AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಯಲ್ಲಿ ಇರುವೆಗಳ ಸಮಸ್ಯೆ ಕಾಡುತ್ತಿದೆಯೇ? ರಾಸಾಯನಿಕಗಳ ಬಳಕೆ ಮಾಡದೆ ಸುಲಭವಾಗಿ ಅವುಗಳನ್ನು ಓಡಿಸಿ

ಬಿಳಿ ವಿನೆಗರ್ ಅನ್ನು ಇರುವೆಗಳಿರುವಲ್ಲಿ ಸಿಂಪಡಿಸಬಹುದು ಮತ್ತು ಉತ್ತಮ ಫಲಿತಾಂಶವನ್ನು ಕಾಣಬಹುದು.

ಮನೆಯಲ್ಲಿ ಇರುವೆಗಳ ಸಮಸ್ಯೆ ಕಾಡುತ್ತಿದೆಯೇ? ರಾಸಾಯನಿಕಗಳ ಬಳಕೆ ಮಾಡದೆ ಸುಲಭವಾಗಿ ಅವುಗಳನ್ನು ಓಡಿಸಿ
ಮನೆಯಲ್ಲಿ ಇರುವೆಗಳ ಸಮಸ್ಯೆ ಕಾಡುತ್ತಿದೆಯೇ?
Follow us
ಸಾಧು ಶ್ರೀನಾಥ್​
|

Updated on:May 15, 2023 | 10:49 AM

ಇರುವೆಗಳಿಗೆ ಪರಿಹಾರಗಳು: ಅನೇಕ ಮನೆಗಳಲ್ಲಿ, ಅಡುಗೆಮನೆ ಅಥವಾ ಆಹಾರವನ್ನು ಸಂಗ್ರಹಿಸುವ ಪ್ರದೇಶವು ಸೋಂಕಿತ ಪ್ರದೇಶವಾಗಿರುತ್ತದೆ. ಈ ಇರುವೆಗಳ ಹಿಡಿತದಿಂದ ಪಾರಾಗಲು (Ants Problem) ಹಲವು ರೀತಿಯ ಸ್ಪ್ರೇಗಳನ್ನು ಬಳಸಲಾಗುತ್ತದೆ. ಆದರೆ ಯಾವುದೇ ಫಲಿತಾಂಶವಿಲ್ಲದೆ ಗೃಹಿಣಿಯರು ಹತಾಶರಾಗುತ್ತಾರೆ. ಅಂತಹವರಿಗಾಗಿ ಇರುವೆಗಳ ಹಿಡಿತದಿಂದ ಪಾರಾಗಲು ಬೆಸ್ಟ್ ಟಿಪ್ಸ್ ತಂದಿದ್ದೇವೆ. ಈ ಟಿಪ್ಸ್ ಪ್ರಕಾರ ಯಾವುದೇ ಕೆಮಿಕಲ್ (chemicals) ಬಳಸಬೇಕಿಲ್ಲ.. ಅಡುಗೆ ಮನೆಯ ಸಾಮಾಗ್ರಿಗಳನ್ನು ಸಮಂಜಸವಾಗಿ ಬಳಸಿದರೆ ಸಾಕು (kicthen hacks).

ಕರಿಮೆಣಸು ಇರುವೆಗಳನ್ನು ಹಿಮ್ಮೆಟ್ಟಿಸಲು ಉತ್ತಮವಾಗಿ ಸಹಾಯ ಮಾಡುತ್ತದೆ. ಹೌದು, ಕಾಳುಮೆಣಸಿನ ಕಾಟಕ್ಕೆ ಇರುವೆಗಳು ಓಡಿಹೋಗುವುದು ಖಚಿತ. ಅದಕ್ಕಾಗಿ ಅಡುಗೆ ಮನೆಯಲ್ಲಿ ಇರುವೆ ಸ್ಪ್ರೇ ಬದಲು ಅಲ್ಲೊಂದು ಇಲ್ಲೊಂದು ಕಾಳುಮೆಣಸನ್ನು ಹಾಕಿದರೆ ಪರವಾಗಿಲ್ಲ.

ಇರುವೆಗಳನ್ನು ತೊಡೆದುಹಾಕಲು, ಒಂದು ಬಾಟಲಿಯಲ್ಲಿ ಎರಡು ಕಪ್ ನೀರಿನಲ್ಲಿ ಸ್ವಲ್ಪ ಪುದೀನಾ ಎಣ್ಣೆಯನ್ನು ಸೇರಿಸಿ ಮತ್ತು ಇರುವೆ ಇರುವಲ್ಲಿ ಸಿಂಪಡಿಸಿ. ಸಿಂಪಡಿಸುವಾಗ ಸಾಕುಪ್ರಾಣಿಗಳನ್ನು ಅವುಗಳಿಂದ ದೂರವಿರಿಸಲು ಮರೆಯಬೇಡಿ.

ಹಾಗೆಯೇ ಎರಡು ಲೋಟ ನೀರಿನಲ್ಲಿ ಟ್ರೀ ಆಯಿಲ್ ಸೇರಿಸಿ ಚಿಮುಕಿಸಿ, ಈ ನೀರಿನಲ್ಲಿ ಹತ್ತಿ ಉಂಡೆಗಳನ್ನು ಅದ್ದಿ ಅಡುಗೆ ಮನೆಯಲ್ಲಿಟ್ಟರೆ ಒಳ್ಳೆಯ ಫಲಿತಾಂಶ ಸಿಗುತ್ತದೆ.

ದಾಲ್ಚಿನ್ನಿ ಇರುವೆಗಳನ್ನು ತೊಡೆದುಹಾಕಲು ಸಹ ಸಹಾಯ ಮಾಡುತ್ತದೆ. ಹತ್ತಿಯ ಉಂಡೆಗಳನ್ನು ದಾಲ್ಚಿನ್ನಿ ಎಣ್ಣೆಯಲ್ಲಿ ಅದ್ದಿ ಇರುವೆಗಳು ಓಡಾಡುವ ಸ್ಥಳಗಳಲ್ಲಿ ಇಟ್ಟರೆ ಅವು ಬರದಂತೆ ತಡೆಯುತ್ತವೆ.

ಬಿಳಿ ವಿನೆಗರ್ ಅನ್ನು ಇರುವೆಗಳಿರುವಲ್ಲಿ ಸಿಂಪಡಿಸಬಹುದು ಮತ್ತು ಉತ್ತಮ ಫಲಿತಾಂಶವನ್ನು ಕಾಣಬಹುದು.

ಹಾಗೆಯೇ ಎರಡು ಲೋಟ ನೀರಿಗೆ ಬೇವಿನ ಎಣ್ಣೆ ಹಾಕಿ ಬಾಟಲಿಯಲ್ಲಿ ಸ್ಪ್ರೇ ಮಾಡಿದರೆ ಇರುವೆಗಳು ನಿಮ್ಮ ಬರುವುದಿಲ್ಲ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 10:48 am, Mon, 15 May 23

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ