AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Appple Jilebi Recipe : ಬಾಯಲ್ಲಿ ನೀರೂರಿಸುವ ಸೇಬು ಜಿಲೇಬಿ, ಇಲ್ಲಿದೆ ಸುಲಭ ಪಾಕವಿಧಾನ

ಸಿಹಿ ತಿಂಡಿ ಅಂದರೆ ಯಾರಿಗೆ ತಾನೇ ಇಷ್ಟ ಹೇಳಿ, ಕೆಲವರಂತೂ ಬೆಳಗ್ಗೆ ಎದ್ದ ಕೂಡಲೇ ಸಿಹಿ ತಿನಿಸುಗಳನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಅದರಲ್ಲಿಯು ಈ ಜಿಲೇಬಿ ಬಹುತೇಕರ ಫೇವರಿಟ್ ತಿನಿಸುಗಳಾಗಿ ಒಂದಾಗಿದ್ದು, ಇದನ್ನು ಎಲ್ಲರೂ ಸವಿದಿರುತ್ತಾರೆ. ಆದರೆ ಗರಿಗರಿಯಾದ ಸೇಬು ಜಿಲೇಬಿಯನ್ನು ತಿಂದಿರಲು ಸಾಧ್ಯವಿಲ್ಲ. ಮನೆಯಲ್ಲಿ ಸೇಬು ಹಣ್ಣಿದ್ದರೆ ಈ ಸಿಹಿ ತಿನಿಸನ್ನು ಒಮ್ಮೆ ಟ್ರೈ ಮಾಡಬಹುದು. ಹಾಗಾದ್ರೆ ಈ ಸೇಬು ಜಿಲೇಬಿಯ ಸುಲಭ ಪಾಕವಿಧಾನ ಇಲ್ಲಿದೆ.

ಸಾಯಿನಂದಾ
| Edited By: |

Updated on: Oct 24, 2024 | 3:16 PM

Share

ಜಿಲೇಬಿ ಅಂದ್ರೆ ಸಾಕು, ಬಾಯಲ್ಲಿ ನೀರೂರುತ್ತದೆ, ತಟ್ಟೆ ತುಂಬಾ ಈ ಸಿಹಿ ತಿಂಡಿಯನ್ನು ತಂದಿಟ್ಟರೆ ಸವಿಯುತ್ತಾ ತಿನ್ನುವವರೇ ಜಾಸ್ತಿ. ಅದರಲ್ಲಿ ಗರಿ ಗರಿಯಾಗಿರೋ ಈ ಬಿಸಿ ಬಿಸಿ ಜಿಲೇಬಿ ಕೊಟ್ಟರಂತೂ ಬೇಡ ಅನ್ನೋದಕ್ಕೆ ಮನಸ್ಸೇ ಆಗಲ್ಲ. ನೀವು ಹಳದಿ ಅಥವಾ ಕೇಸರಿ ಬಣ್ಣದ ಆಕರ್ಷಕ ಹಾಗೂ ರುಚಿಕರ ಜಿಲೇಬಿಯನ್ನು ಸವಿದ್ದೀರಬಹುದು. ಆದರೆ ಈ ಸೇಬು ಜಿಲೇಬಿಯನ್ನು ಒಮ್ಮೆಯಾದರೂ ತಿಂದಿರಲು ಸಾಧ್ಯವೇ ಇಲ್ಲ. ವಿಭಿನ್ನ ರುಚಿಯನ್ನು ಹೊಂದಿರುವ ಈ ಸಿಹಿ ತಿನಿಸನ್ನು ಮನೆಯಲ್ಲೇ ಮಾಡಿ ಸವಿಯಬಹುದು.

ಸೇಬು ಜಿಲೇಬಿ ಮಾಡಲು ಬೇಕಾಗುವ ಸಾಮಗ್ರಿಗಳು

* ಎರಡು ಸೇಬು

* ಮೂರು ಕಪ್ ಮೈದಾ

* ಎರಡು ಚಮಚ ಸಕ್ಕರೆ

* ಎರಡು ಚಮಚ ಎಣ್ಣೆ

* ಒಂದು ಕಪ್ ನೀರು

* ಒಂದು ಚಮಚ ನಿಂಬೆ ರಸ

* ಏಲಕ್ಕಿ ಪುಡಿ

* ಗೋಡಂಬಿ

* ರೋಸ್ ವಾಟರ್ (ಗುಲಾಬಿ ನೀರು)

ಸೇಬು ಜಿಲೇಬಿ ಮಾಡುವ ವಿಧಾನ

* ಮೊದಲಿಗೆ ಒಂದು ಪಾತ್ರೆಯಲ್ಲಿ ನೀರು ಮತ್ತು ಸಕ್ಕರೆಯನ್ನು ಬೆರೆಸಿ, ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ.

* ಆ ಬಳಿಕ ಮತ್ತೊಂದು ಪಾತ್ರೆಯಲ್ಲಿ ಹಿಟ್ಟು, ಎಣ್ಣೆ, ಸಕ್ಕರೆ ನೀರನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿಕೊಂಡು ಪಕ್ಕದಲ್ಲಿ ಇರಿಸಿಕೊಳ್ಳಿ.

* ತದನಂತರದಲ್ಲಿ ಮತ್ತೊಂದು ಪಾತ್ರೆಯಲ್ಲಿ ಸಕ್ಕರೆ ನೀರಿನ ಪಾಕ ಮಾಡಿಕೊಳ್ಳಿ. ಅದಕ್ಕೆ ನಿಂಬೆ ರಸ, ರೋಸ್ ವಾಟರ್ ಮತ್ತು ಏಲಕ್ಕಿ ಪುಡಿ ಸೇರಿಸಿ ಚೆನ್ನಾಗಿ ಕುದಿಸಿಕೊಳ್ಳಿ.

* ಈಗ ಸೇಬನ್ನು ತೆಳುವಾದ ಹೋಳುಗಳಾಗಿ ಕತ್ತರಿಸಿಕೊಳ್ಳಿ. ಈ ಹೋಳುಗಳನ್ನು ಮೈದಾ ಮಿಶ್ರಣದಲ್ಲಿ ಅದ್ದಿ ಎಣ್ಣೆಯಲ್ಲಿ ಕರಿಯಿರಿ.

* ಈಗಾಗಲೇ ಕರಿದ ಈ ಸೇಬುಗಳನ್ನು ಸಕ್ಕರೆ ಪಾಕದಲ್ಲಿ ಹಾಕಿ ಸ್ವಲ್ಪ ಸಮಯದವರೆಗೆ ಹಾಗೆ ಇಟ್ಟರೆ ಸೇಬು ಜಿಲೇಬಿ ಸವಿಯಲು ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು