AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Anant Ambani Weight Gain: ಮಗ ಅನಂತ್ ಅಂಬಾನಿ ತೂಕ ಮತ್ತೆ ಹೆಚ್ಚಾಗಿರುವ ಬಗ್ಗೆ ನೀತಾ ಅಂಬಾನಿ ಹೇಳಿದ್ದೇನು?

ನಿಶ್ಚಿತಾರ್ಥದ ಸಮಯದ ಹಲವಾರು ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಮತ್ತೆ ತೂಕ ಹೆಚ್ಚಳಗೊಂಡ ಅನಂತ್ ಅಂಬಾನಿಯವರ ಸಾಕಷ್ಟು ಸುದ್ದಿ ಹರಿದಾಡುತ್ತಿದೆ.

Anant Ambani Weight Gain: ಮಗ ಅನಂತ್ ಅಂಬಾನಿ ತೂಕ ಮತ್ತೆ ಹೆಚ್ಚಾಗಿರುವ ಬಗ್ಗೆ ನೀತಾ ಅಂಬಾನಿ ಹೇಳಿದ್ದೇನು?
ಅನಂತ್ ಅಂಬಾನಿ
Follow us
ಅಕ್ಷತಾ ವರ್ಕಾಡಿ
|

Updated on:Jan 25, 2023 | 5:06 PM

ಮುಕೇಶ್ ಅಂಬಾನಿ(Mukesh Ambani) ಮತ್ತು ನೀತಾ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ(Anant Ambani) ರಾಧಿಕಾ ಮರ್ಚೆಂಟ್ ನಿಶ್ಚಿತಾರ್ಥ ಇತ್ತೀಚೆಗಷ್ಟೇ ಅದ್ದೂರಿಯಾಗಿ ನಡೆದಿದೆ. ನಿಶ್ಚಿತಾರ್ಥದ ಸಮಯದ ಹಲವಾರು ವೀಡಿಯೊಗಳು ಮತ್ತು ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬೆನ್ನಲ್ಲೇ ಮತ್ತೆ ತೂಕ ಹೆಚ್ಚಳಗೊಂಡ ಅನಂತ್ ಅಂಬಾನಿಯವರ ಸಾಕಷ್ಟು ಸುದ್ದಿ ಹರಿದಾಡುತ್ತಿದೆ. 2016 ರಲ್ಲಿ ಎಲ್ಲರಿಗೆ ಮಾದರಿಯಾಗುವ ರೀತಿಯಲ್ಲಿ 200 ಕೆಜಿಯಿಂದ 100 ಕೆಜಿಯಷ್ಟು ತೂಕ ಕಳೆದುಕೊಂಡಿದ್ದ ಅನಂತ್ ಅಂಬಾನಿ, ಈಗ ಮತ್ತೆ ಅದೇ ರೀತಿ ತೂಕ ಹೆಚ್ಚಾಗಿದೆ. ಎಷ್ಟೇ ದುಡ್ಡಿದ್ದರೂ ಆರೋಗ್ಯವನ್ನು ದುಡ್ಡು ಕೊಟ್ಟು ಖರೀದಿಸಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಪ್ರತಿಕ್ರಿಯಿಸಿದ್ದಾರೆ. ಅನಂತ್ ಅಂಬಾನಿ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿತ್ತು, ಈ ಕಾರಣದಿಂದ ಸ್ಥೂಲಕಾಯತೆಯಿಂದ ಬಳಲುತ್ತಿದ್ದಾನೆ ಎಂದು ತಾಯಿ ನೀತಾ ಅಂಬಾನಿ ತಿಳಿಸಿದ್ದಾರೆ.

ಅನಂತ್ ಅವರ ತೂಕ ಹೆಚ್ಚಳದ ಬಗ್ಗೆ ನೀತಾ ಅಂಬಾನಿ ನೀಡಿರುವ ಮಾಹಿತಿ:

2016 ರಲ್ಲಿ ತೂಕ ಇಳಿಸಿ ಸಾಕಷ್ಟು ಜನರಿಗೆ ಮಾದರಿಯಾಗಿದ್ದರು. 2017 ರಲ್ಲಿ, ಟೈಮ್ಸ್ ಆಫ್ ಇಂಡಿಯಾಗೆ ನೀಡಿದ ಸಂದರ್ಶನದಲ್ಲಿ, ಅನಂತ್ ಆರೋಗ್ಯ ಸಮಸ್ಯೆ ಅಂದರೆ ಉಬ್ಬಸದಿಂದ ಬಳಲುತ್ತಿದ್ದರು, ಆ ಸಮಯದಲ್ಲಿ ಸಾಕಷ್ಟು ಔಷದಿಗಳನ್ನು ನೀಡುತ್ತಿದ್ದ ಕಾರಣ, ಈ ಸ್ಟೀರಾಯ್ಡ್ ಗಳ ಅಡ್ಡ ಪರಿಣಾಮದಿಂದಾಗಿ ಸ್ಥೂಲಕಾಯತೆಯಿಂದ ಬಳಲುತ್ತಿದ್ದಾರೆ. ಆಸ್ತಮಾ ಚಿಕಿತ್ಸೆಯು ಬಹಳಷ್ಟು ತೂಕವನ್ನು ಹೆಚ್ಚಿಸಿತು ಎಂದು ಮಗನ ಆರೋಗ್ಯದ ಕುರಿತು ನೀತಾ ಅಂಬಾನಿ ಹೇಳಿಕೊಂಡಿದ್ದಾರೆ.ವರದಿಗಳ ಪ್ರಕಾರ, ಅನಂತ್ ಪ್ರತಿದಿನ ಐದು-ಆರು ಗಂಟೆಗಳ ಕಾಲ ವ್ಯಾಯಾಮ ಮಾಡುತ್ತಾರೆ ಮತ್ತು ಅವರ ವ್ಯಾಯಾಮದ ನಿಯಮವು 21 ಕಿಮೀ ನಡಿಗೆ ನಂತರ ಯೋಗ, ತೂಕ ತರಬೇತಿ, ಕ್ರಿಯಾತ್ಮಕ ತರಬೇತಿ ಮತ್ತು ಹೆಚ್ಚಿನ ತೀವ್ರತೆಯ ಕಾರ್ಡಿಯೋ ವ್ಯಾಯಾಮಗಳನ್ನು ಒಳಗೊಂಡಿದೆ.

ಇದನ್ನೂ ಓದಿ: ಹೆರಿಗೆಯ ನಂತರ ತಕ್ಷಣ ಆರೋಗ್ಯಕರವಾಗಿ ತೂಕ ಇಳಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ಇನ್ನೂ ಸ್ಥೂಲಕಾಯತೆಯಿಂದ ವಿರುದ್ಧ ಹೋರಾಡುತ್ತಿದ್ದು, ಇಂತಹ ಸಮಸ್ಯೆಯನ್ನು ಹೊಂದಿರುವವರು ಸುತ್ತಮುತ್ತ ಅನೇಕರಿದ್ದಾರೆ. ಇದರಿಂದಾಗಿ ನಿಮ್ಮ ದೇಹದ ಕುರಿತು ಅಸಮಧಾನ ಇಟ್ಟುಕೊಳ್ಳದಿರಿ. ಇದು ಮಾನಸಿಕವಾಗಿ ಕುಗ್ಗುವಂತೆ ಮಾಡುತ್ತದೆ. ಆದ್ದರಿಂದ ಇಂತಹ ಸಮಸ್ಯೆಯಿಂದ ಬಳಲುತ್ತಿರುವವರಿಗೆ ಕುಟುಂಬ ತೂಕ ಕಳೆದುಕೊಳ್ಳಲು ಪ್ರೇರೇಪಿಸಬೇಕು ಎಂದು ನೀತಾ ಅಂಬಾನಿ ಹೇಳಿಕೊಂಡಿದ್ದಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: 

Published On - 5:04 pm, Wed, 25 January 23

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್​ ಟ್ಯಾಕ್ಸಿ ಸೀಜ್!
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ