AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾರ್ಡ್​ವರ್ಕ್ ಜತೆಗೆ ಸ್ಮಾರ್ಟ್​ ವರ್ಕ್​ ಕೂಡಾ ಮುಖ್ಯ, ಉತ್ಪಾದಕತೆ ಹೆಚ್ಚಿಸುವ 5 ಸಲಹೆಗಳು ಇಲ್ಲಿವೆ

ಒಂದೆಡೆ ನಾವು ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್​ ಆಗಿರಿಸಿಕೊಳ್ಳಲು ಹಲವು ಪ್ರಯತ್ನಗಳನ್ನು ಮಾಡುತ್ತೇವೆ. ಮತ್ತೊಂದೆಡೆ ಮಾನಸಿಕ ಆರೋಗ್ಯದ ವಿಚಾರಕ್ಕೆ ಬಂದಾಗ ನಮಗೆ ಯಾವುದರಿಂದ ಸಂತೋಷ ಸಿಗುವುದೋ ಆ ವಿಷಯವನ್ನು ನಿರ್ಲಕ್ಷಿಸುತ್ತೇವೆ.

ಹಾರ್ಡ್​ವರ್ಕ್ ಜತೆಗೆ ಸ್ಮಾರ್ಟ್​ ವರ್ಕ್​ ಕೂಡಾ ಮುಖ್ಯ, ಉತ್ಪಾದಕತೆ ಹೆಚ್ಚಿಸುವ 5 ಸಲಹೆಗಳು ಇಲ್ಲಿವೆ
ವರ್ಕ್​
ನಯನಾ ರಾಜೀವ್
|

Updated on: May 02, 2023 | 9:00 AM

Share

ಒಂದೆಡೆ ನಾವು ದೇಹವನ್ನು ಆರೋಗ್ಯಕರವಾಗಿ ಮತ್ತು ಫಿಟ್​ ಆಗಿರಿಸಿಕೊಳ್ಳಲು ಹಲವು ಪ್ರಯತ್ನಗಳನ್ನು ಮಾಡುತ್ತೇವೆ. ಮತ್ತೊಂದೆಡೆ ಮಾನಸಿಕ ಆರೋಗ್ಯದ ವಿಚಾರಕ್ಕೆ ಬಂದಾಗ ನಮಗೆ ಯಾವುದರಿಂದ ಸಂತೋಷ ಸಿಗುವುದೋ ಆ ವಿಷಯವನ್ನು ನಿರ್ಲಕ್ಷಿಸುತ್ತೇವೆ. ಮನಸ್ಸನ್ನು ಒಂದೆಡೆ ಕೇಂದ್ರೀಕರಿಸಲು ಸಾಧ್ಯವಾಗುವುದಿಲ್ಲ. ನಿಧಾನವಾಗಿ ಅದರ ಪರಿಣಾಮ ನಮ್ಮ ಕೆಲಸದ ದಕ್ಷತೆಯ ಮೇಲೆ ಗೋಚರಿಸುತ್ತದೆ. ಕ್ರಮೇಣವಾಗಿ ಇದು ಉತ್ಪಾದಕತೆಯ ಮೇಲೂ ಪರಿಣಾಮ ಬೀರುತ್ತದೆ.

ನಿಮ್ಮ ಉತ್ಪಾದಕತೆಯನ್ನು ಹೆಚ್ಚಿಸಲು ಸಲಹೆಗಳು ಇಲ್ಲಿವೆ

ಕೆಲಸದ ನಡುವೆ ವಿರಾಮ ತೆಗೆದುಕೊಳ್ಳಿ ದಿನವಿಡೀ ಕೆಲಸ ಮಾಡುತ್ತಿದ್ದರೆ ಕೆಲಸವೇನೋ ಮುಗಿಸಿದ ಖುಷಿ ಸಿಗಬಹುದು ಆದರೆ, ನೀವು ಅಂದುಕೊಂಡ ರೀತಿಯಲ್ಲಿ ಆಗಿರುವುದಿಲ್ಲ, ಹಾಗಾಗಿ ನೀವು ಉಲ್ಲಾಸ ಅನುಭವಿಸುವುದು ಮುಖ್ಯ, ಕೆಲಸದ ನಡುವೆ ಆಗಾಗ ಬಿಡುವು ಪಡೆಯಬೇಕು.

ಒಂದೇ ಸಮಯದಲ್ಲಿ ಹಲವು ಕಾರ್ಯಗಳನ್ನು ಮಾಡಬೇಡಿ ನೀವು ನಿಷ್ಠೆಯಿಂದ ಕೆಲಸ ಮಾಡಿದರೆ ನಿಮಗೆ ಯಶಸ್ಸು ಖಂಡಿತಾ ಸಿಗುವುದು, ಲ್ಯಾಪ್​ಟಾಪ್​ ಮುಂದೆ ಹಲವು ಟಾಸ್ಕ್​ಗಳನ್ನು ಒಟ್ಟಾಗಿ ಮಾಡುವುದರಿಂದ ಮನಸ್ಸು ಬೇರೆಡೆಗೆ ತಿರುಗಲು ಪ್ರಾರಂಭಿಸುತ್ತದೆ. ಒಂದೇ ಕಾರ್ಯದ ಮೇಲೆ ಗಮನಹರಿಸಲು ಸಾಧ್ಯವಾಗುವುದಿಲ್ಲ.

ಸಾಕಷ್ಟು ನಿದ್ರೆ ಅಗತ್ಯ ನೀವು 7,8 ತಾಸುಗಳ ಕಾಲ ನಿದ್ರೆ ಮಾಡಿದರೆ, ದಿನವಿಡೀ ಆನಂದವಾಗಿರುತ್ತೀರಿ ಮತ್ತು ಸಮಯಕ್ಕೆ ಮುಂಚಿತವಾಗಿ ಕೆಲಸವನ್ನು ಮುಗಿಸಲು ಸಾಧ್ಯವಾಗುತ್ತದೆ. ತಡವಾಗಿ ಮಲಗಿ ಬೇಗ ಎದ್ದರೆ ಅದು ನಿಮ್ಮ ದಿನಚರಿಯ ಮೇಲೆ ಪರಿಣಾಮ ಬೀರುತ್ತದೆ ಹೀಗಾಗಿ ಪೂರ್ಣ ನಿದ್ರೆ ಅಗತ್ಯ.

ಧ್ಯಾನ, ವ್ಯಾಯಾಮವಿರಲಿ ಬೆಳಗ್ಗೆ ಎದ್ದ ನಂತರ ನೀವು ಧ್ಯಾನ ಮಾಡಿದರೆ ಸ್ವಯಂ ಪ್ರೀತಿ, ಸ್ವಯಂ ನಿಯಂತ್ರಣ ಹೆಚ್ಚುತ್ತದೆ. ಧ್ಯಾನದ ನಂತರ ದೇಹವು ಸಕ್ರಿಯವಾಗುತ್ತದೆ. ಪ್ರತಿಯೊಂದು ಕೆಲಸವನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಲು ಸಾಧ್ಯವಾಗುತ್ತದೆ. ಇದರಿಂದ ನಿಮ್ಮ ನಡವಳಿಕೆಯಲ್ಲಿ ಸ್ಪಷ್ಟತೆ ಕಾಣುತ್ತದೆ.

ಅತಿಯಾದ ಕೆಲಸದ ಹೊರೆ ತಪ್ಪಿಸಿ

ಒಂದು ದಿನದಲ್ಲಿ ನೀವು 15 ರಿಂದ 20 ಕಾರ್ಯಗಳನ್ನು ಮಾಡಿದರೆ, ನಂತರ ನೀವು ಹೆಚ್ಚಿನ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಯಾವ ದಿನ ಯಾವ ಕೆಲಸವನ್ನು ಮಾಡುವುದು ಹೆಚ್ಚು ಮುಖ್ಯ ಎಂಬುದನ್ನು ಅರ್ಥಮಾಡಿಕೊಳ್ಳಿ. ಇದು ನಮ್ಮ ಸಮಯವನ್ನು ಉಳಿಸುವುದಲ್ಲದೆ ಹೆಚ್ಚಿನ ಉತ್ಪಾದನೆ ಕಾರಣವಾಗುತ್ತದೆ. ​ಹೀಗಾಗಿ ಒಂದೇ ಹೆಚ್ಚು ಕೆಲಸದ ಹೆಚ್ಚು ಭಾರವನ್ನು ಹೊರುವುದು ಬೇಡ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ