AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಶಿನ ಎಲೆಯ ಘಮ ಬೀರುವ ಕರಾವಳಿ ಸಾಂಪ್ರಾದಾಯಿಕ ಸಿಹಿ ತಿಂಡಿ ಅರಶಿನ ಎಲೆ ಕಡುಬು, ಮಾಡುವ ವಿಧಾನ ಇಲ್ಲಿದೆ

ಕರಾವಳಿ ಪ್ರದೇಶಗಳಲ್ಲಿ ಮಾಡುವ ವಿವಿಧ ತಿಂಡಿ ತಿನಿಸುಗಳ ಸಾಲಿಗೆ ಸೇರಿರುವುದು ಅರಶಿನ ಎಲೆ ಕಡುಬು. ಈ ಕಡುಬು ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಬಹಳ ಫೇಮಸ್ ಆಗಿದ್ದು, ಈ ಅರಶಿನ ಎಲೆಯ ಘಮದೊಂದಿಗೆ ಈ ಕಡುಬನ್ನು ಸವಿಯುತ್ತಿದ್ದರೆ ಮನಸ್ಸಿಗೆ ಆನಂದವೋ ಆನಂದ. ಹಾಗಾದ್ರೆ ಕರಾವಳಿ ಶೈಲಿಯ ಅರಶಿನ ಎಲೆಯ ಕಡುಬು ಮಾಡುವ ವಿಧಾನ ಇಲ್ಲಿದೆ.

ಅರಶಿನ ಎಲೆಯ ಘಮ ಬೀರುವ ಕರಾವಳಿ ಸಾಂಪ್ರಾದಾಯಿಕ ಸಿಹಿ ತಿಂಡಿ ಅರಶಿನ ಎಲೆ ಕಡುಬು, ಮಾಡುವ ವಿಧಾನ ಇಲ್ಲಿದೆ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 24, 2024 | 2:06 PM

ಸಿಹಿ ತಿಂಡಿಯನ್ನು ಎಲ್ಲರೂ ಕೂಡ ಇಷ್ಟ ಪಡುವವರೇ. ಕರಾವಳಿ ಪ್ರದೇಶಗಳಲ್ಲಿ ಮಾಡುವ ಸಿಹಿ ತಿಂಡಿಗಳಲ್ಲಿ ಅರಶಿನ ಎಲೆ ಕಡುಬು ಕೂಡ ಒಂದಾಗಿದ್ದು, ಇದನ್ನು ಹಬ್ಬದ ದಿನ ಮಾತ್ರವಲ್ಲದೇ ಬೆಳಗ್ಗಿನ ತಿಂಡಿಗೆ ಮಾಡಿ ಸವಿಯಬಹುದು. ಅರಶಿನ ಎಲೆಯ ಕಡುಬಿನ ರುಚಿಯನ್ನು ಒಮ್ಮೆ ನಾಲಿಗೆಗೆ ಹತ್ತಿಸಿಕೊಂಡರೆ, ಮತ್ತೆ ಮಿಸ್ ಮಾಡಿಕೊಳ್ಳುವುದೇ ಇಲ್ಲ. ಸಾಂಪ್ರಾದಾಯಿಕ ಅಡುಗೆಯಲ್ಲಿ ಒಂದಾಗಿರುವ ಈ ಅರಶಿನ ಎಲೆಯ ಕಡುಬು ಮಾಡಲು ಹೆಚ್ಚು ಸಮಯವನ್ನು ತೆಗೆದುಕೊಂಡರೂ ರುಚಿಯ ವಿಚಾರದಲ್ಲಿ ಬೇರೆ ಸಿಹಿ ತಿಂಡಿಗಳನ್ನು ಮೀರಿಸುತ್ತದೆ.

ಅರಶಿನ ಎಲೆ ಕಡುಬು ಮಾಡಲು ಬೇಕಾಗುವ ಸಾಮಾಗ್ರಿಗಳು:

ದೋಸೆ ಅಕ್ಕಿ- 2 ಲೋಟ, (ಇದಕ್ಕೆ ಮಂಗಳೂರು ರೈಸ್‌ ಅಥವಾ ಕುಚ್ಚಿಲಕ್ಕಿಯನ್ನು ಬಳಸಬಹುದು), ಒಂದು ಲೋಟದಷ್ಟು ಬೆಲ್ಲ, ಒಂದು ಲೋಟ ಹಸಿ ತೆಂಗಿನಕಾಯಿ ತುರಿ, ತುಪ್ಪ, ಅರಶಿನ ಎಲೆ, ರುಚಿಗೆ ತಕ್ಕಷ್ಟು ಉಪ್ಪು, ಎಳ್ಳು.

ಇದನ್ನೂ ಓದಿ: ಕೂದಲಿನ ನಾನಾ ರೀತಿಯ ಸಮಸ್ಯೆಗಳಿಂದ ಬೇಸೆತ್ತು ಹೋಗಿದ್ದೀರಾ

ಅರಶಿನ ಎಲೆ ಕಡುಬು ಮಾಡುವ ವಿಧಾನ

* ಕುಚ್ಚಿಲಕ್ಕಿಯಾದರೆ ಹಿಂದಿನ ದಿನ ರಾತ್ರಿ ಅಕ್ಕಿ ನೆನೆಹಾಕಬೇಕು. ದೋಸೆ ಅಕ್ಕಿಯಾದರೆ ಮೂರು ಗಂಟೆ ನೆನೆಹಾಕಿದರೆ ಸಾಕು.

* ನೆನೆಸಿಟ್ಟ ಅಕ್ಕಿಯನ್ನು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಗಟ್ಟಿಯಾಗಿ ರುಬ್ಬಿಕೊಳ್ಳಬೇಕು.

* ಆ ಬಳಿಕ ಬೆಲ್ಲ ತುರಿದು, ಅದಕ್ಕೆ 1 ಕಪ್ ಕಾಯಿತುರಿ, ತುಪ್ಪ ಸೇರಿಸಿ ಮಿಶ್ರಣ ಮಾಡಿಟ್ಟುಕೊಳ್ಳಿ. ಈ ಮಿಶ್ರಣಕ್ಕೆ ಹುರಿದ ಕಪ್ಪು ಎಳ್ಳು ಹಾಕಿ.

* ನಂತರದಲ್ಲಿ ಅರಶಿನ ಎಲೆ ತೆಗೆದುಕೊಂಡು ಅದಕ್ಕೆ ಅಕ್ಕಿ ಹಿಟ್ಟನ್ನು ತೆಳ್ಳಗೆ ಸವರಿಕೊಳ್ಳಿ. ಈಗಾಗಲೇ ಮಿಶ್ರಣ ಮಾಡಿಟ್ಟ ಕಾಯಿತುರಿಯನ್ನು ಅಕ್ಕಿ ಹಿಟ್ಟಿನ ಮೇಲೆ ಹಾಕಿ ಎಲೆಯನ್ನು ಮಡಚಿಕೊಳ್ಳಿ.

* ಇಡ್ಲಿ ಪಾತ್ರೆಯಲ್ಲಿಟ್ಟು 10-15 ನಿಮಿಷ ಕಾಲ ಹಬೆಯಲ್ಲಿ ಬೇಯಿಸಿದರೆ ಘಮ ಘಮಿಸುವ ಅರಶಿನ ಎಲೆ ಕಡುಬು ಸವಿಯಲು ಸಿದ್ಧ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ರಿಹ್ಯಾಬ್ ಸೆಂಟರ್​ಗಳ ಮೇಲೆ ಮಾನವ ಹಕ್ಕುಗಳ ಆಯೋಗ ದಾಳಿ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಮರದ ಕೊಂಬೆ ಬಿದ್ದು ಅಕ್ಷಯ್​ ಬ್ರೈನ್ ಡೆಡ್:ಮೊಮ್ಮಗನಿಗಾಗಿ ಅಜ್ಜ-ಅಜ್ಜಿ ಪೂಜೆ
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು