AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amarnath Yatra 2023: ಅಮರನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ

ನೀವು ಕೂಡ ಅಮರನಾಥಕ್ಕೆ ಭೇಟಿ ನೀಡುವ ಪ್ಲಾನ್​​ ಯೋಚಿಸಿದ್ದರೆ ಹೋಗುವ ಮೊದಲು ಅಮರನಾಥ ದೇವಾಲಯದ ಬಗ್ಗೆ ಕೆಲವು ಆಸಕ್ತಿದಾಯಕ ಸಂಗತಿಯನ್ನು ಇಲ್ಲಿ ತಿಳಿದುಕೊಳ್ಳಿ.

Amarnath Yatra 2023: ಅಮರನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು ಇಲ್ಲಿವೆ
Amarnath Yatra 2023Image Credit source: Explore Our India
ಅಕ್ಷತಾ ವರ್ಕಾಡಿ
|

Updated on: Jun 23, 2023 | 1:47 PM

Share

ಅಮರನಾಥ ಯಾತ್ರೆ(Amarnath Yatra) ಯು ಭಾರತದ ಅತ್ಯಂತ ಪವಿತ್ರ ತೀರ್ಥಯಾತ್ರೆಗಳಲ್ಲಿ ಒಂದಾಗಿದೆ. ಈ ಪವಿತ್ರ ಸ್ಥಳವು ಸಮುದ್ರ ಮಟ್ಟದಿಂದ 13,600 ಅಡಿ ಎತ್ತರದಲ್ಲಿದೆ. ಈ ವರ್ಷ, ಅಮರನಾಥ ಯಾತ್ರೆಯು ಜುಲೈ 1 ರಂದು ಪ್ರಾರಂಭವಾಗಲಿದ್ದು, 62 ದಿನಗಳ ಕಾಲ ಯಾತ್ರೆ ನಡೆಯಲಿದೆ. ಅಮರನಾಥ ಯಾತ್ರೆಯು ಆಗಸ್ಟ್ 31 ರಂದು ಮುಕ್ತಾಯಗೊಳ್ಳಲಿದೆ. ಏಪ್ರಿಲ್ 17 ರಂದು ನೋಂದಣಿ ಪ್ರಾರಂಭವಾಗಿದೆ. ನೀವು ಕೂಡ ಅಮರನಾಥಕ್ಕೆ ಭೇಟಿ ನೀಡುವ ಪ್ಲಾನ್​​ ಯೋಚಿಸಿದ್ದರೆ ಹೋಗುವ ಮೊದಲು ಅಮರನಾಥ ದೇವಾಲಯದ ಬಗ್ಗೆ ಕೆಲವು ಆಸಕ್ತಿದಾಯಕ ಸಂಗತಿಯನ್ನು ಇಲ್ಲಿ ತಿಳಿದುಕೊಳ್ಳಿ.

ಅಮರನಾಥ ದೇವಾಲಯದ ಕೆಲವು ಆಸಕ್ತಿದಾಯಕ ಸಂಗತಿಗಳು:

  • ಅಮರನಾಥ ದೇವಾಲಯವು ಭಾರತದ ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಹಿಂದೂ ದೇವಾಲಯವಾಗಿದೆ. ಅಮರನಾಥ ಗುಹೆಯು 3,888 ಮೀ ಎತ್ತರದಲ್ಲಿದೆ ಮತ್ತು ಪಹಲ್ಗಾಮ್‌ನಿಂದ 45 ಕಿಮೀ ಮತ್ತು ಶ್ರೀನಗರದಿಂದ 141 ಕಿಮೀ ದೂರದಲ್ಲಿದೆ.
  • ಅಬುಲ್ ಫಜಲ್ ತನ್ನ ಅಮರ ಕೃತಿ ‘ಐನ್-ಇ-ಅಕ್ಬರ್’ ನಲ್ಲಿ ಈ ದೇವಾಲಯವನ್ನು ಉಲ್ಲೇಖಿಸಿದ್ದಾರೆ ಮತ್ತು ಈ ಸ್ಥಳವನ್ನು ಯಾತ್ರಿಕರಲ್ಲಿ ಅತ್ಯಂತ ಜನಪ್ರಿಯ ತಾಣವೆಂದು ಕರೆದಿದ್ದಾರೆ.

ಇದನ್ನೂ ಓದಿ: ರಾಜ್ಯಾದ್ಯಂತ ಜೂ.27ರಂದು ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

  • ಮಹಾನ್ ಸನ್ಯಾಸಿ ಸ್ವಾಮಿ ವಿವೇಕಾನಂದರು 1898 ರಲ್ಲಿ ಈ ಗುಹೆಗೆ ಭೇಟಿ ನೀಡಿದ್ದರು ಮತ್ತು ಅವರು ಅಲ್ಲಿನ ಸೌಂದರ್ಯದಿಂದ ಮಂತ್ರಮುಗ್ಧರಾಗಿದ್ದರು. ಅದರ ಭೇಟಿಗಳ ವಿವರವನ್ನು ಸೋದರಿ ನಿವೇದಿತಾ ಅವರ ‘ಸ್ವಾಮಿ ವಿವೇಕಾನಂದರೊಂದಿಗೆ ಕೆಲವು ಅಲೆದಾಟಗಳ ಟಿಪ್ಪಣಿಗಳು'(Notes of Some Wanderings with the Swami Vivekananda) ಕೃತಿಯಲ್ಲಿ ಕಾಣಬಹುದು.
  • ಕೆಲವು ಶಿವ ಭಕ್ತರು ಅಮರನಾಥ ಯಾತ್ರೆಯನ್ನು ಸ್ವರ್ಗದ ದಾರಿ ಎಂದು ಕರೆದರೆ, ಇನ್ನೂ ಕೆಲವರು ಮೋಕ್ಷದ ಸ್ಥಳ ಎಂದು ಕರೆಯುತ್ತಾರೆ. ಅಷ್ಟರ ಮಟ್ಟಿಗೆ ಭಕ್ತರ ನಂಬಿಕೆಯ ಪಾವಿತ್ರ್ಯತೆಯುಳ್ಳ ತಾಣವಾಗಿದೆ.
  • 11 ನೇ ಶತಮಾನದ ರಾಣಿ ಸೂರ್ಯಮತಿ ಈ ದೇವಾಲಯಕ್ಕೆ ತ್ರಿಶೂಲಗಳು, ಬಾಣ ಲಿಂಗಗಳು ಮತ್ತು ಇತರ ಪವಿತ್ರ ಲಾಂಛನಗಳನ್ನು ಉಡುಗೊರೆಯಾಗಿ ನೀಡಿದ್ದಾಳೆ ಎಂಬುದು ನಂಬಿಕೆಯಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ