ಅರಶಿನ ಎಲೆಯ ಘಮ ಬೀರುವ ಕರಾವಳಿ ಸಾಂಪ್ರಾದಾಯಿಕ ಸಿಹಿ ತಿಂಡಿ ಅರಶಿನ ಎಲೆ ಕಡುಬು, ಮಾಡುವ ವಿಧಾನ ಇಲ್ಲಿದೆ

ಕರಾವಳಿ ಪ್ರದೇಶಗಳಲ್ಲಿ ಮಾಡುವ ವಿವಿಧ ತಿಂಡಿ ತಿನಿಸುಗಳ ಸಾಲಿಗೆ ಸೇರಿರುವುದು ಅರಶಿನ ಎಲೆ ಕಡುಬು. ಈ ಕಡುಬು ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಬಹಳ ಫೇಮಸ್ ಆಗಿದ್ದು, ಈ ಅರಶಿನ ಎಲೆಯ ಘಮದೊಂದಿಗೆ ಈ ಕಡುಬನ್ನು ಸವಿಯುತ್ತಿದ್ದರೆ ಮನಸ್ಸಿಗೆ ಆನಂದವೋ ಆನಂದ. ಹಾಗಾದ್ರೆ ಕರಾವಳಿ ಶೈಲಿಯ ಅರಶಿನ ಎಲೆಯ ಕಡುಬು ಮಾಡುವ ವಿಧಾನ ಇಲ್ಲಿದೆ.

ಅರಶಿನ ಎಲೆಯ ಘಮ ಬೀರುವ ಕರಾವಳಿ ಸಾಂಪ್ರಾದಾಯಿಕ ಸಿಹಿ ತಿಂಡಿ ಅರಶಿನ ಎಲೆ ಕಡುಬು, ಮಾಡುವ ವಿಧಾನ ಇಲ್ಲಿದೆ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 24, 2024 | 2:06 PM

ಸಿಹಿ ತಿಂಡಿಯನ್ನು ಎಲ್ಲರೂ ಕೂಡ ಇಷ್ಟ ಪಡುವವರೇ. ಕರಾವಳಿ ಪ್ರದೇಶಗಳಲ್ಲಿ ಮಾಡುವ ಸಿಹಿ ತಿಂಡಿಗಳಲ್ಲಿ ಅರಶಿನ ಎಲೆ ಕಡುಬು ಕೂಡ ಒಂದಾಗಿದ್ದು, ಇದನ್ನು ಹಬ್ಬದ ದಿನ ಮಾತ್ರವಲ್ಲದೇ ಬೆಳಗ್ಗಿನ ತಿಂಡಿಗೆ ಮಾಡಿ ಸವಿಯಬಹುದು. ಅರಶಿನ ಎಲೆಯ ಕಡುಬಿನ ರುಚಿಯನ್ನು ಒಮ್ಮೆ ನಾಲಿಗೆಗೆ ಹತ್ತಿಸಿಕೊಂಡರೆ, ಮತ್ತೆ ಮಿಸ್ ಮಾಡಿಕೊಳ್ಳುವುದೇ ಇಲ್ಲ. ಸಾಂಪ್ರಾದಾಯಿಕ ಅಡುಗೆಯಲ್ಲಿ ಒಂದಾಗಿರುವ ಈ ಅರಶಿನ ಎಲೆಯ ಕಡುಬು ಮಾಡಲು ಹೆಚ್ಚು ಸಮಯವನ್ನು ತೆಗೆದುಕೊಂಡರೂ ರುಚಿಯ ವಿಚಾರದಲ್ಲಿ ಬೇರೆ ಸಿಹಿ ತಿಂಡಿಗಳನ್ನು ಮೀರಿಸುತ್ತದೆ.

ಅರಶಿನ ಎಲೆ ಕಡುಬು ಮಾಡಲು ಬೇಕಾಗುವ ಸಾಮಾಗ್ರಿಗಳು:

ದೋಸೆ ಅಕ್ಕಿ- 2 ಲೋಟ, (ಇದಕ್ಕೆ ಮಂಗಳೂರು ರೈಸ್‌ ಅಥವಾ ಕುಚ್ಚಿಲಕ್ಕಿಯನ್ನು ಬಳಸಬಹುದು), ಒಂದು ಲೋಟದಷ್ಟು ಬೆಲ್ಲ, ಒಂದು ಲೋಟ ಹಸಿ ತೆಂಗಿನಕಾಯಿ ತುರಿ, ತುಪ್ಪ, ಅರಶಿನ ಎಲೆ, ರುಚಿಗೆ ತಕ್ಕಷ್ಟು ಉಪ್ಪು, ಎಳ್ಳು.

ಇದನ್ನೂ ಓದಿ: ಕೂದಲಿನ ನಾನಾ ರೀತಿಯ ಸಮಸ್ಯೆಗಳಿಂದ ಬೇಸೆತ್ತು ಹೋಗಿದ್ದೀರಾ

ಅರಶಿನ ಎಲೆ ಕಡುಬು ಮಾಡುವ ವಿಧಾನ

* ಕುಚ್ಚಿಲಕ್ಕಿಯಾದರೆ ಹಿಂದಿನ ದಿನ ರಾತ್ರಿ ಅಕ್ಕಿ ನೆನೆಹಾಕಬೇಕು. ದೋಸೆ ಅಕ್ಕಿಯಾದರೆ ಮೂರು ಗಂಟೆ ನೆನೆಹಾಕಿದರೆ ಸಾಕು.

* ನೆನೆಸಿಟ್ಟ ಅಕ್ಕಿಯನ್ನು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಗಟ್ಟಿಯಾಗಿ ರುಬ್ಬಿಕೊಳ್ಳಬೇಕು.

* ಆ ಬಳಿಕ ಬೆಲ್ಲ ತುರಿದು, ಅದಕ್ಕೆ 1 ಕಪ್ ಕಾಯಿತುರಿ, ತುಪ್ಪ ಸೇರಿಸಿ ಮಿಶ್ರಣ ಮಾಡಿಟ್ಟುಕೊಳ್ಳಿ. ಈ ಮಿಶ್ರಣಕ್ಕೆ ಹುರಿದ ಕಪ್ಪು ಎಳ್ಳು ಹಾಕಿ.

* ನಂತರದಲ್ಲಿ ಅರಶಿನ ಎಲೆ ತೆಗೆದುಕೊಂಡು ಅದಕ್ಕೆ ಅಕ್ಕಿ ಹಿಟ್ಟನ್ನು ತೆಳ್ಳಗೆ ಸವರಿಕೊಳ್ಳಿ. ಈಗಾಗಲೇ ಮಿಶ್ರಣ ಮಾಡಿಟ್ಟ ಕಾಯಿತುರಿಯನ್ನು ಅಕ್ಕಿ ಹಿಟ್ಟಿನ ಮೇಲೆ ಹಾಕಿ ಎಲೆಯನ್ನು ಮಡಚಿಕೊಳ್ಳಿ.

* ಇಡ್ಲಿ ಪಾತ್ರೆಯಲ್ಲಿಟ್ಟು 10-15 ನಿಮಿಷ ಕಾಲ ಹಬೆಯಲ್ಲಿ ಬೇಯಿಸಿದರೆ ಘಮ ಘಮಿಸುವ ಅರಶಿನ ಎಲೆ ಕಡುಬು ಸವಿಯಲು ಸಿದ್ಧ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಹಮಾಸ್ ಮುಖ್ಯಸ್ಥ ಯಾಹ್ಯಾ ಸಿನ್ವಾರ್ ಸಾವಿನ ಕ್ಷಣದ ವಿಡಿಯೋ ವೈರಲ್
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
ಯಲಾ ಕುನ್ನಿ ಚಿತ್ರದಲ್ಲಿ ಕೋಮಲ್ ಜತೆ ಮಿತ್ರಾಗೆ ಸಿಕ್ಕಿದೆ ಡಿಫರೆಂಟ್ ಪಾತ್ರ
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
'ಡಿ. 9ರೊಳಗೆ ನಿರ್ಧಾರ ಪ್ರಕಟಿಸದಿದ್ದರೆ ಸುವರ್ಣ ಸೌಧಕ್ಕೆ ಮುತ್ತಿಗೆ'
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ತೆಲಂಗಾಣದಲ್ಲಿ ಮಿತಿ ಮೀರಿದ ಕೋಳಿಗಳ ಕಳ್ಳತನ
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ದೀಪಕ್ ಅರಸ್​ಗೆ ನಿಜಕ್ಕೂ ಏನಾಗಿತ್ತು? ಮಾಹಿತಿ ನೀಡಿದ ಅಮೂಲ್ಯ ಪತಿ ಜಗದೀಶ್
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಚನ್ನಪಟ್ಟಣಕ್ಕೆ ನಾನೇ ಅಭ್ಯರ್ಥಿ ಅಂತ 53ನೇ ಸಲ ಹೇಳಿದ ಡಿಕೆ ಶಿವಕುಮಾರ್!
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ