AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಶಿನ ಎಲೆಯ ಘಮ ಬೀರುವ ಕರಾವಳಿ ಸಾಂಪ್ರಾದಾಯಿಕ ಸಿಹಿ ತಿಂಡಿ ಅರಶಿನ ಎಲೆ ಕಡುಬು, ಮಾಡುವ ವಿಧಾನ ಇಲ್ಲಿದೆ

ಕರಾವಳಿ ಪ್ರದೇಶಗಳಲ್ಲಿ ಮಾಡುವ ವಿವಿಧ ತಿಂಡಿ ತಿನಿಸುಗಳ ಸಾಲಿಗೆ ಸೇರಿರುವುದು ಅರಶಿನ ಎಲೆ ಕಡುಬು. ಈ ಕಡುಬು ದಕ್ಷಿಣ ಕನ್ನಡ, ಉಡುಪಿ ಭಾಗಗಳಲ್ಲಿ ಬಹಳ ಫೇಮಸ್ ಆಗಿದ್ದು, ಈ ಅರಶಿನ ಎಲೆಯ ಘಮದೊಂದಿಗೆ ಈ ಕಡುಬನ್ನು ಸವಿಯುತ್ತಿದ್ದರೆ ಮನಸ್ಸಿಗೆ ಆನಂದವೋ ಆನಂದ. ಹಾಗಾದ್ರೆ ಕರಾವಳಿ ಶೈಲಿಯ ಅರಶಿನ ಎಲೆಯ ಕಡುಬು ಮಾಡುವ ವಿಧಾನ ಇಲ್ಲಿದೆ.

ಅರಶಿನ ಎಲೆಯ ಘಮ ಬೀರುವ ಕರಾವಳಿ ಸಾಂಪ್ರಾದಾಯಿಕ ಸಿಹಿ ತಿಂಡಿ ಅರಶಿನ ಎಲೆ ಕಡುಬು, ಮಾಡುವ ವಿಧಾನ ಇಲ್ಲಿದೆ
ಸಾಯಿನಂದಾ
| Edited By: |

Updated on: Jan 24, 2024 | 2:06 PM

Share

ಸಿಹಿ ತಿಂಡಿಯನ್ನು ಎಲ್ಲರೂ ಕೂಡ ಇಷ್ಟ ಪಡುವವರೇ. ಕರಾವಳಿ ಪ್ರದೇಶಗಳಲ್ಲಿ ಮಾಡುವ ಸಿಹಿ ತಿಂಡಿಗಳಲ್ಲಿ ಅರಶಿನ ಎಲೆ ಕಡುಬು ಕೂಡ ಒಂದಾಗಿದ್ದು, ಇದನ್ನು ಹಬ್ಬದ ದಿನ ಮಾತ್ರವಲ್ಲದೇ ಬೆಳಗ್ಗಿನ ತಿಂಡಿಗೆ ಮಾಡಿ ಸವಿಯಬಹುದು. ಅರಶಿನ ಎಲೆಯ ಕಡುಬಿನ ರುಚಿಯನ್ನು ಒಮ್ಮೆ ನಾಲಿಗೆಗೆ ಹತ್ತಿಸಿಕೊಂಡರೆ, ಮತ್ತೆ ಮಿಸ್ ಮಾಡಿಕೊಳ್ಳುವುದೇ ಇಲ್ಲ. ಸಾಂಪ್ರಾದಾಯಿಕ ಅಡುಗೆಯಲ್ಲಿ ಒಂದಾಗಿರುವ ಈ ಅರಶಿನ ಎಲೆಯ ಕಡುಬು ಮಾಡಲು ಹೆಚ್ಚು ಸಮಯವನ್ನು ತೆಗೆದುಕೊಂಡರೂ ರುಚಿಯ ವಿಚಾರದಲ್ಲಿ ಬೇರೆ ಸಿಹಿ ತಿಂಡಿಗಳನ್ನು ಮೀರಿಸುತ್ತದೆ.

ಅರಶಿನ ಎಲೆ ಕಡುಬು ಮಾಡಲು ಬೇಕಾಗುವ ಸಾಮಾಗ್ರಿಗಳು:

ದೋಸೆ ಅಕ್ಕಿ- 2 ಲೋಟ, (ಇದಕ್ಕೆ ಮಂಗಳೂರು ರೈಸ್‌ ಅಥವಾ ಕುಚ್ಚಿಲಕ್ಕಿಯನ್ನು ಬಳಸಬಹುದು), ಒಂದು ಲೋಟದಷ್ಟು ಬೆಲ್ಲ, ಒಂದು ಲೋಟ ಹಸಿ ತೆಂಗಿನಕಾಯಿ ತುರಿ, ತುಪ್ಪ, ಅರಶಿನ ಎಲೆ, ರುಚಿಗೆ ತಕ್ಕಷ್ಟು ಉಪ್ಪು, ಎಳ್ಳು.

ಇದನ್ನೂ ಓದಿ: ಕೂದಲಿನ ನಾನಾ ರೀತಿಯ ಸಮಸ್ಯೆಗಳಿಂದ ಬೇಸೆತ್ತು ಹೋಗಿದ್ದೀರಾ

ಅರಶಿನ ಎಲೆ ಕಡುಬು ಮಾಡುವ ವಿಧಾನ

* ಕುಚ್ಚಿಲಕ್ಕಿಯಾದರೆ ಹಿಂದಿನ ದಿನ ರಾತ್ರಿ ಅಕ್ಕಿ ನೆನೆಹಾಕಬೇಕು. ದೋಸೆ ಅಕ್ಕಿಯಾದರೆ ಮೂರು ಗಂಟೆ ನೆನೆಹಾಕಿದರೆ ಸಾಕು.

* ನೆನೆಸಿಟ್ಟ ಅಕ್ಕಿಯನ್ನು ರುಚಿಗೆ ತಕ್ಕಷ್ಟು ಉಪ್ಪು ಹಾಕಿ ಗಟ್ಟಿಯಾಗಿ ರುಬ್ಬಿಕೊಳ್ಳಬೇಕು.

* ಆ ಬಳಿಕ ಬೆಲ್ಲ ತುರಿದು, ಅದಕ್ಕೆ 1 ಕಪ್ ಕಾಯಿತುರಿ, ತುಪ್ಪ ಸೇರಿಸಿ ಮಿಶ್ರಣ ಮಾಡಿಟ್ಟುಕೊಳ್ಳಿ. ಈ ಮಿಶ್ರಣಕ್ಕೆ ಹುರಿದ ಕಪ್ಪು ಎಳ್ಳು ಹಾಕಿ.

* ನಂತರದಲ್ಲಿ ಅರಶಿನ ಎಲೆ ತೆಗೆದುಕೊಂಡು ಅದಕ್ಕೆ ಅಕ್ಕಿ ಹಿಟ್ಟನ್ನು ತೆಳ್ಳಗೆ ಸವರಿಕೊಳ್ಳಿ. ಈಗಾಗಲೇ ಮಿಶ್ರಣ ಮಾಡಿಟ್ಟ ಕಾಯಿತುರಿಯನ್ನು ಅಕ್ಕಿ ಹಿಟ್ಟಿನ ಮೇಲೆ ಹಾಕಿ ಎಲೆಯನ್ನು ಮಡಚಿಕೊಳ್ಳಿ.

* ಇಡ್ಲಿ ಪಾತ್ರೆಯಲ್ಲಿಟ್ಟು 10-15 ನಿಮಿಷ ಕಾಲ ಹಬೆಯಲ್ಲಿ ಬೇಯಿಸಿದರೆ ಘಮ ಘಮಿಸುವ ಅರಶಿನ ಎಲೆ ಕಡುಬು ಸವಿಯಲು ಸಿದ್ಧ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?
ಮಾಂಗಲ್ಯ ಸರದಲ್ಲಿ ಮುತ್ತು-ಹವಳ ಧರಿಸುವುದರ ಅಸಲಿ ರಹಸ್ಯವೇನು?