲಿ ಸಮತೋಲನ ಮತ್ತು ಆರ್ಥಿಕ ಸ್ಥಿತಿ ಬಲಗೊಳ್ಳುತ್ತದೆ ಎಂದು ನಂಬಲಾಗಿದೆ.

ಆಸ್ತಿ ಖರೀದಿ:

ಅಕ್ಷಯ ತೃತೀಯ  ದಿನದಂದು ಭೂಮಿ ಅಥವಾ ಯಾವುದೇ ಆಸ್ತಿಯನ್ನು ಖರೀದಿಸುವುದು ಬಹಳ ಶುಭವೆಂದು ಪರಿಗಣಿಸಲಾಗಿದೆ. ಇದು ಆರ್ಥಿಕ ಸ್ಥಿತಿಯನ್ನು ಬಲಪಡಿಸುವುದಲ್ಲದೆ, ಭವಿಷ್ಯದಲ್ಲಿ ಪ್ರಗತಿ ಮತ್ತು ಸಕಾರಾತ್ಮಕತೆಯನ್ನು ತರುತ್ತದೆ.

ಮಣ್ಣಿನ ಮಡಕೆ:

ಈ ದಿನದಂದು ಮಣ್ಣಿನ ಮಡಕೆ ಖರೀದಿಸುವುದು ಶುಭವೆಂದು ಪರಿಗಣಿಸಲಾಗಿದೆ. ಇದು ಸಂಪತ್ತು ಮತ್ತು ಆಸ್ತಿಯ ಸಂಕೇತವಾಗಿದೆ. ಅಕ್ಷಯ ತೃತೀಯ ದಿನ ಚಿನ್ನ ಮತ್ತು ಬೆಳ್ಳಿಯ ವಸ್ತುಗಳನ್ನು ಖರೀದಿಸಲು ಸಾಧ್ಯವಾಗದಿದ್ದರೆ ನೀವು ಮಣ್ಣಿನ ಪಾತ್ರೆ ಖರೀದಿಸಬಹುದು. ಮತ್ತು ಖರೀದಿಸಿದ ಈ ಪಾತ್ರೆಯನ್ನು ಪೂಜಿಸಿ, ಅದರಲ್ಲಿ ಅಕ್ಕಿ ಮತ್ತು ಅರಿಶಿನವನ್ನು ಹಾಕಿ ಒಂದು ವರ್ಷ ಮನೆಯಲ್ಲಿ ಇಟ್ಟರೆ ಸಂಪತ್ತು ವೃದ್ಧಿಯಾಗುತ್ತದೆ ಎಂಬ ನಂಬಿಕೆಯೂ ಇದೆ.  ಅಲ್ಲದೆ ಈ ದಿನ  ಹಿತ್ತಾಳೆ ಅಥವಾ ತಾಮ್ರದ ಪಾತ್ರೆಗಳನ್ನು ಖರೀದಿಸುವುದರಿಂದ ಮನೆಯಲ್ಲಿ ಸಂತೋಷ, ಶಾಂತಿ ಮತ್ತು ಸಕಾರಾತ್ಮಕ ಶಕ್ತಿ ನೆಲೆಸುತ್ತದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ: ಬಿಳಿ ಚಾಕೊಲೇಟ್ ನಿಜವಾದ ಚಾಕೊಲೇಟಾ? ಸತ್ಯಾಂಶ ಇಲ್ಲಿದೆ

ಹೊಸ ಬಟ್ಟೆಗಳು:

ಚಿನ್ನ ಬೆಳ್ಳಿ ಮಾತ್ರವಲ್ಲದೆ ಅಕ್ಷಯ ತೃತೀಯ ಹಬ್ಬದ ದಿನ ಹೊಸ ಬಟ್ಟೆಗಳನ್ನು ಖರೀದಿಸುವುದು ಕೂಡಾ ಒಳ್ಳೆಯದು. ಇದರಿಂದ  ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಬರುತ್ತದೆ ಎಂಬ ನಂಬಿಕೆ ಇದೆ.

ಕಲ್ಲುಪ್ಪು:

ಅಕ್ಷಯ ತೃತೀಯ ದಿನದಂದು ಕಲ್ಲುಪ್ಪನ್ನು ಖರೀದಿಸಿ ಮನೆಗೆ ತರುವುದು ಕೂಡಾ ಒಳ್ಳೆಯದು. ಇದು ನಕಾರಾತ್ಮಕತೆಯನ್ನು ತೆಗೆದು ಹಾಕುವುದರಿಂದ ಹೆಚ್ಚಿನ ಜನರು ತಮ್ಮ ಜೀವನದಿಂದ ಅಡೆತಡೆಗಳನ್ನು ತೊಡೆದು ಹಾಕುವ ಸಲುವಾಗಿ ಈ ಶುಭ ದಿನದಂದು ಕಲ್ಲುಪ್ಪನ್ನು ಖರೀದಿಸುತ್ತಾರೆ.

ತುಳಸಿ ಗಿಡ:

ಅಕ್ಷಯ ತೃತೀಯ ದಿನ ತುಳಸಿ ಗಿಡವನ್ನು ಮನೆಗೆ ತರುವುದು ಕೂಡಾ ತುಂಬಾನೇ ಒಳ್ಳೆಯದು. ತುಳಸಿ ಲಕ್ಷ್ಮಿಯ ರೂಪವಾಗಿರುವುದರಿಂದ ಆರೋಗ್ಯ, ಸಮೃದ್ಧಿಗಾಗಿ, ಉತ್ತಮ ಜೀನವಕ್ಕಾಗಿ ಈ ಶುಭ ದಿನ ತುಳಸಿ ಗಿಡವನ್ನು ಮನೆಗೆ ತರುವುದು ಒಳ್ಳೆಯದು ಎಂದು ನಂಬಲಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ