AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Appple Jilebi Recipe : ಬಾಯಲ್ಲಿ ನೀರೂರಿಸುವ ಸೇಬು ಜಿಲೇಬಿ, ಇಲ್ಲಿದೆ ಸುಲಭ ಪಾಕವಿಧಾನ

ಸಿಹಿ ತಿಂಡಿ ಅಂದರೆ ಯಾರಿಗೆ ತಾನೇ ಇಷ್ಟ ಹೇಳಿ, ಕೆಲವರಂತೂ ಬೆಳಗ್ಗೆ ಎದ್ದ ಕೂಡಲೇ ಸಿಹಿ ತಿನಿಸುಗಳನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಅದರಲ್ಲಿಯು ಈ ಜಿಲೇಬಿ ಬಹುತೇಕರ ಫೇವರಿಟ್ ತಿನಿಸುಗಳಾಗಿ ಒಂದಾಗಿದ್ದು, ಇದನ್ನು ಎಲ್ಲರೂ ಸವಿದಿರುತ್ತಾರೆ. ಆದರೆ ಗರಿಗರಿಯಾದ ಸೇಬು ಜಿಲೇಬಿಯನ್ನು ತಿಂದಿರಲು ಸಾಧ್ಯವಿಲ್ಲ. ಮನೆಯಲ್ಲಿ ಸೇಬು ಹಣ್ಣಿದ್ದರೆ ಈ ಸಿಹಿ ತಿನಿಸನ್ನು ಒಮ್ಮೆ ಟ್ರೈ ಮಾಡಬಹುದು. ಹಾಗಾದ್ರೆ ಈ ಸೇಬು ಜಿಲೇಬಿಯ ಸುಲಭ ಪಾಕವಿಧಾನ ಇಲ್ಲಿದೆ.

ಸಾಯಿನಂದಾ
| Edited By: |

Updated on: Oct 24, 2024 | 3:16 PM

Share

ಜಿಲೇಬಿ ಅಂದ್ರೆ ಸಾಕು, ಬಾಯಲ್ಲಿ ನೀರೂರುತ್ತದೆ, ತಟ್ಟೆ ತುಂಬಾ ಈ ಸಿಹಿ ತಿಂಡಿಯನ್ನು ತಂದಿಟ್ಟರೆ ಸವಿಯುತ್ತಾ ತಿನ್ನುವವರೇ ಜಾಸ್ತಿ. ಅದರಲ್ಲಿ ಗರಿ ಗರಿಯಾಗಿರೋ ಈ ಬಿಸಿ ಬಿಸಿ ಜಿಲೇಬಿ ಕೊಟ್ಟರಂತೂ ಬೇಡ ಅನ್ನೋದಕ್ಕೆ ಮನಸ್ಸೇ ಆಗಲ್ಲ. ನೀವು ಹಳದಿ ಅಥವಾ ಕೇಸರಿ ಬಣ್ಣದ ಆಕರ್ಷಕ ಹಾಗೂ ರುಚಿಕರ ಜಿಲೇಬಿಯನ್ನು ಸವಿದ್ದೀರಬಹುದು. ಆದರೆ ಈ ಸೇಬು ಜಿಲೇಬಿಯನ್ನು ಒಮ್ಮೆಯಾದರೂ ತಿಂದಿರಲು ಸಾಧ್ಯವೇ ಇಲ್ಲ. ವಿಭಿನ್ನ ರುಚಿಯನ್ನು ಹೊಂದಿರುವ ಈ ಸಿಹಿ ತಿನಿಸನ್ನು ಮನೆಯಲ್ಲೇ ಮಾಡಿ ಸವಿಯಬಹುದು.

ಸೇಬು ಜಿಲೇಬಿ ಮಾಡಲು ಬೇಕಾಗುವ ಸಾಮಗ್ರಿಗಳು

* ಎರಡು ಸೇಬು

* ಮೂರು ಕಪ್ ಮೈದಾ

* ಎರಡು ಚಮಚ ಸಕ್ಕರೆ

* ಎರಡು ಚಮಚ ಎಣ್ಣೆ

* ಒಂದು ಕಪ್ ನೀರು

* ಒಂದು ಚಮಚ ನಿಂಬೆ ರಸ

* ಏಲಕ್ಕಿ ಪುಡಿ

* ಗೋಡಂಬಿ

* ರೋಸ್ ವಾಟರ್ (ಗುಲಾಬಿ ನೀರು)

ಸೇಬು ಜಿಲೇಬಿ ಮಾಡುವ ವಿಧಾನ

* ಮೊದಲಿಗೆ ಒಂದು ಪಾತ್ರೆಯಲ್ಲಿ ನೀರು ಮತ್ತು ಸಕ್ಕರೆಯನ್ನು ಬೆರೆಸಿ, ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ.

* ಆ ಬಳಿಕ ಮತ್ತೊಂದು ಪಾತ್ರೆಯಲ್ಲಿ ಹಿಟ್ಟು, ಎಣ್ಣೆ, ಸಕ್ಕರೆ ನೀರನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಂಡು ಪಕ್ಕದಲ್ಲಿ ಇರಿಸಿಕೊಳ್ಳಿ.

* ತದನಂತರದಲ್ಲಿ ಮತ್ತೊಂದು ಪಾತ್ರೆಯಲ್ಲಿ ಸಕ್ಕರೆ ನೀರಿನ ಪಾಕ ಮಾಡಿಕೊಳ್ಳಿ. ಅದಕ್ಕೆ ನಿಂಬೆ ರಸ, ರೋಸ್ ವಾಟರ್ ಮತ್ತು ಏಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಕುದಿಸಿಕೊಳ್ಳಿ.

* ಈಗ ಸೇಬನ್ನು ತೆಳುವಾದ ಹೋಳುಗಳಾಗಿ ಕತ್ತರಿಸಿಕೊಳ್ಳಿ. ಈ ಹೋಳುಗಳನ್ನು ಮೈದಾ ಮಿಶ್ರಣದಲ್ಲಿ ಅದ್ದಿ ಎಣ್ಣೆಯಲ್ಲಿ ಕರಿಯಿರಿ.

* ಈಗಾಗಲೇ ಕರಿದ ಈ ಸೇಬುಗಳನ್ನು ಸಕ್ಕರೆ ಪಾಕದಲ್ಲಿ ಹಾಕಿ ಸ್ವಲ್ಪ ಸಮಯದವರೆಗೆ ಹಾಗೆ ಇಟ್ಟರೆ ಸೇಬು ಜಿಲೇಬಿ ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​